<p>ಗುಬ್ಬಿ: ಹೊಸ ಪ್ರಯತ್ನ, ಆಲೋಚನೆಯಿಂದ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ಕೇವಲ ಉದ್ಯೋಗ ಪಡೆಯುವುದಕ್ಕೆ ಸೀಮಿತವಾಗದೆ, ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಲಹೆ ಮಾಡಿದರು.</p>.<p>ಪಟ್ಟಣದ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ (ಸಿಐಟಿಯು) ಶುಕ್ರವಾರ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು. ಸಿಐಟಿ ಸಂಸ್ಥೆಯಲ್ಲಿ 25 ವರ್ಷಗಳಿಂದ 13 ಸಾವಿರಕ್ಕೂ ಹೆಚ್ಚು ಮಂದಿ ಶಿಕ್ಷಣ ಪಡೆದಿದ್ದಾರೆ. ದೇಶ–ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ವಂತ ಕಂಪನಿ ಆರಂಭಿಸಿ ಇತರರಿಗೂ ಉದ್ಯೋಗ ನೀಡುತ್ತಿದ್ದಾರೆ ಎಂದರು.</p>.<p>ಬೆಂಗಳೂರಿನ ನೈಷಾ ಮೊಬಿಲಿಟಿ ಟೆಕ್ ಪ್ರೈವೇಟ್ ಲಿ. ಉಪಾಧ್ಯಕ್ಷ ಅತಿಶಯ್ ಜೈನ್, ‘ತಾಂತ್ರಿಕ ಜ್ಞಾನದ ಜತೆಗೆ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು. ನಿರಂತರ ಕಲಿಕೆಯ ಮನೋಭಾವ ರೂಢಿಸಿಕೊಳ್ಳಬೇಕು. ಮತ್ತಷ್ಟು ಕೌಶಲಗಳನ್ನು ಕಲಿಯಬೇಕು’ ಎಂದು ತಿಳಿಸಿದರು.</p>.<p>ಲುಫ್ತಾನ್ಸಾ ಸಿಸ್ಟಮ್ಸ್ ಸಂಸ್ಥೆಯ ಕಿರಣ್ ಆಡಿ, ಸಿಐಟಿ ಪ್ರಾಂಶುಪಾಲ ಡಿ.ಎಸ್.ಸುರೇಶ್, ಮುಖ್ಯ ಸಲಹೆಗಾರ ಶ್ರೀಧರ್ ಕೆ.ಎನ್.ರಾವ್, ಉಪಪ್ರಾಂಶುಪಾಲರಾದ ಸಿ.ಪಿ.ಶಾಂತಲಾ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-17-624636899</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ಹೊಸ ಪ್ರಯತ್ನ, ಆಲೋಚನೆಯಿಂದ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ಕೇವಲ ಉದ್ಯೋಗ ಪಡೆಯುವುದಕ್ಕೆ ಸೀಮಿತವಾಗದೆ, ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಲಹೆ ಮಾಡಿದರು.</p>.<p>ಪಟ್ಟಣದ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ (ಸಿಐಟಿಯು) ಶುಕ್ರವಾರ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು. ಸಿಐಟಿ ಸಂಸ್ಥೆಯಲ್ಲಿ 25 ವರ್ಷಗಳಿಂದ 13 ಸಾವಿರಕ್ಕೂ ಹೆಚ್ಚು ಮಂದಿ ಶಿಕ್ಷಣ ಪಡೆದಿದ್ದಾರೆ. ದೇಶ–ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ವಂತ ಕಂಪನಿ ಆರಂಭಿಸಿ ಇತರರಿಗೂ ಉದ್ಯೋಗ ನೀಡುತ್ತಿದ್ದಾರೆ ಎಂದರು.</p>.<p>ಬೆಂಗಳೂರಿನ ನೈಷಾ ಮೊಬಿಲಿಟಿ ಟೆಕ್ ಪ್ರೈವೇಟ್ ಲಿ. ಉಪಾಧ್ಯಕ್ಷ ಅತಿಶಯ್ ಜೈನ್, ‘ತಾಂತ್ರಿಕ ಜ್ಞಾನದ ಜತೆಗೆ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು. ನಿರಂತರ ಕಲಿಕೆಯ ಮನೋಭಾವ ರೂಢಿಸಿಕೊಳ್ಳಬೇಕು. ಮತ್ತಷ್ಟು ಕೌಶಲಗಳನ್ನು ಕಲಿಯಬೇಕು’ ಎಂದು ತಿಳಿಸಿದರು.</p>.<p>ಲುಫ್ತಾನ್ಸಾ ಸಿಸ್ಟಮ್ಸ್ ಸಂಸ್ಥೆಯ ಕಿರಣ್ ಆಡಿ, ಸಿಐಟಿ ಪ್ರಾಂಶುಪಾಲ ಡಿ.ಎಸ್.ಸುರೇಶ್, ಮುಖ್ಯ ಸಲಹೆಗಾರ ಶ್ರೀಧರ್ ಕೆ.ಎನ್.ರಾವ್, ಉಪಪ್ರಾಂಶುಪಾಲರಾದ ಸಿ.ಪಿ.ಶಾಂತಲಾ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-17-624636899</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>