‘ನಮ್ಮ ಶಿಕ್ಷಣ ಇಲಾಖೆಯ ವಿಷಯಕ್ಕೆ ಬಂದರೆ, ನಮ್ಮ ರಾಜ್ಯದ ಒಂದೇ ಒಂದು ಮಗು ಕೂಡ ಯೋಗ್ಯ ಶಿಕ್ಷಣದಿಂದ ವಂಚಿತರಾಗಬಾರದು. ಎಲ್ಲ ಮಕ್ಕಳು ಶಾಲೆಗೆ ಬಂದು ಕಲಿಯಬೇಕು. ಮಕ್ಕಳಲ್ಲಿ ದೇಶ ಭಕ್ತಿ, ಸಮಾಜಮುಖಿ ಚಿಂತನೆ ಬೆಳೆಸಬೇಕು. ಈ ದೃಷ್ಟಿಯಿಂದ ಶಿಕ್ಷಣ ಇಲಾಖೆ ಕೆಲಸ ಮಾಡುತ್ತಿದೆ. 2022ರ ವೇಳೆಗೆ ಈ ಗುರಿಗಳನ್ನು ಸಾಧಿಸಬೇಕು ಎಂಬುದು ಇಲಾಖೆಯ ಆಶಯ’ ಎಂದು ಹೇಳಿದರು.