<p>ಗುಳೇದಗುಡ್ಡ: ಭಾರತ ಗ್ರಾಮಗಳಿಂದ ಕೂಡಿದ ದೇಶ. ಗ್ರಾಮಗಳು ಅಭಿವೃದ್ಧಿಯಾದರೆ ದೇಶವೇ ಅಭಿವೃದ್ಧಿಯಾಗುತ್ತದೆ. ಗ್ರಾಮಗಳ ಅಭಿವೃದ್ಧಿಯಾಗಲು ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಬೇಕೆಂದು ಹಂಸನೂರು ಶಿವಾನಂದಮಠದ ಅಭಿನವ ಬಸವರಾಜ ಸ್ವಾಮೀಜಿ ಹೇಳಿದರು.</p>.<p>ಅವರು ಬಾದಾಮಿಯ ಕಾಳಿದಾಸ ಪದವಿ ಮಹಾವಿದ್ಯಾಲಯ ಹಾಗೂ ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿ ಅವರ ಸಂಯುಕ್ತ ಆಶ್ರಯದಲ್ಲಿ ದತ್ತು ಗ್ರಾಮ ತಾಲ್ಲೂಕಿನ ರಾಘಾಪೂರು ಗ್ರಾಮದಲ್ಲಿ ಇತ್ತೀಚಿಗೆ ಜರುಗಿದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದರು.</p>.<p>‘ಇಂದು ಯುವಕರಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತದೆ. ಚಟಗಳಿಗೆ ದಾಸರಾಗುತ್ತಿದ್ದಾರೆ ಕೆಟ್ಟ ಹವ್ಯಾಸ ಬಿಟ್ಟು ಓದುವ, ಪರಿಶ್ರಮದ ಎಲ್ಲ ಆಲೋಚನೆಗಳನ್ನು ರೂಢಿಸಿಕೊಳ್ಳಬೇಕು ಎಂದು’ ಹೇಳಿದರು.</p>.<p>ಕಾಳಿದಾಸ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಎಸ್.ಎಚ್.ಕರಿಗಾರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ವಿದ್ಯಾರ್ಥಿಗಳು ಸತತ ಅಧ್ಯಯನದೊಂದಿಗೆ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಅಂದಾಗ ಹಾಕಿಕೊಂಡ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು. ಸಂಸ್ಥೆಯ ಪ್ರಾಚಾರ್ಯ ಎಚ್.ಎಂ.ಸಂಗಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಹಂಸನೂರು ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ ಅರಳಿಕಟ್ಟಿ, ಯಮನಪ್ಪ ಗಿಡ್ಡನಾಯಕನಾಳ ಬಾಲು ಉಂಡಿ, ರಂಗಪ್ಪ ಡಂಬೂರ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕಲ್ಲಯ್ಯ ಒಡೆಯರ, ರಂಗಪ್ಪ ದಾದಿ, ಯಮನಪ್ಪ ಕಟಾಪುರ, ಉಮೇಶ್ ಮಮಟಗೇರಿ ಎನ್ಎಸ್ಎಸ್ ಸಂಯೋಜಕರಾದ ಪಿ.ಆರ್ ವಾಗ್ಮೋಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-19-415390359</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಳೇದಗುಡ್ಡ: ಭಾರತ ಗ್ರಾಮಗಳಿಂದ ಕೂಡಿದ ದೇಶ. ಗ್ರಾಮಗಳು ಅಭಿವೃದ್ಧಿಯಾದರೆ ದೇಶವೇ ಅಭಿವೃದ್ಧಿಯಾಗುತ್ತದೆ. ಗ್ರಾಮಗಳ ಅಭಿವೃದ್ಧಿಯಾಗಲು ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಬೇಕೆಂದು ಹಂಸನೂರು ಶಿವಾನಂದಮಠದ ಅಭಿನವ ಬಸವರಾಜ ಸ್ವಾಮೀಜಿ ಹೇಳಿದರು.</p>.<p>ಅವರು ಬಾದಾಮಿಯ ಕಾಳಿದಾಸ ಪದವಿ ಮಹಾವಿದ್ಯಾಲಯ ಹಾಗೂ ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿ ಅವರ ಸಂಯುಕ್ತ ಆಶ್ರಯದಲ್ಲಿ ದತ್ತು ಗ್ರಾಮ ತಾಲ್ಲೂಕಿನ ರಾಘಾಪೂರು ಗ್ರಾಮದಲ್ಲಿ ಇತ್ತೀಚಿಗೆ ಜರುಗಿದ ಎನ್ಎಸ್ಎಸ್ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದರು.</p>.<p>‘ಇಂದು ಯುವಕರಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತದೆ. ಚಟಗಳಿಗೆ ದಾಸರಾಗುತ್ತಿದ್ದಾರೆ ಕೆಟ್ಟ ಹವ್ಯಾಸ ಬಿಟ್ಟು ಓದುವ, ಪರಿಶ್ರಮದ ಎಲ್ಲ ಆಲೋಚನೆಗಳನ್ನು ರೂಢಿಸಿಕೊಳ್ಳಬೇಕು ಎಂದು’ ಹೇಳಿದರು.</p>.<p>ಕಾಳಿದಾಸ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಎಸ್.ಎಚ್.ಕರಿಗಾರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ವಿದ್ಯಾರ್ಥಿಗಳು ಸತತ ಅಧ್ಯಯನದೊಂದಿಗೆ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಅಂದಾಗ ಹಾಕಿಕೊಂಡ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು. ಸಂಸ್ಥೆಯ ಪ್ರಾಚಾರ್ಯ ಎಚ್.ಎಂ.ಸಂಗಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಹಂಸನೂರು ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ ಅರಳಿಕಟ್ಟಿ, ಯಮನಪ್ಪ ಗಿಡ್ಡನಾಯಕನಾಳ ಬಾಲು ಉಂಡಿ, ರಂಗಪ್ಪ ಡಂಬೂರ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕಲ್ಲಯ್ಯ ಒಡೆಯರ, ರಂಗಪ್ಪ ದಾದಿ, ಯಮನಪ್ಪ ಕಟಾಪುರ, ಉಮೇಶ್ ಮಮಟಗೇರಿ ಎನ್ಎಸ್ಎಸ್ ಸಂಯೋಜಕರಾದ ಪಿ.ಆರ್ ವಾಗ್ಮೋಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-19-415390359</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>