<p>ಗುಂಡ್ಲುಪೇಟೆ: ಮಕ್ಕಳೊಳಗೆ ಸೃಜನಶೀಲ ಅಭಿರುಚಿ ಸೃಷ್ಟಿಸಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಪಿ.ಸತೀಶ್ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಯಿಂದ ನಡೆದ (ರಜಾ-ಮಜಾ) ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳಿಗೆ ಕಲಿಕೆ ಮತ್ತು ಶಾಲಾ ಪಠ್ಯಗಳನ್ನು ಓದುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸಬೇಕು. ಇದರಿಂದ ಮಕ್ಕಳ ಮನಸ್ಸು ಉಲ್ಲಾಸದಿಂದ ಪ್ರತಿಯೊಂದು ವಿಚಾರದಲ್ಲೂ ಆಸಕ್ತಿ ಹಾಗೂ ಅಭಿರುಚಿ ಮೂಡುತ್ತದೆ ಎಂದು ತಿಳಿಸಿದರು.</p>.<p>ಶಾಲೆಯ ಹಿರಿಯ ಮುಖ್ಯ ಶಿಕ್ಷಕ ದೊಡ್ಡಬಸವಯ್ಯ ಮಾತನಾಡಿ, ಮಕ್ಕಳ ಬೌದ್ಧಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿ ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ತಯಾರು ಮಾಡವ ಅವಕಾಶವನ್ನು ಬೇಸಿಗೆ ಶಿಬಿರಗಳು ಮಾಡುತ್ತವೆ. ಶಿಬಿರದಲ್ಲಿ ಕಲಿತ ಚಟುವಟಿಕೆಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ಗಾಯಕ ಮಯೂರ.ವಿ ಮಾತನಾಡಿ, ಬೇಸಿಗೆ ರಜೆಯ ಮೋಜಿನಲ್ಲಿ ಜೀವನಕ್ಕೆ ಬೇಕಾದ ಕೌಶಲಗಳನ್ನು ಕಲಿಸಿ, ಆನಂದವನ್ನು ಇಮ್ಮಡಿಗೊಳಿಸುವ ಅದ್ಭುತ ಮಾರ್ಗ ಬೇಸಿಗೆ ಶಿಬಿರ. ಬಗೆಬಗೆಯ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಕೂಳ್ಳಲು ಬೇಸಿಗೆ ಶಿಬಿರ ಅವಕಾಶ ಎಂಂದರು. ಗಾಯನದ ಮೂಲಕ ಮಕ್ಕಳನ್ನು ರಂಜಿಸಿದರು.</p>.<p>ಶಿಬಿರದ ಶಿಕ್ಷಕ ಮೋಹನಕುಮಾರ್ ಮಾತನಾಡಿ, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಪ್ರೇರಣೆಯಿಂದ 150ಕ್ಕೂ ಹೆಚ್ಚು ಮಕ್ಕಳು ಉಚಿತ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದು, ಶಿಬಿರ ನಡೆಸಲು ಸ್ಫೂರ್ತಿದಾಯಕವಾಗಿದೆ. ಶಿಬಿರದಲ್ಲಿ ಕಲಿತ ಮೌಲ್ಯಗಳು ಖಂಡಿತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.</p>.<p>ಮುಖ್ಯ ಶಿಕ್ಷಕ ಸಿದ್ದಾರ್ಥ್, ದೈಹಿಕ ಶಿಕ್ಷಕ ಸಿದ್ದಶೆಟ್ಟಿ, ಬಿ.ಆರ್.ಸಿ ಮಣಿಕಂಠಚಾರಿ, ಮಿಮಿಕ್ರಿ ರಾಜು ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-37-824787825</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ಮಕ್ಕಳೊಳಗೆ ಸೃಜನಶೀಲ ಅಭಿರುಚಿ ಸೃಷ್ಟಿಸಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಪಿ.ಸತೀಶ್ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಯಿಂದ ನಡೆದ (ರಜಾ-ಮಜಾ) ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳಿಗೆ ಕಲಿಕೆ ಮತ್ತು ಶಾಲಾ ಪಠ್ಯಗಳನ್ನು ಓದುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸಬೇಕು. ಇದರಿಂದ ಮಕ್ಕಳ ಮನಸ್ಸು ಉಲ್ಲಾಸದಿಂದ ಪ್ರತಿಯೊಂದು ವಿಚಾರದಲ್ಲೂ ಆಸಕ್ತಿ ಹಾಗೂ ಅಭಿರುಚಿ ಮೂಡುತ್ತದೆ ಎಂದು ತಿಳಿಸಿದರು.</p>.<p>ಶಾಲೆಯ ಹಿರಿಯ ಮುಖ್ಯ ಶಿಕ್ಷಕ ದೊಡ್ಡಬಸವಯ್ಯ ಮಾತನಾಡಿ, ಮಕ್ಕಳ ಬೌದ್ಧಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿ ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ತಯಾರು ಮಾಡವ ಅವಕಾಶವನ್ನು ಬೇಸಿಗೆ ಶಿಬಿರಗಳು ಮಾಡುತ್ತವೆ. ಶಿಬಿರದಲ್ಲಿ ಕಲಿತ ಚಟುವಟಿಕೆಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ಗಾಯಕ ಮಯೂರ.ವಿ ಮಾತನಾಡಿ, ಬೇಸಿಗೆ ರಜೆಯ ಮೋಜಿನಲ್ಲಿ ಜೀವನಕ್ಕೆ ಬೇಕಾದ ಕೌಶಲಗಳನ್ನು ಕಲಿಸಿ, ಆನಂದವನ್ನು ಇಮ್ಮಡಿಗೊಳಿಸುವ ಅದ್ಭುತ ಮಾರ್ಗ ಬೇಸಿಗೆ ಶಿಬಿರ. ಬಗೆಬಗೆಯ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಕೂಳ್ಳಲು ಬೇಸಿಗೆ ಶಿಬಿರ ಅವಕಾಶ ಎಂಂದರು. ಗಾಯನದ ಮೂಲಕ ಮಕ್ಕಳನ್ನು ರಂಜಿಸಿದರು.</p>.<p>ಶಿಬಿರದ ಶಿಕ್ಷಕ ಮೋಹನಕುಮಾರ್ ಮಾತನಾಡಿ, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಪ್ರೇರಣೆಯಿಂದ 150ಕ್ಕೂ ಹೆಚ್ಚು ಮಕ್ಕಳು ಉಚಿತ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದು, ಶಿಬಿರ ನಡೆಸಲು ಸ್ಫೂರ್ತಿದಾಯಕವಾಗಿದೆ. ಶಿಬಿರದಲ್ಲಿ ಕಲಿತ ಮೌಲ್ಯಗಳು ಖಂಡಿತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.</p>.<p>ಮುಖ್ಯ ಶಿಕ್ಷಕ ಸಿದ್ದಾರ್ಥ್, ದೈಹಿಕ ಶಿಕ್ಷಕ ಸಿದ್ದಶೆಟ್ಟಿ, ಬಿ.ಆರ್.ಸಿ ಮಣಿಕಂಠಚಾರಿ, ಮಿಮಿಕ್ರಿ ರಾಜು ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-37-824787825</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>