<p>ಗಂಗಾವತಿ: ತಾಲ್ಲೂಕಿನ ವಡ್ಡರಹಟ್ಟಿ ಕ್ಯಾಂಪ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1997–98ನೇ ಸಾಲಿನಲ್ಲಿ ಏಳನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ನಗರದ ಲಯನ್ಸ್ ಚಾರಿಟಬಲ್ ಟ್ರಸ್ಟ್ನ ಲಯನ್ಸ್ ಮನೋವಿಕಲಚೇತನ ಮಕ್ಕಳ ವಸತಿ ನಿಲಯದ ಶಾಲೆಗೆ ಭಾನುವಾರ ಅಡುಗೆ ಪದಾರ್ಥಗಳ ನೆರವು ನೀಡಿದರು.</p>.<p>ಸರ್ಕಾರಿ ಶಾಲೆಯ ಹಳೆಯ ವಿದ್ಯಾರ್ಥಿಗಳೆಲ್ಲರೂ ಸೇರಿ ಸ್ವಂತ ಹಣ ಹಾಕಿ ಇದೇ ವರ್ಷದ ಜನವರಿಯಲ್ಲಿ ಶಾಲೆಯ ಆವರಣದಲ್ಲಿ ಗುರುವಂದನೆ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ಮಾಡಿದ್ದರು. ಕಾರ್ಯಕ್ರಮದ ಬಳಿಕ ಉಳಿದ ಹಣವನ್ನು ವ್ಯರ್ಥ ಮಾಡದೆ ವಸತಿ ನಿಲಯದ ಮಕ್ಕಳಿಗೆ ದಿನಸಿ ಕೊಡಿಸಿದರು.</p>.<p>ಶಿಕ್ಷಕ ಹಾಗೂ ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿ ದೇವಣ್ಣ ಮಾತನಾಡಿ ‘ಬುದ್ಧಿಮಾಂದ್ಯರು ಎಂದರೆ ದೇವರ ಮಕ್ಕಳಿದ್ದಂತೆ. ಗುರುವಂದನೆ ಸಮಯ ದಲ್ಲಿ ಶಾಲೆಗೆ ಉಡುಗೊರೆ ನೀಡಿದ್ದೆವು. ಈಗ ಉಳಿದಿದ್ದ ₹10 ಸಾವಿರ ಮೊತ್ತದಲ್ಲಿ ಲಯನ್ಸ್ ಶಾಲೆ ಮಕ್ಕಳಿಗೆ ಆಹಾರ ಪದಾರ್ಥಗಳನ್ನು ನೀಡಿದೆವು’ ಎಂದರು.</p>.<p>ಇನ್ನೊಬ್ಬ ಹಳೆ ವಿದ್ಯಾರ್ಥಿನಿ ಜ್ಯೋತಿ ಹಿರೇಮಠ ಮಾತನಾಡಿದರು.</p>.<p>ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳ ಕಾರ್ಯಕ್ಕೆ ಲಯನ್ಸ್ ಕ್ಲಬ್ ವಸತಿ ಶಾಲೆಯ ಪ್ರಾಚಾರ್ಯ ಪ್ರಭು ಹಿರೇಮಠ ಹರ್ಷ ವ್ಯಕ್ತಪಡಿಸಿದರು. ಕ್ಲಬ್ನ ಸಿಬ್ಬಂದಿ ಮಹಮ್ಮದ್ ಹಾಗೂ ವಡ್ಡರಹಟ್ಟಿ ಕ್ಯಾಂಪ್ ಶಾಲೆಯ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-35-598519994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ತಾಲ್ಲೂಕಿನ ವಡ್ಡರಹಟ್ಟಿ ಕ್ಯಾಂಪ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1997–98ನೇ ಸಾಲಿನಲ್ಲಿ ಏಳನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ನಗರದ ಲಯನ್ಸ್ ಚಾರಿಟಬಲ್ ಟ್ರಸ್ಟ್ನ ಲಯನ್ಸ್ ಮನೋವಿಕಲಚೇತನ ಮಕ್ಕಳ ವಸತಿ ನಿಲಯದ ಶಾಲೆಗೆ ಭಾನುವಾರ ಅಡುಗೆ ಪದಾರ್ಥಗಳ ನೆರವು ನೀಡಿದರು.</p>.<p>ಸರ್ಕಾರಿ ಶಾಲೆಯ ಹಳೆಯ ವಿದ್ಯಾರ್ಥಿಗಳೆಲ್ಲರೂ ಸೇರಿ ಸ್ವಂತ ಹಣ ಹಾಕಿ ಇದೇ ವರ್ಷದ ಜನವರಿಯಲ್ಲಿ ಶಾಲೆಯ ಆವರಣದಲ್ಲಿ ಗುರುವಂದನೆ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ಮಾಡಿದ್ದರು. ಕಾರ್ಯಕ್ರಮದ ಬಳಿಕ ಉಳಿದ ಹಣವನ್ನು ವ್ಯರ್ಥ ಮಾಡದೆ ವಸತಿ ನಿಲಯದ ಮಕ್ಕಳಿಗೆ ದಿನಸಿ ಕೊಡಿಸಿದರು.</p>.<p>ಶಿಕ್ಷಕ ಹಾಗೂ ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿ ದೇವಣ್ಣ ಮಾತನಾಡಿ ‘ಬುದ್ಧಿಮಾಂದ್ಯರು ಎಂದರೆ ದೇವರ ಮಕ್ಕಳಿದ್ದಂತೆ. ಗುರುವಂದನೆ ಸಮಯ ದಲ್ಲಿ ಶಾಲೆಗೆ ಉಡುಗೊರೆ ನೀಡಿದ್ದೆವು. ಈಗ ಉಳಿದಿದ್ದ ₹10 ಸಾವಿರ ಮೊತ್ತದಲ್ಲಿ ಲಯನ್ಸ್ ಶಾಲೆ ಮಕ್ಕಳಿಗೆ ಆಹಾರ ಪದಾರ್ಥಗಳನ್ನು ನೀಡಿದೆವು’ ಎಂದರು.</p>.<p>ಇನ್ನೊಬ್ಬ ಹಳೆ ವಿದ್ಯಾರ್ಥಿನಿ ಜ್ಯೋತಿ ಹಿರೇಮಠ ಮಾತನಾಡಿದರು.</p>.<p>ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳ ಕಾರ್ಯಕ್ಕೆ ಲಯನ್ಸ್ ಕ್ಲಬ್ ವಸತಿ ಶಾಲೆಯ ಪ್ರಾಚಾರ್ಯ ಪ್ರಭು ಹಿರೇಮಠ ಹರ್ಷ ವ್ಯಕ್ತಪಡಿಸಿದರು. ಕ್ಲಬ್ನ ಸಿಬ್ಬಂದಿ ಮಹಮ್ಮದ್ ಹಾಗೂ ವಡ್ಡರಹಟ್ಟಿ ಕ್ಯಾಂಪ್ ಶಾಲೆಯ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-35-598519994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>