<p>ಗೋಕಾಕ: ಸರ್ಕಾರಿ ಶಾಲೆ ಉಳಿಸಿಕೊಳ್ಳು ವುದು ಎಲ್ಲರ ಜವಾಬ್ದಾರಿ. ಪಿಎಂಶ್ರೀ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಶಾಲಾ ಗ್ರಂಥಾಲಯಕ್ಕೆ ಶಾಸಕರ ಅನುದಾನದ ಅಡಿಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳಿಗೆ ಮತ್ತು ಪ್ರಸ್ತುತ ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಂಥಾಲಯ ಸೌಲಭ್ಯಕ್ಕಾಗಿ ₹ 5 ಲಕ್ಷ ನೀಡುವುದರೊಂದಿಗೆ ಶೈಕ್ಷಣಿಕ ರಂಗಕ್ಕೆ ಬೆನ್ನೆಲುಬಾಗಿ ನಿಂತಿರುತ್ತಾರೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಸ್ಮರಿಸಿದರು.</p>.<p>ಬುಧವಾರ ತಾಲ್ಲೂಕಿನ ಮೆಳವಂಕಿ ಗ್ರಾಮದ ಸಿದ್ಧಾರೂಢ ಮಠದ ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಗೆ ಓ-ಸ್ಸಾಟ್ ಸಂಸ್ಥೆಯಿಂದ ನಿರ್ಮಿಸಲಾಗಿರುವ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಓ-ಸ್ಸಾಟ್ ಪದಾಧಿಕಾರಿ ರಾಮಮೂರ್ತಿ ಅವರು ಮಾತನಾಡಿ, ಸಂಸ್ಥೆಯಿಂದ ಒಗಿಸಿದ 121ನೇ ಕಟ್ಟಡ ಇದಾಗಿದ್ದು ಯೋಜನೆಗೆ ₹1 ಕೋಟಿ ಬೆಂಬಲ ನೀಡಿದ ದಾನಿಗಳಾದ ಸ್ನೇಹ ಮತ್ತು ಕೀರ್ತಿ ಮೇಲುಕೋಟೆ ಅವರು ಮಕ್ಕಳಿಗೆ ಸುರಕ್ಷಿತ ಹಾಗೂ ಸುಸಜ್ಜಿತ ವಾತಾವರಣ ಒದಗಿಸಿ ಶಾಲೆಯು ವಿದ್ಯಾ ಭ್ಯಾಸದ ಶ್ರೇಷ್ಠತೆ ಮತ್ತು ಸಮಗ್ರ ವಿದ್ಯಾರ್ಥಿ ಅಭಿವೃದ್ಧಿಯತ್ತ ಗಮನಹರಿಸಲು ಸಾಧ್ಯ ವಾಗುವಂತೆ ಮಾಡಿದ್ದಾರೆ ಎಂದರು.</p>.<p>ಹಾಸ್ಯ ಕಲಾವಿದ ಪ್ರಾಣೇಶ್ ಗಂಗಾವತಿ ನೂತನ ಕಟ್ಟಡವನ್ನು ಉದ್ಘಾಟಿಸಿದರು.</p>.<p>ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ತಹಶೀಲ್ದಾರ್ ಡಾ.ಮೋಹನ್ ಭಸ್ಮೆ, ತಾ.ಪಂ. ಇ.ಓ. ಪರಶುರಾಮ ಘಸ್ತೆ, ಮೂಡಲಗಿ ಬಿಇಒ ಪಿ.ಬಿ.ಹಿರೇ ಮಠ, ಹಾಸ್ಯ ಕಲಾವಿದ ಬಸವ ರಾಜ ಮಹಾಮನೆ, ಮುಖ್ಯಶಿಕ್ಷಕ ಈರಣ್ಣ ಕಡಕೋಳ, ಎಸ್ಡಿಎಂಸಿ ಪದಾ ಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-21-15407688</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕಾಕ: ಸರ್ಕಾರಿ ಶಾಲೆ ಉಳಿಸಿಕೊಳ್ಳು ವುದು ಎಲ್ಲರ ಜವಾಬ್ದಾರಿ. ಪಿಎಂಶ್ರೀ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಶಾಲಾ ಗ್ರಂಥಾಲಯಕ್ಕೆ ಶಾಸಕರ ಅನುದಾನದ ಅಡಿಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳಿಗೆ ಮತ್ತು ಪ್ರಸ್ತುತ ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಂಥಾಲಯ ಸೌಲಭ್ಯಕ್ಕಾಗಿ ₹ 5 ಲಕ್ಷ ನೀಡುವುದರೊಂದಿಗೆ ಶೈಕ್ಷಣಿಕ ರಂಗಕ್ಕೆ ಬೆನ್ನೆಲುಬಾಗಿ ನಿಂತಿರುತ್ತಾರೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಸ್ಮರಿಸಿದರು.</p>.<p>ಬುಧವಾರ ತಾಲ್ಲೂಕಿನ ಮೆಳವಂಕಿ ಗ್ರಾಮದ ಸಿದ್ಧಾರೂಢ ಮಠದ ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಗೆ ಓ-ಸ್ಸಾಟ್ ಸಂಸ್ಥೆಯಿಂದ ನಿರ್ಮಿಸಲಾಗಿರುವ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಓ-ಸ್ಸಾಟ್ ಪದಾಧಿಕಾರಿ ರಾಮಮೂರ್ತಿ ಅವರು ಮಾತನಾಡಿ, ಸಂಸ್ಥೆಯಿಂದ ಒಗಿಸಿದ 121ನೇ ಕಟ್ಟಡ ಇದಾಗಿದ್ದು ಯೋಜನೆಗೆ ₹1 ಕೋಟಿ ಬೆಂಬಲ ನೀಡಿದ ದಾನಿಗಳಾದ ಸ್ನೇಹ ಮತ್ತು ಕೀರ್ತಿ ಮೇಲುಕೋಟೆ ಅವರು ಮಕ್ಕಳಿಗೆ ಸುರಕ್ಷಿತ ಹಾಗೂ ಸುಸಜ್ಜಿತ ವಾತಾವರಣ ಒದಗಿಸಿ ಶಾಲೆಯು ವಿದ್ಯಾ ಭ್ಯಾಸದ ಶ್ರೇಷ್ಠತೆ ಮತ್ತು ಸಮಗ್ರ ವಿದ್ಯಾರ್ಥಿ ಅಭಿವೃದ್ಧಿಯತ್ತ ಗಮನಹರಿಸಲು ಸಾಧ್ಯ ವಾಗುವಂತೆ ಮಾಡಿದ್ದಾರೆ ಎಂದರು.</p>.<p>ಹಾಸ್ಯ ಕಲಾವಿದ ಪ್ರಾಣೇಶ್ ಗಂಗಾವತಿ ನೂತನ ಕಟ್ಟಡವನ್ನು ಉದ್ಘಾಟಿಸಿದರು.</p>.<p>ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ತಹಶೀಲ್ದಾರ್ ಡಾ.ಮೋಹನ್ ಭಸ್ಮೆ, ತಾ.ಪಂ. ಇ.ಓ. ಪರಶುರಾಮ ಘಸ್ತೆ, ಮೂಡಲಗಿ ಬಿಇಒ ಪಿ.ಬಿ.ಹಿರೇ ಮಠ, ಹಾಸ್ಯ ಕಲಾವಿದ ಬಸವ ರಾಜ ಮಹಾಮನೆ, ಮುಖ್ಯಶಿಕ್ಷಕ ಈರಣ್ಣ ಕಡಕೋಳ, ಎಸ್ಡಿಎಂಸಿ ಪದಾ ಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-21-15407688</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>