<p>ಹಲಗೂರು: ಸಮೀಪದ ಹುಲ್ಲಾಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಪರವಾಗಿ ಪೋಷಕರು ₹15 ಸಾವಿರ ಮೌಲ್ಯದ ನೀರು ಶುದ್ಧೀಕರಣ ಯಂತ್ರವನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.</p>.<p>ಗ್ರಾಮದ ಪೋಷಕರು ನಮ್ಮ ಶಾಲೆಯ ಏಳಿಗೆಗಾಗಿ ಕೈಜೋಡಿಸಿದ್ದು, ಶಾಲೆಗೆ ಅಗತ್ಯವಿರುವ ಹಲವಾರು ಮೂಲ ಸೌಕರ್ಯಗಳನ್ನು ಕಲ್ಪಿಸಿದ್ದಾರೆ. ಪ್ರತಿ ವರ್ಷ ಏಳನೇ ತರಗತಿ ಕಲಿತು ಬೀಳ್ಕೊಡುವ ಸಂಧರ್ಭದಲ್ಲಿ ಒಂದೊಂದು ಕೊಡುಗೆ ನೀಡಿದ್ದು, ಈ ಬಾರಿ ನೀರು ಶುದ್ಧೀಕರಣ ಯಂತ್ರ ನೀಡಿರುವುದು ಸಂತಸ ತಂದಿದೆ. ಶಾಲೆಯಲ್ಲಿ ಎಲ್ಲಾ ಮಕ್ಕಳಿಗೂ ಶುದ್ದೀಕರಿಸಿದ ನೀರು ನೀಡಲು ಸಹಕಾರಿಯಾಗಲಿದೆ. ಸಹಕಾರ ನೀಡಿದ ಪೋಷಕರಿಗೆ ಅಭಿನಂದನೆ ಸಲ್ಲಿಸುವೆ ಎಂದು ಮುಖ್ಯ ಶಿಕ್ಷಕಿ ಹೇಮಲತಾ ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಶಿಕ್ಷಕಿ ಶಿಲ್ಪಶ್ರೀ, ಅದರ್ಶ, ಅನ್ನಪೂರ್ಣ, ವಿದ್ಯಾರ್ಥಿಗಳಾದ ಹಂಸ, ಯೋಗಶ್ರೀ, ಯೋಗಿತಾ, ಸ್ನೇಹ, ಲಿಖಿತಾ, ಮಾನಸ, ಹರ್ಷಿತ್, ಪ್ರಜ್ವಲ್ ಗೌಡ ಮತ್ತು ಪೋಷಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-40-305768598</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಲಗೂರು: ಸಮೀಪದ ಹುಲ್ಲಾಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಪರವಾಗಿ ಪೋಷಕರು ₹15 ಸಾವಿರ ಮೌಲ್ಯದ ನೀರು ಶುದ್ಧೀಕರಣ ಯಂತ್ರವನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.</p>.<p>ಗ್ರಾಮದ ಪೋಷಕರು ನಮ್ಮ ಶಾಲೆಯ ಏಳಿಗೆಗಾಗಿ ಕೈಜೋಡಿಸಿದ್ದು, ಶಾಲೆಗೆ ಅಗತ್ಯವಿರುವ ಹಲವಾರು ಮೂಲ ಸೌಕರ್ಯಗಳನ್ನು ಕಲ್ಪಿಸಿದ್ದಾರೆ. ಪ್ರತಿ ವರ್ಷ ಏಳನೇ ತರಗತಿ ಕಲಿತು ಬೀಳ್ಕೊಡುವ ಸಂಧರ್ಭದಲ್ಲಿ ಒಂದೊಂದು ಕೊಡುಗೆ ನೀಡಿದ್ದು, ಈ ಬಾರಿ ನೀರು ಶುದ್ಧೀಕರಣ ಯಂತ್ರ ನೀಡಿರುವುದು ಸಂತಸ ತಂದಿದೆ. ಶಾಲೆಯಲ್ಲಿ ಎಲ್ಲಾ ಮಕ್ಕಳಿಗೂ ಶುದ್ದೀಕರಿಸಿದ ನೀರು ನೀಡಲು ಸಹಕಾರಿಯಾಗಲಿದೆ. ಸಹಕಾರ ನೀಡಿದ ಪೋಷಕರಿಗೆ ಅಭಿನಂದನೆ ಸಲ್ಲಿಸುವೆ ಎಂದು ಮುಖ್ಯ ಶಿಕ್ಷಕಿ ಹೇಮಲತಾ ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಶಿಕ್ಷಕಿ ಶಿಲ್ಪಶ್ರೀ, ಅದರ್ಶ, ಅನ್ನಪೂರ್ಣ, ವಿದ್ಯಾರ್ಥಿಗಳಾದ ಹಂಸ, ಯೋಗಶ್ರೀ, ಯೋಗಿತಾ, ಸ್ನೇಹ, ಲಿಖಿತಾ, ಮಾನಸ, ಹರ್ಷಿತ್, ಪ್ರಜ್ವಲ್ ಗೌಡ ಮತ್ತು ಪೋಷಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-40-305768598</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>