<p>ಹಾರೋಹಳ್ಳಿ: ಪ್ರಸ್ತುತ ನಾಗರಿಕ ಸಮಾಜದಲ್ಲಿ ದುರ್ಬಲರು ಮತ್ತು ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಚಿಂತನೆಗಳು ಮಹತ್ವಪೂರ್ಣವಾಗಿದೆ ಎಂದು ಕರ್ನಾಟಕ ಸಮತಾ ಸೈನಿಕ ದಳದ ರಾಜ್ಯ ಯುವ ಘಟಕದ ಅಧ್ಯಕ್ಷ ಕೋಟೆ ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಟಿ.ಹೊಸಹಳ್ಳಿ ಗ್ರಾಮದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಶ್ರೀಲಕ್ಷ್ಮಿ ವೆಂಕಟೇಶ್ವರ ಕಲಾ ಟ್ರಸ್ಟ್ ಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಅವರು ಮಾತನಾಡಿದರು.ಯುವ ಜನತೆ ಸಂವಿಧಾನ ಅಧ್ಯಯನ ಮಾಡಬೇಕು. ಸಮಾಜದಲ್ಲಿ ಸಾಮಾಜಿಕ ಸಮಾನತೆ ತರುವಲ್ಲಿ ಪ್ರಯತ್ನಿಸಬೇಕು ಎಂದರು.</p>.<p>ಜ್ಙಾನಕ್ಕಿಂತ ದೊಡ್ಡ ಆಯುಧವಿಲ್ಲ. ಇದನ್ನು ಅರಿತಿದ್ದ ಅಂಬೇಡ್ಕರ್ ಜೀವನವನ್ನು ಶಿಕ್ಷಣ,ಸಂಘಟನೆ ಮತ್ತು ಹೋರಾಟಕ್ಕೆ ಮೀಸಲಿಟ್ಟಿದ್ದರು. ಹಾಗಾಗಿ ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಟಿ.ಹೊಸಹಳ್ಳಿ ಗ್ರಾ.ಪಂ ಪಿಡಿಒ ಮಂಜುಳಾ ಸಲಹೆ ಮಾಡಿದರು.</p>.<p>ಕಲಾತಂಡಗಳೊಂದಿಗೆ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಸಮತಾ ಸೈನಿಕ ದಳದ ಜಿ.ಗೋವಿಂದಯ್ಯ, ಚಂದ್ರು, ಕೋಟೆ ಪ್ರಕಾಶ್, ಮಧುಸೂಧನ್, ಬಾಬು ರೆಡ್ಡಿ, ಮಲ್ಲಿಕಾರ್ಜುನ್, ಟ್ರಸ್ಟ್ ಅಧ್ಯಕ್ಷ ವೆಂಕಟೇಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-14-1696063952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾರೋಹಳ್ಳಿ: ಪ್ರಸ್ತುತ ನಾಗರಿಕ ಸಮಾಜದಲ್ಲಿ ದುರ್ಬಲರು ಮತ್ತು ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಚಿಂತನೆಗಳು ಮಹತ್ವಪೂರ್ಣವಾಗಿದೆ ಎಂದು ಕರ್ನಾಟಕ ಸಮತಾ ಸೈನಿಕ ದಳದ ರಾಜ್ಯ ಯುವ ಘಟಕದ ಅಧ್ಯಕ್ಷ ಕೋಟೆ ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಟಿ.ಹೊಸಹಳ್ಳಿ ಗ್ರಾಮದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಶ್ರೀಲಕ್ಷ್ಮಿ ವೆಂಕಟೇಶ್ವರ ಕಲಾ ಟ್ರಸ್ಟ್ ಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಅವರು ಮಾತನಾಡಿದರು.ಯುವ ಜನತೆ ಸಂವಿಧಾನ ಅಧ್ಯಯನ ಮಾಡಬೇಕು. ಸಮಾಜದಲ್ಲಿ ಸಾಮಾಜಿಕ ಸಮಾನತೆ ತರುವಲ್ಲಿ ಪ್ರಯತ್ನಿಸಬೇಕು ಎಂದರು.</p>.<p>ಜ್ಙಾನಕ್ಕಿಂತ ದೊಡ್ಡ ಆಯುಧವಿಲ್ಲ. ಇದನ್ನು ಅರಿತಿದ್ದ ಅಂಬೇಡ್ಕರ್ ಜೀವನವನ್ನು ಶಿಕ್ಷಣ,ಸಂಘಟನೆ ಮತ್ತು ಹೋರಾಟಕ್ಕೆ ಮೀಸಲಿಟ್ಟಿದ್ದರು. ಹಾಗಾಗಿ ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಟಿ.ಹೊಸಹಳ್ಳಿ ಗ್ರಾ.ಪಂ ಪಿಡಿಒ ಮಂಜುಳಾ ಸಲಹೆ ಮಾಡಿದರು.</p>.<p>ಕಲಾತಂಡಗಳೊಂದಿಗೆ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಸಮತಾ ಸೈನಿಕ ದಳದ ಜಿ.ಗೋವಿಂದಯ್ಯ, ಚಂದ್ರು, ಕೋಟೆ ಪ್ರಕಾಶ್, ಮಧುಸೂಧನ್, ಬಾಬು ರೆಡ್ಡಿ, ಮಲ್ಲಿಕಾರ್ಜುನ್, ಟ್ರಸ್ಟ್ ಅಧ್ಯಕ್ಷ ವೆಂಕಟೇಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-14-1696063952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>