ಗ್ರಾಮೀಣ ಪ್ರದೇಶದ ಬಹುತೇಕ ಮಕ್ಕಳಿಗೆ ಗಣಿತ ಕಬ್ಬಿಣದ ಕಡಲೆ. ಬೇರೆ ವಿಷಯಗಳ ಕಲಿಕೆಯಲ್ಲಿ ಉತ್ತಮವಾಗಿದ್ದರೂ ಗಣಿತದಲ್ಲಿ ಹಿಂದೆ ಇರುವುದನ್ನು ಮನಗಂಡು, ಇದಕ್ಕೆ ಪರಿಹಾರ ಕಂಡುಕೊಳ್ಳಲು ‘ಗಣಿತ ಗಣಕ’ ಎಂಬ ಯೋಜನೆ ಜಾರಿಗೊಳಿಸಲಾಗಿದೆ.
ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಿಂದ ಪ್ರೇರಿತರಾಗಿರುವ ಪೋಷಕರೇ ಈಗ ಜವಾಬ್ದಾರಿ ತೆಗೆದುಕೊಂಡು ಸಂಜೆ ಹೊತ್ತು ಮಕ್ಕಳಿಗೆ ಗಣಿತದ ಲೆಕ್ಕಗಳನ್ನು ಮಾಡಿಸುತ್ತಿದ್ದಾರೆ.
–ಕೆ.ವಿದ್ಯಾಕುಮಾರಿ, ರಾಜ್ಯ ಯೋಜನಾ ನಿರ್ದೇಶಕಿ, ಸಮಗ್ರ ಶಿಕ್ಷಣ ಕರ್ನಾಟಕ