<p>ಹನೂರು: ‘ಶಿಕ್ಷಣ ಇಲಾಖೆಯ ಜೊತೆಗೆ ಶಿಕ್ಷಕರ ಸಂಘಗಳು ಸಹಕಾರ ನೀಡುವುದರಿಂದ ಶಿಕ್ಷಕರ ಸಮಸ್ಯೆ ಬಗೆಹರಿಯಲಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ ತಿಳಿಸಿದರು.</p>.<p>ಪಟ್ಟಣದ ಬಿಆರ್ಸಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸಂಘದ ಎಲ್ಲಾ ಸದಸ್ಯರು ಕೂಡ ಶಿಕ್ಷಕರ ಶ್ರೇಯೋಭಿವೃದ್ಧಿಗೆ ಪಣತೊಟ್ಟು ಬಂದಿದ್ದೀರಿ. ಸಂಘ ಹಾಗೂ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಇದ್ದರೆ ಮಾತ್ರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ನಿಮ್ಮ ಸಲಹೆ ಸಹಕಾರ ಪಡೆದು ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇಲ್ಲಿಯವರೆಗೂ ಬಗೆಹರಿಯದ ಸಮಸ್ಯೆಗಳಿದ್ದರೆ ಸೂಕ್ತ ದಾಖಲಾತಿಗಳನ್ನು ಒದಗಿಸಿದ್ದಲ್ಲಿ ಖಂಡಿತ ಸಮಸ್ಯೆಗಳಿಗೆ ಮುಕ್ತಿ ಹಾಡೋಣ’ ಎಂದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಮಾದೇಶ್ ಮಾತನಾಡಿ, ‘ಶಿಕ್ಷಕರ ಸಮಸ್ಯೆಗಳಿಗೆ ನಾವೆಲ್ಲರೂ ಸ್ಪಂದಿಸಬೇಕಾಗುತ್ತದೆ. ಜೊತೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರು ಕೂಡ ಕೈಜೋಡಿಸಿದಾಗ ಮಾತ್ರ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ’ ಎಂದರು.</p>.<p>ಬಿಆರ್ಸಿ ವೆಂಕಟೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹನೂರು ಘಟಕದ ಉಪಾಧ್ಯಕ್ಷ ಗಿರೀಶ್, ಪ್ರಧಾನ ಕಾರ್ಯದರ್ಶಿ ಮಹದೇಶ್ ಸಿ, ಖಜಾಂಚಿ ಶಿವಕುಮಾರಿ ಹಾಗೂ ನಿರ್ಗಮಿತ ಸಂಘದ ಸದಸ್ಯರು, ಈ ಸಿಒಗಳಾದ ಚಿನ್ನಪ್ಪಯ, ಮಹೇಶ್, ಅಶೋಕ್, ನಿವೃತ್ತ ಶಿಕ್ಷಕರು ಹಾಗೂ ಹಾಲಿ ಶಿಕ್ಷಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-37-1601032667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹನೂರು: ‘ಶಿಕ್ಷಣ ಇಲಾಖೆಯ ಜೊತೆಗೆ ಶಿಕ್ಷಕರ ಸಂಘಗಳು ಸಹಕಾರ ನೀಡುವುದರಿಂದ ಶಿಕ್ಷಕರ ಸಮಸ್ಯೆ ಬಗೆಹರಿಯಲಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ ತಿಳಿಸಿದರು.</p>.<p>ಪಟ್ಟಣದ ಬಿಆರ್ಸಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸಂಘದ ಎಲ್ಲಾ ಸದಸ್ಯರು ಕೂಡ ಶಿಕ್ಷಕರ ಶ್ರೇಯೋಭಿವೃದ್ಧಿಗೆ ಪಣತೊಟ್ಟು ಬಂದಿದ್ದೀರಿ. ಸಂಘ ಹಾಗೂ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಇದ್ದರೆ ಮಾತ್ರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ನಿಮ್ಮ ಸಲಹೆ ಸಹಕಾರ ಪಡೆದು ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇಲ್ಲಿಯವರೆಗೂ ಬಗೆಹರಿಯದ ಸಮಸ್ಯೆಗಳಿದ್ದರೆ ಸೂಕ್ತ ದಾಖಲಾತಿಗಳನ್ನು ಒದಗಿಸಿದ್ದಲ್ಲಿ ಖಂಡಿತ ಸಮಸ್ಯೆಗಳಿಗೆ ಮುಕ್ತಿ ಹಾಡೋಣ’ ಎಂದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಮಾದೇಶ್ ಮಾತನಾಡಿ, ‘ಶಿಕ್ಷಕರ ಸಮಸ್ಯೆಗಳಿಗೆ ನಾವೆಲ್ಲರೂ ಸ್ಪಂದಿಸಬೇಕಾಗುತ್ತದೆ. ಜೊತೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರು ಕೂಡ ಕೈಜೋಡಿಸಿದಾಗ ಮಾತ್ರ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ’ ಎಂದರು.</p>.<p>ಬಿಆರ್ಸಿ ವೆಂಕಟೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹನೂರು ಘಟಕದ ಉಪಾಧ್ಯಕ್ಷ ಗಿರೀಶ್, ಪ್ರಧಾನ ಕಾರ್ಯದರ್ಶಿ ಮಹದೇಶ್ ಸಿ, ಖಜಾಂಚಿ ಶಿವಕುಮಾರಿ ಹಾಗೂ ನಿರ್ಗಮಿತ ಸಂಘದ ಸದಸ್ಯರು, ಈ ಸಿಒಗಳಾದ ಚಿನ್ನಪ್ಪಯ, ಮಹೇಶ್, ಅಶೋಕ್, ನಿವೃತ್ತ ಶಿಕ್ಷಕರು ಹಾಗೂ ಹಾಲಿ ಶಿಕ್ಷಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-37-1601032667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>