<p>ಗುಬ್ಬಿ: ಗ್ರಾಮೀಣ ಭಾಗದಲ್ಲಿ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದಲೇ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆ ಸ್ಥಾಪಿಸಲಾಗಿದೆ ಎಂದು ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಸ್. ಬಸವರಾಜು ತಿಳಿಸಿದರು.</p>.<p>ಹೇರೂರಿನ ಸಿಐಟಿ ಕಾಲೇಜು ಆವರಣದಲ್ಲಿ ಬುಧವಾರ ನಡೆದ ಉಚಿತ ಕ್ಯಾಟ್ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕಳೆದ 25 ವರ್ಷಗಳಲ್ಲಿ ಈ ಸಂಸ್ಥೆಯಲ್ಲಿ ಸಾವಿರಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ. ಪ್ರಸ್ತುತ ದೇಶ, ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ. ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಬಂದು, ಹೋಗಲು ಅನುಕೂಲ ಇರುವುದರಿಂದ ಮನೆಯ ಬಾಗಿಲಿನಲ್ಲಿಯೇ ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.</p>.<p>ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಕ್ಯಾಟ್ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ನಿಗದಿ ಪಡಿಸಿರುವ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ತಿಳಿಸಿದರು.</p>.<p>ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ಆರ್ಥಿಕವಾಗಿ ಆಶಕ್ತರಾಗಿರುವ ವಿದ್ಯಾರ್ಥಿಗಳಿಗೂ ಎಂಜಿನಿಯರಿಂಗ್ ವಿದ್ಯಾಭ್ಯಾಸ ದೊರಕಿಸಿ ಕೊಡುವ ಉದ್ದೇಶದಿಂದಲೇ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ಮಹಾನಗರಗಳಲ್ಲಿ ದೊರಕುವ ಎಲ್ಲ ಸೌಲಭ್ಯಗಳು ಗ್ರಾಮೀಣ ಭಾಗದ ಈ ಸಂಸ್ಥೆಯಲ್ಲೂ ದೊರಕುತ್ತಿವೆ. ಮತ್ತಷ್ಟು ಮೂಲ ಸೌಕರ್ಯಗಳನ್ನು ಹೆಚ್ಚಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಸಂಸ್ಥೆಯನ್ನು ಸ್ವಾಯತ್ತ ವಿಶ್ವವಿದ್ಯಾಲಯವನ್ನಾಗಿಸುವ ಆಶಯ ಹೊಂದಿದ್ದೇವೆ ಎಂದು ಹೇಳಿದರು.</p>.<p>ಕಾರ್ಯಕ್ರಮವನ್ನು ಉದ್ದೇಶಿಸಿ ಸಿಐಟಿ ಸಂಸ್ಥೆ ನಿರ್ದೇಶಕ ಸುರೇಶ್ ಡಿ.ಎಸ್., ಉಪ ಪ್ರಾಂಶುಪಾಲ ಶಾಂತಲಾ ಸಿ.ಪಿ. ಮಾತನಾಡಿದರು.</p>.<p>ಪ್ರಾಧ್ಯಾಪಕ ಜಿ.ಎಸ್. ಸುರೇಶ್, ಚೇತನ್ ಬಾಲಾಜಿ, ಅನಿಲ್ ಕುಮಾರ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-17-1429042159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ಗ್ರಾಮೀಣ ಭಾಗದಲ್ಲಿ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದಲೇ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆ ಸ್ಥಾಪಿಸಲಾಗಿದೆ ಎಂದು ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಸ್. ಬಸವರಾಜು ತಿಳಿಸಿದರು.</p>.<p>ಹೇರೂರಿನ ಸಿಐಟಿ ಕಾಲೇಜು ಆವರಣದಲ್ಲಿ ಬುಧವಾರ ನಡೆದ ಉಚಿತ ಕ್ಯಾಟ್ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕಳೆದ 25 ವರ್ಷಗಳಲ್ಲಿ ಈ ಸಂಸ್ಥೆಯಲ್ಲಿ ಸಾವಿರಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ. ಪ್ರಸ್ತುತ ದೇಶ, ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ. ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಬಂದು, ಹೋಗಲು ಅನುಕೂಲ ಇರುವುದರಿಂದ ಮನೆಯ ಬಾಗಿಲಿನಲ್ಲಿಯೇ ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.</p>.<p>ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಕ್ಯಾಟ್ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ನಿಗದಿ ಪಡಿಸಿರುವ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ತಿಳಿಸಿದರು.</p>.<p>ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ಆರ್ಥಿಕವಾಗಿ ಆಶಕ್ತರಾಗಿರುವ ವಿದ್ಯಾರ್ಥಿಗಳಿಗೂ ಎಂಜಿನಿಯರಿಂಗ್ ವಿದ್ಯಾಭ್ಯಾಸ ದೊರಕಿಸಿ ಕೊಡುವ ಉದ್ದೇಶದಿಂದಲೇ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ಮಹಾನಗರಗಳಲ್ಲಿ ದೊರಕುವ ಎಲ್ಲ ಸೌಲಭ್ಯಗಳು ಗ್ರಾಮೀಣ ಭಾಗದ ಈ ಸಂಸ್ಥೆಯಲ್ಲೂ ದೊರಕುತ್ತಿವೆ. ಮತ್ತಷ್ಟು ಮೂಲ ಸೌಕರ್ಯಗಳನ್ನು ಹೆಚ್ಚಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಸಂಸ್ಥೆಯನ್ನು ಸ್ವಾಯತ್ತ ವಿಶ್ವವಿದ್ಯಾಲಯವನ್ನಾಗಿಸುವ ಆಶಯ ಹೊಂದಿದ್ದೇವೆ ಎಂದು ಹೇಳಿದರು.</p>.<p>ಕಾರ್ಯಕ್ರಮವನ್ನು ಉದ್ದೇಶಿಸಿ ಸಿಐಟಿ ಸಂಸ್ಥೆ ನಿರ್ದೇಶಕ ಸುರೇಶ್ ಡಿ.ಎಸ್., ಉಪ ಪ್ರಾಂಶುಪಾಲ ಶಾಂತಲಾ ಸಿ.ಪಿ. ಮಾತನಾಡಿದರು.</p>.<p>ಪ್ರಾಧ್ಯಾಪಕ ಜಿ.ಎಸ್. ಸುರೇಶ್, ಚೇತನ್ ಬಾಲಾಜಿ, ಅನಿಲ್ ಕುಮಾರ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-17-1429042159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>