<p>ಗದಗ: ‘ಸಾಮಾಜಿಕ ಜೀವಿಯಾಗಿರುವ ವ್ಯಕ್ತಿ ಸಮಾಜ ಚಿಂತನೆಗಳನ್ನು ಒಳಗೊಳ್ಳುವ ಮೂಲಕ ವ್ಯಕ್ತಿಗತ ಪ್ರಗತಿ ಸಾಧಿಸಬೇಕು. ಯುವಕರು ನಿರೀಕ್ಷಿತ ಮಟ್ಟದಲ್ಲಿ ಸ್ಪಂದನಾಶೀಲತೆ ಹೊಂದಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಚಲಿತ ಸಂಗತಿಗಳನ್ನು ಒಳಗೊಂಡು ಈ ಸಮಾವೇಶ ಸಂಘಟಿಸಲಾಗಿತ್ತು. ಯುವಕರಲ್ಲಿ ಜಾಗೃತಿ ಮೂಡಿಸಲು ಗೋಷ್ಠಿಗಳು ಯಶಸ್ವಿಯಾಗಿವೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆದ ಯುವ ಸಾಹಿತ್ಯ ಸಮಾವೇಶದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಓದಿನ ಹರವು ಹೆಚ್ಚಿಸಿಕೊಂಡು ಸಮಾಜದ ಉನ್ನತಿಗಾಗಿ ಶ್ರಮಿಸಬೇಕು’ ಎಂದು ಹೇಳಿದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಪಿ.ಆರ್.ಅಡವಿ ಮಾತನಾಡಿ, ‘ಕನ್ನಡ ಸಾಹಿತ್ಯ ಪರಿಷತ್ತು ಯುವಕರ ಬಳಿಗೆ ತೆರಳಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಯುವಕರು ಆದರ್ಶ ಚಿಂತನೆಗಳ ಬೆಳಕಿನಲ್ಲಿ ಬದುಕನ್ನು ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಆದರ್ಶ ಶಿಕ್ಷಣ ಸಮಿತಿ ಕಾರ್ಯದರ್ಶಿ ಎ.ಡಿ.ಗೋಡಖಿಂಡಿ, ಕೋಶಾಧ್ಯಕ್ಷ ಮುಕುಂದ ಪೋತ್ನಿಸ್, ರೋಟರಿ ಗದಗ ಸೆಂಟ್ರಲ್ ಅಧ್ಯಕ್ಷರಾದ ಚೇತನ ಅಂಗಡಿ, ಸಮ್ಮೇಳನದ ಸಂಚಾಲಕ ಬಾಹುಬಲಿ ಜೈನರ್ ವೇದಿಯಲ್ಲಿದ್ದರು.</p>.<p>ಈ ಸಂದರ್ಭದಲ್ಲಿ ಯುವ ಸಾಧಕರಾದ ಶಿವಾನಂದ ಹಿರೇಮಠ, ನಮ್ರತಾ ಪಾಟೀಲ, ಆಕಾಶ ಮರಿಗೌಡರ, ಪ್ರಸಾದ ಸುತಾರ, ವಾಣಿಶ್ರೀ ಕಲಬುರ್ಗಿ, ಹನುಮಂತ ಕುಲಕರ್ಣಿ, ರಾಹುಲ ರಾಠೋಡ, ಮಾನ್ಯಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.</p>.<p>ರಾಜೇಶ್ವರಿ ಬಡ್ನಿ ನಿರೂಪಿಸಿದರು. ಡಿ.ಎಸ್.ಬಾಪುರಿ ಸ್ವಾಗತಿಸಿದರು. ಸತೀಶಕುಮಾರ ಚನ್ನಪ್ಪಗೌಡರ ವಂದಿಸಿದರು. ಎ.ಎಸ್.ಎಸ್. ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-23-1006842647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಸಾಮಾಜಿಕ ಜೀವಿಯಾಗಿರುವ ವ್ಯಕ್ತಿ ಸಮಾಜ ಚಿಂತನೆಗಳನ್ನು ಒಳಗೊಳ್ಳುವ ಮೂಲಕ ವ್ಯಕ್ತಿಗತ ಪ್ರಗತಿ ಸಾಧಿಸಬೇಕು. ಯುವಕರು ನಿರೀಕ್ಷಿತ ಮಟ್ಟದಲ್ಲಿ ಸ್ಪಂದನಾಶೀಲತೆ ಹೊಂದಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಚಲಿತ ಸಂಗತಿಗಳನ್ನು ಒಳಗೊಂಡು ಈ ಸಮಾವೇಶ ಸಂಘಟಿಸಲಾಗಿತ್ತು. ಯುವಕರಲ್ಲಿ ಜಾಗೃತಿ ಮೂಡಿಸಲು ಗೋಷ್ಠಿಗಳು ಯಶಸ್ವಿಯಾಗಿವೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆದ ಯುವ ಸಾಹಿತ್ಯ ಸಮಾವೇಶದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಓದಿನ ಹರವು ಹೆಚ್ಚಿಸಿಕೊಂಡು ಸಮಾಜದ ಉನ್ನತಿಗಾಗಿ ಶ್ರಮಿಸಬೇಕು’ ಎಂದು ಹೇಳಿದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಪಿ.ಆರ್.ಅಡವಿ ಮಾತನಾಡಿ, ‘ಕನ್ನಡ ಸಾಹಿತ್ಯ ಪರಿಷತ್ತು ಯುವಕರ ಬಳಿಗೆ ತೆರಳಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಯುವಕರು ಆದರ್ಶ ಚಿಂತನೆಗಳ ಬೆಳಕಿನಲ್ಲಿ ಬದುಕನ್ನು ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಆದರ್ಶ ಶಿಕ್ಷಣ ಸಮಿತಿ ಕಾರ್ಯದರ್ಶಿ ಎ.ಡಿ.ಗೋಡಖಿಂಡಿ, ಕೋಶಾಧ್ಯಕ್ಷ ಮುಕುಂದ ಪೋತ್ನಿಸ್, ರೋಟರಿ ಗದಗ ಸೆಂಟ್ರಲ್ ಅಧ್ಯಕ್ಷರಾದ ಚೇತನ ಅಂಗಡಿ, ಸಮ್ಮೇಳನದ ಸಂಚಾಲಕ ಬಾಹುಬಲಿ ಜೈನರ್ ವೇದಿಯಲ್ಲಿದ್ದರು.</p>.<p>ಈ ಸಂದರ್ಭದಲ್ಲಿ ಯುವ ಸಾಧಕರಾದ ಶಿವಾನಂದ ಹಿರೇಮಠ, ನಮ್ರತಾ ಪಾಟೀಲ, ಆಕಾಶ ಮರಿಗೌಡರ, ಪ್ರಸಾದ ಸುತಾರ, ವಾಣಿಶ್ರೀ ಕಲಬುರ್ಗಿ, ಹನುಮಂತ ಕುಲಕರ್ಣಿ, ರಾಹುಲ ರಾಠೋಡ, ಮಾನ್ಯಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.</p>.<p>ರಾಜೇಶ್ವರಿ ಬಡ್ನಿ ನಿರೂಪಿಸಿದರು. ಡಿ.ಎಸ್.ಬಾಪುರಿ ಸ್ವಾಗತಿಸಿದರು. ಸತೀಶಕುಮಾರ ಚನ್ನಪ್ಪಗೌಡರ ವಂದಿಸಿದರು. ಎ.ಎಸ್.ಎಸ್. ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-23-1006842647</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>