<p>ಹಾನಗಲ್: ತಾಲ್ಲೂಕಿನ ಪ್ರತಿಷ್ಠಿತ ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಘದ 15 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಸಿದ್ಧತೆಗಳು ನಡೆಯುತ್ತಿದ್ದು, ಜೂ 14 ರಂದು ಇಲ್ಲಿನ ಕುಮಾರೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಮೂರು ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.</p>.<p>ತಾತ್ಕಾಲಿಕ ಯಾದಿ ಪ್ರಕಾರ ಸದ್ಯಕ್ಕೆ 1178 ಮತದಾರರ ಇದ್ದು, ಮೇ 31 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೂ 6 ತನಕ ನಡೆಯಲಿದೆ. ಜೂ. 7ರಂದು ನಾಮಪತ್ರಗಳ ಪರಿಶೀಲನೆ, 8 ರಂದು ನಾಮಪತ್ರ ವಾಪಸ್ಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ಮ 3 ಗಂಟೆ ತನಕ ಅವಕಾಶ ಇದೆ. ಅಂದು ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿ ಚಿನ್ಹೆಗಳ ಹಂಚಿಕೆ ನಡೆಯಲಿದೆ. ಜೂ 14 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯುತ್ತದೆ. ಬಳಿಕ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆ ಮಾಡುತ್ತೇವೆ ಎಂದು ಸಹಾಯಕ ಚುನಾವಣಾಧಿಕಾರಿ ಸುಭಾಸ ಮಾದರ ತಿಳಿಸಿದ್ದಾರೆ.</p>.<p>9 ಸ್ಥಾನ ಸಾಮಾನ್ಯ, 1 ಎಸ್ಸಿ, 1 ಎಸ್ಟಿ, 2 ಮಹಿಳೆ ಮತ್ತು 2 ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿದೆ. ಮೇ 29 ರಂದು ಅರ್ಹ ಮತದಾರರ ಯಾದಿ ಬಿಡುಗಡೆಗೊಳ್ಳಲಿದ್ದು, ಈಗಿರುವ ಮತದಾರರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ವ್ಯವಸ್ಥಿತ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಹರ ಬಳಿಗಾರ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-22-1591523222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾನಗಲ್: ತಾಲ್ಲೂಕಿನ ಪ್ರತಿಷ್ಠಿತ ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಘದ 15 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಸಿದ್ಧತೆಗಳು ನಡೆಯುತ್ತಿದ್ದು, ಜೂ 14 ರಂದು ಇಲ್ಲಿನ ಕುಮಾರೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಮೂರು ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.</p>.<p>ತಾತ್ಕಾಲಿಕ ಯಾದಿ ಪ್ರಕಾರ ಸದ್ಯಕ್ಕೆ 1178 ಮತದಾರರ ಇದ್ದು, ಮೇ 31 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೂ 6 ತನಕ ನಡೆಯಲಿದೆ. ಜೂ. 7ರಂದು ನಾಮಪತ್ರಗಳ ಪರಿಶೀಲನೆ, 8 ರಂದು ನಾಮಪತ್ರ ವಾಪಸ್ಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ಮ 3 ಗಂಟೆ ತನಕ ಅವಕಾಶ ಇದೆ. ಅಂದು ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿ ಚಿನ್ಹೆಗಳ ಹಂಚಿಕೆ ನಡೆಯಲಿದೆ. ಜೂ 14 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯುತ್ತದೆ. ಬಳಿಕ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆ ಮಾಡುತ್ತೇವೆ ಎಂದು ಸಹಾಯಕ ಚುನಾವಣಾಧಿಕಾರಿ ಸುಭಾಸ ಮಾದರ ತಿಳಿಸಿದ್ದಾರೆ.</p>.<p>9 ಸ್ಥಾನ ಸಾಮಾನ್ಯ, 1 ಎಸ್ಸಿ, 1 ಎಸ್ಟಿ, 2 ಮಹಿಳೆ ಮತ್ತು 2 ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿದೆ. ಮೇ 29 ರಂದು ಅರ್ಹ ಮತದಾರರ ಯಾದಿ ಬಿಡುಗಡೆಗೊಳ್ಳಲಿದ್ದು, ಈಗಿರುವ ಮತದಾರರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ವ್ಯವಸ್ಥಿತ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಹರ ಬಳಿಗಾರ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-22-1591523222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>