<p>ಹಲಗೂರು: ಪ್ರತಿಯೊಬ್ಬರು ನಿಮ್ಮ ಗ್ರಾಮದ ಎಲ್ಲ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಕೈ ಜೋಡಿಸಿ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಚ್.ಜಿ.ಶ್ರೀನಿವಾಸ್ ಮನವಿ ಮಾಡಿದರು.</p>.<p>ಮಳವಳ್ಳಿ ತಾ,ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಬ್ಯಾಡರಹಳ್ಳಿ ಇವರ ಆಶ್ರಯದಲ್ಲಿ ಬ್ಯಾಡರಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ‘ಸರ್ಕಾರಿ ಶಾಲೆ ದಾಖಲಾತಿ ಅಂದೋಲನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ತಾಲ್ಲೂಕಿನ ಖಾಸಗಿ ಶಾಲೆಗಳಲ್ಲಿಯೂ ಇಲ್ಲದ ಮಲ್ಟಿಮೀಡಿಯಾ ವ್ಯವಸ್ಥೆ ಸರ್ಕಾರಿ ಶಾಲೆಗಳಿಗೆ ಕಲ್ಪಿಸಲಾಗಿದೆ. ಆದ್ದರಿಂದ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳತ್ತ ಗಮನಹರಿಸಿ. ಸರ್ಕಾರದ ಈ ಮಹತ್ವದ ಕಾರ್ಯದ ಜೊತೆಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ನಾವೆಲ್ಲರೂ ಕೈಜೋಡಿಸಿ ಯಶಸ್ವಿ ಮಾಡೋಣ’ ಎಂದರು.</p>.<p>ಪಿಡಿಒ ಲಿಂಗಯ್ಯ ಮಾತನಾಡಿ, ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ ಎಂದರು.</p>.<p>ಶಿಕ್ಷಣ ಸಂಯೋಜಕ ದಯಾನಂದ್, ಬಾಬು, ಸಿ.ಆರ್.ಪಿ ಪುಟ್ಟರಾಜು, ಜಿ.ಎಸ್.ಕೃಷ್ಣ, ಮುಖ್ಯ ಶಿಕ್ಷಕ ತೇಜೋಮಯ, ಮಾಹಿತಿ ಶಿಕ್ಷಣ ಸಂಯೋಜಕ ಸುನೀಲ್ ಕುಮಾರ್, ಚುಂಚಣ್ಣ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-40-1725466092</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಲಗೂರು: ಪ್ರತಿಯೊಬ್ಬರು ನಿಮ್ಮ ಗ್ರಾಮದ ಎಲ್ಲ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಕೈ ಜೋಡಿಸಿ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಚ್.ಜಿ.ಶ್ರೀನಿವಾಸ್ ಮನವಿ ಮಾಡಿದರು.</p>.<p>ಮಳವಳ್ಳಿ ತಾ,ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಬ್ಯಾಡರಹಳ್ಳಿ ಇವರ ಆಶ್ರಯದಲ್ಲಿ ಬ್ಯಾಡರಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ‘ಸರ್ಕಾರಿ ಶಾಲೆ ದಾಖಲಾತಿ ಅಂದೋಲನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ತಾಲ್ಲೂಕಿನ ಖಾಸಗಿ ಶಾಲೆಗಳಲ್ಲಿಯೂ ಇಲ್ಲದ ಮಲ್ಟಿಮೀಡಿಯಾ ವ್ಯವಸ್ಥೆ ಸರ್ಕಾರಿ ಶಾಲೆಗಳಿಗೆ ಕಲ್ಪಿಸಲಾಗಿದೆ. ಆದ್ದರಿಂದ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳತ್ತ ಗಮನಹರಿಸಿ. ಸರ್ಕಾರದ ಈ ಮಹತ್ವದ ಕಾರ್ಯದ ಜೊತೆಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ನಾವೆಲ್ಲರೂ ಕೈಜೋಡಿಸಿ ಯಶಸ್ವಿ ಮಾಡೋಣ’ ಎಂದರು.</p>.<p>ಪಿಡಿಒ ಲಿಂಗಯ್ಯ ಮಾತನಾಡಿ, ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ ಎಂದರು.</p>.<p>ಶಿಕ್ಷಣ ಸಂಯೋಜಕ ದಯಾನಂದ್, ಬಾಬು, ಸಿ.ಆರ್.ಪಿ ಪುಟ್ಟರಾಜು, ಜಿ.ಎಸ್.ಕೃಷ್ಣ, ಮುಖ್ಯ ಶಿಕ್ಷಕ ತೇಜೋಮಯ, ಮಾಹಿತಿ ಶಿಕ್ಷಣ ಸಂಯೋಜಕ ಸುನೀಲ್ ಕುಮಾರ್, ಚುಂಚಣ್ಣ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-40-1725466092</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>