<p>ಗುಳೇದಗುಡ್ಡ: ‘ಸರ್ಕಾರಿ ಶಾಲೆಯಲ್ಲಿ ಓದಿದವರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಶಿಕ್ಷಕರಾಗಿರುವುದು ಹರ್ಷದಾಯಕ’ ಎಂದು ಬಾಲಕಿಯರ ಪ್ರೌಢಶಾಲೆಯ ಉಪಪ್ರಾಚಾರ್ಯ ಎಂ.ಪಿ. ಮಾಗಿ ಹೇಳಿದರು.</p>.<p>ಅವರು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜರುಗಿದ ಸರ್ಕಾರಿ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂ- 1ರ 1998-99 ನೇ ಸಾಲಿನ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಜ್ಞಾನ, ಶಿಸ್ತು, ವ್ಯಕ್ತಿತ್ವ ರೂಪಿಸಿದ ಶಿಕ್ಷಕರ ಪಾತ್ರ ಹಿರಿದು ಎಂದರು.</p>.<p>ಶಿರೂರ ಸಿದ್ಧೇಶ್ವರ ಪ್ರೌಢಶಾಲೆಯ ಶಿಕ್ಷಕ ಸಂಜಯ ನಡುವಿನಮನಿ ಮಾತನಾಡಿ, ‘ಮಣ್ಣಿನ ಮುದ್ದೆಯಂಥ ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಅವರಿಗೆ ಜ್ಞಾನ ನೀಡಿ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುವಲ್ಲಿ ಶಿಕ್ಷಕರ ಶ್ರಮ ಅಡಗಿದೆ. ಹೀಗಾಗಿ ಶಿಕ್ಷಕರು ಶಿಲ್ಪಿಗಳಾಗಿದ್ದಾರೆ’ ಎಂದು ಹೇಳಿದರು.</p>.<p>ಶಿಕ್ಷಕರಾದ ಭೋಜಪ್ಪ ಮಂಗಳೂರು, ತಿಪ್ಪಣ್ಣ ಮಡಿವಾಳರ, ಶಿವಲೀಲಾ ತೋಟಗೇರ, ಶಂಕ್ರಮ್ಮ ಪೆರ್ಮಿ, ನೀಲಮ್ಮ ಕೆರೂರ, ಸುಮಾ ಆಡೀನ, ಎಂ.ಎಚ್.ಗಾಣಿಗೇರ, ಸುನಂದಾ ಉಮಚಗಿ, ಜಯಂತಿ ಅಂಬಿಗೇರ ಅವರನ್ನು ಗೌರವಿಸಲಾಯಿತು. ನೆಲ್ಲೂರ, ಮಂಜುಳಾ ಮಾಚಕನೂರ, ಶರಣಬಸವ ತೆಗ್ಗಿನಮಠ ಮಾತನಾಡಿದರು.</p>.<p>ವಿಜಯಲಕ್ಷ್ಮೀ ಮಿಟ್ಟಲಕೋಡ ಅವರು ಸ್ವಾಗತಿಸಿದರು. ಸವಿತಾ ಕೊರವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಕ್ಕೂಬಾಯಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-19-58957950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಳೇದಗುಡ್ಡ: ‘ಸರ್ಕಾರಿ ಶಾಲೆಯಲ್ಲಿ ಓದಿದವರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಶಿಕ್ಷಕರಾಗಿರುವುದು ಹರ್ಷದಾಯಕ’ ಎಂದು ಬಾಲಕಿಯರ ಪ್ರೌಢಶಾಲೆಯ ಉಪಪ್ರಾಚಾರ್ಯ ಎಂ.ಪಿ. ಮಾಗಿ ಹೇಳಿದರು.</p>.<p>ಅವರು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜರುಗಿದ ಸರ್ಕಾರಿ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂ- 1ರ 1998-99 ನೇ ಸಾಲಿನ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಜ್ಞಾನ, ಶಿಸ್ತು, ವ್ಯಕ್ತಿತ್ವ ರೂಪಿಸಿದ ಶಿಕ್ಷಕರ ಪಾತ್ರ ಹಿರಿದು ಎಂದರು.</p>.<p>ಶಿರೂರ ಸಿದ್ಧೇಶ್ವರ ಪ್ರೌಢಶಾಲೆಯ ಶಿಕ್ಷಕ ಸಂಜಯ ನಡುವಿನಮನಿ ಮಾತನಾಡಿ, ‘ಮಣ್ಣಿನ ಮುದ್ದೆಯಂಥ ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಅವರಿಗೆ ಜ್ಞಾನ ನೀಡಿ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುವಲ್ಲಿ ಶಿಕ್ಷಕರ ಶ್ರಮ ಅಡಗಿದೆ. ಹೀಗಾಗಿ ಶಿಕ್ಷಕರು ಶಿಲ್ಪಿಗಳಾಗಿದ್ದಾರೆ’ ಎಂದು ಹೇಳಿದರು.</p>.<p>ಶಿಕ್ಷಕರಾದ ಭೋಜಪ್ಪ ಮಂಗಳೂರು, ತಿಪ್ಪಣ್ಣ ಮಡಿವಾಳರ, ಶಿವಲೀಲಾ ತೋಟಗೇರ, ಶಂಕ್ರಮ್ಮ ಪೆರ್ಮಿ, ನೀಲಮ್ಮ ಕೆರೂರ, ಸುಮಾ ಆಡೀನ, ಎಂ.ಎಚ್.ಗಾಣಿಗೇರ, ಸುನಂದಾ ಉಮಚಗಿ, ಜಯಂತಿ ಅಂಬಿಗೇರ ಅವರನ್ನು ಗೌರವಿಸಲಾಯಿತು. ನೆಲ್ಲೂರ, ಮಂಜುಳಾ ಮಾಚಕನೂರ, ಶರಣಬಸವ ತೆಗ್ಗಿನಮಠ ಮಾತನಾಡಿದರು.</p>.<p>ವಿಜಯಲಕ್ಷ್ಮೀ ಮಿಟ್ಟಲಕೋಡ ಅವರು ಸ್ವಾಗತಿಸಿದರು. ಸವಿತಾ ಕೊರವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಕ್ಕೂಬಾಯಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-19-58957950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>