<p>ಗುಂಡ್ಲುಪೇಟೆ: ಕಾಡಂಚಿನ ಗ್ರಾಮದ ದೇಶಿಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಹಾಗೂ ಘಟಿಕೋತ್ಸವ ಸಮಾರಂಭ ನಡೆಯಿತು.</p>.<p>ಮಕ್ಕಳು ಪದವಿ ಗೌನ್ ಧರಿಸಿ ಅತಿಥಿಗಳಿಂದ ಪ್ರಮಾಣ ಪತ್ರ ಪಡೆದು ಸಂಭ್ರಮಿಸಿದರು. ಪೋಷಕರು ಮೊಬೈಲ್ ಪೋನ್ನಲ್ಲಿ ಮಕ್ಕಳ ಫೋಟೊಗಳನ್ನು ಸೆರೆ ಹಿಡಿದು ಖುಷಿಪಟ್ಟರು.</p>.<p>ಶಾಲಾ ಮುಖ್ಯ ಶಿಕ್ಷಕ ನಂದೀಶ್, ಮಕ್ಕಳಿಗೆ ಕಲಿಕೆಗೆ ಆಸಕ್ತಿ ಮೂಡಿಸುವ ಸಲುವಾಗಿ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಿದ್ದರು.</p>.<p>ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿದ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಎಚ್.ಟಿ.ಸರೋಜಾ, ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆಸುವಂತಹ ಘಟಿಕೋತ್ಸವದ ಮಾದರಿಯ ಕಾರ್ಯಕ್ರಮವನ್ನು ಶಾಲೆಯಲ್ಲಿ ಆಯೋಜಿಸಿ ಮಕ್ಕಳಿಗೆ ಕಲಿಕೆಯ ಆಸಕ್ತಿ ಮೂಡಿಸುತ್ತಿರುವುದು ಶಿಕ್ಷಕರ ಕ್ರೀಯಾಶೀಲತೆ ತೋರಿಸುತ್ತದೆ. ಪ್ರತಿ ಶಾಲೆಗೂ ಈ ರೀತಿಯ ಶಿಕ್ಷಕರ ಅವಶ್ಯಕತೆ ಇದೆ ಎಂದರು.</p>.<p>ಮಕ್ಕಳು ಮೊಬೈಲ್ ಫೋನ್ನಿಂದ ದೂರವಿದ್ದು, ದೇಶಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಮತ್ತು ಸೃಜನಶೀಲ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು.</p>.<p>ಸಿಆರ್ಪಿ ಚಂದ್ರಶೇಖರ್ ಆರ್, ಎಸ್ಡಿಎಂಸಿ ಅಧ್ಯಕ್ಷ ಪ್ರಸನ್ನ, ಮುಖ್ಯಶಿಕ್ಷಕ ನಂದೀಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಾಗರಾಜು. ಉಪಾಧ್ಯಕ್ಷ ಮಾದಲಾಂಬಿಕ, ನಿವೃತ್ತ ಸೈನಿಕ ನಾಗಪ್ಪ ಹಾಜರಿದ್ದರು.</p>.<p>ಮಕ್ಕಳು ವಿವಿಧ ಸಾಂಸ್ಕೃತಿಕ ಮತ್ತು ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-37-586315224</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ಕಾಡಂಚಿನ ಗ್ರಾಮದ ದೇಶಿಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಹಾಗೂ ಘಟಿಕೋತ್ಸವ ಸಮಾರಂಭ ನಡೆಯಿತು.</p>.<p>ಮಕ್ಕಳು ಪದವಿ ಗೌನ್ ಧರಿಸಿ ಅತಿಥಿಗಳಿಂದ ಪ್ರಮಾಣ ಪತ್ರ ಪಡೆದು ಸಂಭ್ರಮಿಸಿದರು. ಪೋಷಕರು ಮೊಬೈಲ್ ಪೋನ್ನಲ್ಲಿ ಮಕ್ಕಳ ಫೋಟೊಗಳನ್ನು ಸೆರೆ ಹಿಡಿದು ಖುಷಿಪಟ್ಟರು.</p>.<p>ಶಾಲಾ ಮುಖ್ಯ ಶಿಕ್ಷಕ ನಂದೀಶ್, ಮಕ್ಕಳಿಗೆ ಕಲಿಕೆಗೆ ಆಸಕ್ತಿ ಮೂಡಿಸುವ ಸಲುವಾಗಿ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಿದ್ದರು.</p>.<p>ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿದ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಎಚ್.ಟಿ.ಸರೋಜಾ, ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆಸುವಂತಹ ಘಟಿಕೋತ್ಸವದ ಮಾದರಿಯ ಕಾರ್ಯಕ್ರಮವನ್ನು ಶಾಲೆಯಲ್ಲಿ ಆಯೋಜಿಸಿ ಮಕ್ಕಳಿಗೆ ಕಲಿಕೆಯ ಆಸಕ್ತಿ ಮೂಡಿಸುತ್ತಿರುವುದು ಶಿಕ್ಷಕರ ಕ್ರೀಯಾಶೀಲತೆ ತೋರಿಸುತ್ತದೆ. ಪ್ರತಿ ಶಾಲೆಗೂ ಈ ರೀತಿಯ ಶಿಕ್ಷಕರ ಅವಶ್ಯಕತೆ ಇದೆ ಎಂದರು.</p>.<p>ಮಕ್ಕಳು ಮೊಬೈಲ್ ಫೋನ್ನಿಂದ ದೂರವಿದ್ದು, ದೇಶಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಮತ್ತು ಸೃಜನಶೀಲ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು.</p>.<p>ಸಿಆರ್ಪಿ ಚಂದ್ರಶೇಖರ್ ಆರ್, ಎಸ್ಡಿಎಂಸಿ ಅಧ್ಯಕ್ಷ ಪ್ರಸನ್ನ, ಮುಖ್ಯಶಿಕ್ಷಕ ನಂದೀಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಾಗರಾಜು. ಉಪಾಧ್ಯಕ್ಷ ಮಾದಲಾಂಬಿಕ, ನಿವೃತ್ತ ಸೈನಿಕ ನಾಗಪ್ಪ ಹಾಜರಿದ್ದರು.</p>.<p>ಮಕ್ಕಳು ವಿವಿಧ ಸಾಂಸ್ಕೃತಿಕ ಮತ್ತು ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-37-586315224</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>