<p>ಗೌರಿಬಿದನೂರು: ನಗರದ ನ್ಯಾಷನಲ್ ಕಾಲೇಜಿನಲ್ಲಿ ಸ್ಮೈಲ್ಸ್ ಆಸ್ಪತ್ರೆ ಮತ್ತು ಮಾನಸ ಆಸ್ಪತ್ರೆಯಿಂದ ಪೈಲ್ಸ್ ಮತ್ತು ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ಭಾನುವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜನರ ಒತ್ತಡದ ಜಂಜಾಟದಲ್ಲಿ ಕಾಯಿಲೆಗಳು ಸಾಮಾನ್ಯವಾಗುತ್ತಿವೆ. ಶಿಬಿರದಲ್ಲಿ ವೈದ್ಯರ ತಂಡ ಬಂದು ಚಿಕಿತ್ಸೆ ನೀಡುತ್ತದೆ. ಯಾವುದೇ ಮುಜುಗರ ಪಟ್ಟುಕೊಳ್ಳದೆ, ಅವಶ್ಯಕತೆ ಇರುವ ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲೆ ಶೈಲಜಾ ಸಪ್ತಗಿರಿ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಮಹಾಭಾಗ್ಯ. ಒತ್ತಡದ ಜೀವನದಲ್ಲಿ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ರೋಗಿಗಳು ಯಾವುದೇ ಕಾಯಿಲೆ ಇದ್ದರೂ ವೈದ್ಯರ ಬಳಿ ಯಾವುದೇ ಸಂಕೋಚವಿಲ್ಲದೆ ಸಮಸ್ಯೆ ಹೇಳಿ, ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.</p>.<p>ಕೃಷಿಕ ಸಮಾಜದ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ಕೆಎಚ್ಪಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಗೌಡ, ಸ್ಮೈಲ್ಸ್ ಆಸ್ಪತ್ರೆ ವ್ಯವಸ್ಥಾಪಕ ಡಾ.ಪರಮೇಶ್ವರ್, ಡಾ.ನರಸಾರೆಡ್ಡಿ, ನಾಗೇಂದ್ರ, ಅಬ್ದುಲ್ಲಾ, ವರಲಕ್ಷ್ಮಿ, ಸಂಗೀತಾ, ನವ್ಯ, ಭವ್ಯ, ವಿಜಯ್, ಮಾದೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-16-519114906</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ನಗರದ ನ್ಯಾಷನಲ್ ಕಾಲೇಜಿನಲ್ಲಿ ಸ್ಮೈಲ್ಸ್ ಆಸ್ಪತ್ರೆ ಮತ್ತು ಮಾನಸ ಆಸ್ಪತ್ರೆಯಿಂದ ಪೈಲ್ಸ್ ಮತ್ತು ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ಭಾನುವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜನರ ಒತ್ತಡದ ಜಂಜಾಟದಲ್ಲಿ ಕಾಯಿಲೆಗಳು ಸಾಮಾನ್ಯವಾಗುತ್ತಿವೆ. ಶಿಬಿರದಲ್ಲಿ ವೈದ್ಯರ ತಂಡ ಬಂದು ಚಿಕಿತ್ಸೆ ನೀಡುತ್ತದೆ. ಯಾವುದೇ ಮುಜುಗರ ಪಟ್ಟುಕೊಳ್ಳದೆ, ಅವಶ್ಯಕತೆ ಇರುವ ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲೆ ಶೈಲಜಾ ಸಪ್ತಗಿರಿ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಮಹಾಭಾಗ್ಯ. ಒತ್ತಡದ ಜೀವನದಲ್ಲಿ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ರೋಗಿಗಳು ಯಾವುದೇ ಕಾಯಿಲೆ ಇದ್ದರೂ ವೈದ್ಯರ ಬಳಿ ಯಾವುದೇ ಸಂಕೋಚವಿಲ್ಲದೆ ಸಮಸ್ಯೆ ಹೇಳಿ, ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.</p>.<p>ಕೃಷಿಕ ಸಮಾಜದ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ಕೆಎಚ್ಪಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಗೌಡ, ಸ್ಮೈಲ್ಸ್ ಆಸ್ಪತ್ರೆ ವ್ಯವಸ್ಥಾಪಕ ಡಾ.ಪರಮೇಶ್ವರ್, ಡಾ.ನರಸಾರೆಡ್ಡಿ, ನಾಗೇಂದ್ರ, ಅಬ್ದುಲ್ಲಾ, ವರಲಕ್ಷ್ಮಿ, ಸಂಗೀತಾ, ನವ್ಯ, ಭವ್ಯ, ವಿಜಯ್, ಮಾದೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-16-519114906</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>