<p>ಹರಿಹರ: ‘ಆತ್ಮವಿಶ್ವಾಸ ಮತ್ತು ಕುತೂಹಲವು ವಿದ್ಯಾರ್ಥಿಗಳನ್ನು ಉತ್ತಮ ನಾಯಕರನ್ನಾಗಿ ರೂಪಿಸುತ್ತದೆ’ ಎಂದು ಕುಮಾರಪಟ್ಟಣಂನ ಗ್ರಾಸಿಮ್ ಕಂಪನಿಯ ವಿದ್ಯುತ್ ನಿರ್ವಹಣಾ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಚಂದ್ರೇಶ್ ಅಗರವಾಲ್ ಹೇಳಿದರು.</p>.<p>ನಗರದ ಕಿರ್ಲೋಸ್ಕರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ನಿರ್ವಹಣಾ ಉತ್ಸವ ‘ಬಿಜ್ಜೈಮ 2ಕೆ26’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾಯಕನಾಗುವವನಿಗೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಆ ನಿರ್ಧಾರಗಳ ಮೇಲೆ ದೃಢವಾಗಿ ನಿಲ್ಲಲು ಆತ್ಮವಿಶ್ವಾಸ ಮುಖ್ಯ. ಹಾಗೆಯೇ, ಕುತೂಹಲವು ನಿರಂತರ ಕಲಿಕೆ ಮತ್ತು ನಾವೀನ್ಯತೆಯನ್ನು ಪ್ರೇರೇಪಿಸುತ್ತದೆ. ಇಂದಿನ ಕ್ರಿಯಾಶೀಲ ಕಾರ್ಪೊರೇಟ್ ಜಗತ್ತಿನಲ್ಲಿ ಇವೆರಡೂ ಅತ್ಯಗತ್ಯ. ವಿದ್ಯಾರ್ಥಿಗಳು ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮುನ್ನೆಲೆಗೆ ಬರಬೇಕು’ ಎಂದು ಸಲಹೆ ನೀಡಿದರು.</p>.<p>‘ವಿದ್ಯಾರ್ಥಿಗಳಲ್ಲಿ ಅಗತ್ಯ ನಿರ್ವಹಣಾ ಕೌಶಲಗಳನ್ನು ಪೋಷಿಸುವಲ್ಲಿ ಅನುಭವಾತ್ಮಕ ಕಲಿಕೆಯು ಅತ್ಯಂತ ಪ್ರಾಮುಖ್ಯತೆ ಹೊಂದಿದೆ’ ಎಂದು ಕಾಲೇಜಿನ ಪ್ರಾಚಾರ್ಯ ವೈ.ಎಂ.ಗಿರೀಶ್ ತಿಳಿಸಿದರು.</p>.<p>ಉತ್ಸವದಲ್ಲಿ ರಾಜ್ಯದ ವಿವಿಧೆಡೆಯ 14 ವಿವಿಧ ಕಾಲೇಜುಗಳಿಂದ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಬಿಎ ವಿಭಾಗದ ಮುಖ್ಯಸ್ಥ ಪ್ರೊ.ಕಿರಣ್ ಕುಮಾರ್ ಜಿ.ಕೆ, ಪ್ರೊ.ಯೋಗೇಶ್ ಎನ್, ಪ್ರಾಧ್ಯಾಪಕಿ ಸವಿತಾ ಜಿ. ಲಕ್ಕೋಳ್ ಸೇರಿ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-43-1271086817</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ‘ಆತ್ಮವಿಶ್ವಾಸ ಮತ್ತು ಕುತೂಹಲವು ವಿದ್ಯಾರ್ಥಿಗಳನ್ನು ಉತ್ತಮ ನಾಯಕರನ್ನಾಗಿ ರೂಪಿಸುತ್ತದೆ’ ಎಂದು ಕುಮಾರಪಟ್ಟಣಂನ ಗ್ರಾಸಿಮ್ ಕಂಪನಿಯ ವಿದ್ಯುತ್ ನಿರ್ವಹಣಾ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಚಂದ್ರೇಶ್ ಅಗರವಾಲ್ ಹೇಳಿದರು.</p>.<p>ನಗರದ ಕಿರ್ಲೋಸ್ಕರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ನಿರ್ವಹಣಾ ಉತ್ಸವ ‘ಬಿಜ್ಜೈಮ 2ಕೆ26’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾಯಕನಾಗುವವನಿಗೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಆ ನಿರ್ಧಾರಗಳ ಮೇಲೆ ದೃಢವಾಗಿ ನಿಲ್ಲಲು ಆತ್ಮವಿಶ್ವಾಸ ಮುಖ್ಯ. ಹಾಗೆಯೇ, ಕುತೂಹಲವು ನಿರಂತರ ಕಲಿಕೆ ಮತ್ತು ನಾವೀನ್ಯತೆಯನ್ನು ಪ್ರೇರೇಪಿಸುತ್ತದೆ. ಇಂದಿನ ಕ್ರಿಯಾಶೀಲ ಕಾರ್ಪೊರೇಟ್ ಜಗತ್ತಿನಲ್ಲಿ ಇವೆರಡೂ ಅತ್ಯಗತ್ಯ. ವಿದ್ಯಾರ್ಥಿಗಳು ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮುನ್ನೆಲೆಗೆ ಬರಬೇಕು’ ಎಂದು ಸಲಹೆ ನೀಡಿದರು.</p>.<p>‘ವಿದ್ಯಾರ್ಥಿಗಳಲ್ಲಿ ಅಗತ್ಯ ನಿರ್ವಹಣಾ ಕೌಶಲಗಳನ್ನು ಪೋಷಿಸುವಲ್ಲಿ ಅನುಭವಾತ್ಮಕ ಕಲಿಕೆಯು ಅತ್ಯಂತ ಪ್ರಾಮುಖ್ಯತೆ ಹೊಂದಿದೆ’ ಎಂದು ಕಾಲೇಜಿನ ಪ್ರಾಚಾರ್ಯ ವೈ.ಎಂ.ಗಿರೀಶ್ ತಿಳಿಸಿದರು.</p>.<p>ಉತ್ಸವದಲ್ಲಿ ರಾಜ್ಯದ ವಿವಿಧೆಡೆಯ 14 ವಿವಿಧ ಕಾಲೇಜುಗಳಿಂದ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಬಿಎ ವಿಭಾಗದ ಮುಖ್ಯಸ್ಥ ಪ್ರೊ.ಕಿರಣ್ ಕುಮಾರ್ ಜಿ.ಕೆ, ಪ್ರೊ.ಯೋಗೇಶ್ ಎನ್, ಪ್ರಾಧ್ಯಾಪಕಿ ಸವಿತಾ ಜಿ. ಲಕ್ಕೋಳ್ ಸೇರಿ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-43-1271086817</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>