<p>ಗೋಕಾಕ: ಸತ್ಯ, ನಿಷ್ಠೆ, ಪ್ರಾಮಾಣಿಕತೆ ಹಾಗೂ ನಿರಂತರ ಪ್ರಯತ್ನವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಂಕಲಗಿಯ ಎಸ್.ಎ. ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎನ್. ಮಾವಿನಕಟ್ಟಿ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿ.ಎ. ಅಂತಿಮ ವಷ೯ದ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮ ಹಾಗೂ ತಮ್ಮ ಸೇವಾ ನಿವೃತ್ತಿಯ ಸಮಾರಂಭದಲ್ಲಿ ನೀಡಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದರು.</p>.<p>ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಜಿಲ್ಲಾ ಯೋಜನಾ ಸಂಯೋಜಕ ಕೆ.ಎಸ್. ನಂದೇರ ಮಾತನಾಡಿದರು. ಪ್ರಾಚಾರ್ಯರಾಗಿ ನೇಮಕಗೊಂಡ ಪ್ರೊ. ಎಂ.ಎಂ.ನರಸಿಂಗೋಳ ಅವರನ್ನು ಸತ್ಕರಿಸಿ, ಅಧಿಕಾರ ಹಸ್ತಾಂತರಿಸಲಾಯಿತು.</p>.<p>ಪ್ರಾಧ್ಯಾಪಕ ಪ್ರೊ. ಪಿ. ಎ. ಕುರುಪಿ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಗುರುಗಳಾದ ಬಿ.ಬಿ.ಪಾಟೀಲ, ಎನ್. ಆರ್. ಪಾಟೀಲ, ಎಸ್.ಆರ್. ಮುದ್ದಾರ, ಐ.ಎಸ್. ಪಾಟೀಲ, ಬಿ.ಬಿ. ನಿವಾ೯ಣಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-1152683479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕಾಕ: ಸತ್ಯ, ನಿಷ್ಠೆ, ಪ್ರಾಮಾಣಿಕತೆ ಹಾಗೂ ನಿರಂತರ ಪ್ರಯತ್ನವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಂಕಲಗಿಯ ಎಸ್.ಎ. ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎನ್. ಮಾವಿನಕಟ್ಟಿ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿ.ಎ. ಅಂತಿಮ ವಷ೯ದ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮ ಹಾಗೂ ತಮ್ಮ ಸೇವಾ ನಿವೃತ್ತಿಯ ಸಮಾರಂಭದಲ್ಲಿ ನೀಡಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದರು.</p>.<p>ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಜಿಲ್ಲಾ ಯೋಜನಾ ಸಂಯೋಜಕ ಕೆ.ಎಸ್. ನಂದೇರ ಮಾತನಾಡಿದರು. ಪ್ರಾಚಾರ್ಯರಾಗಿ ನೇಮಕಗೊಂಡ ಪ್ರೊ. ಎಂ.ಎಂ.ನರಸಿಂಗೋಳ ಅವರನ್ನು ಸತ್ಕರಿಸಿ, ಅಧಿಕಾರ ಹಸ್ತಾಂತರಿಸಲಾಯಿತು.</p>.<p>ಪ್ರಾಧ್ಯಾಪಕ ಪ್ರೊ. ಪಿ. ಎ. ಕುರುಪಿ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಗುರುಗಳಾದ ಬಿ.ಬಿ.ಪಾಟೀಲ, ಎನ್. ಆರ್. ಪಾಟೀಲ, ಎಸ್.ಆರ್. ಮುದ್ದಾರ, ಐ.ಎಸ್. ಪಾಟೀಲ, ಬಿ.ಬಿ. ನಿವಾ೯ಣಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-1152683479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>