<p>ಗದಗ: ಡಾ. ಎನ್.ವಿ. ಬದಿ ಎಜ್ಯುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಸ್ಎಸ್ಕೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.</p>.<p>ಗದಗ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಎಸ್ಎಸ್ಕೆ ಸಮಾಜದ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಜೂನ್ 7ರಂದು ಬೆಳಿಗ್ಗೆ 10ಕ್ಕೆ ಬೆಟಗೇರಿಯ ಅಂಬಾಭವಾನಿ ದೇವಸ್ಥಾನದ ಮುನ್ನುಬಾಯಿ ಈಶ್ವರಸ ಖೋಡೆ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುವುದು.</p>.<p>2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಶೇ 90 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು.</p>.<p>ಇದೇ ವೇಳೆ, 2025-26ನೇ ಸಾಲಿನಲ್ಲಿ ಬಿಇ, ಎಂಬಿಬಿಎಸ್, ಸಿಎ, ಬಿಎ, ಬಿ.ಎಸ್ಸಿ ಮತ್ತು ಬಿ.ಕಾಂ ಪದವಿ ಕೋರ್ಸ್ಗಳ ಮೊದಲ ಸೆಮಿಸ್ಟರ್ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಯುಪಿಎಸ್ಸಿ ಸ್ಪರ್ಧಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು.</p>.<p>ಅರ್ಹ ವಿದ್ಯಾರ್ಥಿಗಳು ತಮ್ಮ ಭಾವಚಿತ್ರ, ದೃಢೀಕರಿಸಿದ ಅಂಕಪಟ್ಟಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಗಳೊಂದಿಗೆ ಸಂಪರ್ಕ ಸಂಖ್ಯೆ ಸಹಿತವಾಗಿ ಅರ್ಜಿಗಳನ್ನು ಮೇ 29ರೊಳಗೆ ಬೆಟಗೇರಿಯ ಅಂಬಾಭವಾನಿ ದೇವಸ್ಥಾನದ ಕಚೇರಿಗೆ ಸಲ್ಲಿಸಬೇಕು ಎಂದು ಎಸ್ಎಸ್ಕೆ ಸಮಾಜದ ಅಧ್ಯಕ್ಷ ಲೋಕನಾಥ ಬಿ. ಕಬಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-23-602981517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ಡಾ. ಎನ್.ವಿ. ಬದಿ ಎಜ್ಯುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಸ್ಎಸ್ಕೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.</p>.<p>ಗದಗ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಎಸ್ಎಸ್ಕೆ ಸಮಾಜದ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಜೂನ್ 7ರಂದು ಬೆಳಿಗ್ಗೆ 10ಕ್ಕೆ ಬೆಟಗೇರಿಯ ಅಂಬಾಭವಾನಿ ದೇವಸ್ಥಾನದ ಮುನ್ನುಬಾಯಿ ಈಶ್ವರಸ ಖೋಡೆ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುವುದು.</p>.<p>2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಶೇ 90 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು.</p>.<p>ಇದೇ ವೇಳೆ, 2025-26ನೇ ಸಾಲಿನಲ್ಲಿ ಬಿಇ, ಎಂಬಿಬಿಎಸ್, ಸಿಎ, ಬಿಎ, ಬಿ.ಎಸ್ಸಿ ಮತ್ತು ಬಿ.ಕಾಂ ಪದವಿ ಕೋರ್ಸ್ಗಳ ಮೊದಲ ಸೆಮಿಸ್ಟರ್ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಯುಪಿಎಸ್ಸಿ ಸ್ಪರ್ಧಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು.</p>.<p>ಅರ್ಹ ವಿದ್ಯಾರ್ಥಿಗಳು ತಮ್ಮ ಭಾವಚಿತ್ರ, ದೃಢೀಕರಿಸಿದ ಅಂಕಪಟ್ಟಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಗಳೊಂದಿಗೆ ಸಂಪರ್ಕ ಸಂಖ್ಯೆ ಸಹಿತವಾಗಿ ಅರ್ಜಿಗಳನ್ನು ಮೇ 29ರೊಳಗೆ ಬೆಟಗೇರಿಯ ಅಂಬಾಭವಾನಿ ದೇವಸ್ಥಾನದ ಕಚೇರಿಗೆ ಸಲ್ಲಿಸಬೇಕು ಎಂದು ಎಸ್ಎಸ್ಕೆ ಸಮಾಜದ ಅಧ್ಯಕ್ಷ ಲೋಕನಾಥ ಬಿ. ಕಬಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-23-602981517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>