<p>ಹಾರೋಹಳ್ಳಿ: ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡವನ್ನು ಶಾಸಕ ಇಕ್ಬಾಲ್ ಹುಸೇನ್ ಪರಿಶೀಲಿಸಿದರು.</p>.<p>ಮಕ್ಕಳಿಗೆ ಆಸ್ತಿ ಮಾಡುತ್ತೀವೋ ಇಲ್ಲವೋ ಗೊತ್ತಿಲ್ಲ. ಆದರೆ, ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಒಂದು ಶಾಲೆ ನೂರು ದೇಗುಲಗಳಿಗೆ ಸಮ ಎಂದು ಅಭಿಪ್ರಾಯಪಟ್ಟರು.</p>.<p>ರಾಜ್ಯದಾದ್ಯಂತ ಗುಣಮಟ್ಟದ ಶಿಕ್ಷಣ ನೀಡಲು ಕೆಪಿಎಸ್ ಶಾಲೆ ತೆರೆಯಲಾಗುತ್ತಿದೆ. ಸಿಎಸ್ಆರ್ ಅನುದಾನದಲ್ಲಿ ಯಾವ ಖಾಸಗಿ ಶಾಲೆಗಳಿಗೂ ಕಮ್ಮಿ ಇಲ್ಲದಂತೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗುವುದು ಎಂದರು.</p>.<p>ಮ್ಯಾಗ್ನೆಟ್ ಶಾಲೆ ವಿಚಾರದಲ್ಲಿ ಗೊಂದಲ ಬೇಡ. ಯಾವುದೇ ರೀತಿಯ ವದಂತಿಗಳಿಗೂ ಕಿವಿಗೊಡಬೇಡಿ. ಗ್ರಾಮದ ಶಾಲೆ ಮುಚುತ್ತದೆ ಎಂದು ಆಲೋಚನೆ ಮಾಡಬೇಡಿ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವ ಬಗ್ಗೆ ಮಾತ್ರ ಗಮನ ಹರಿಸಿ. ಕೆಪಿಎಸ್ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ದೊರೆಯಲಿದೆ ಎಂದರು.</p>.<p>ಡಿಡಿಪಿಐ ಸ್ವಾಮಿ, ಬಿಇಒ ಮತ್ತಿಗೌಡ, ಪಿಡಿಒ ಮಹೇಶ್, ಕೇಬಲ್ ರವಿ, ಲೋಕೇಶ್, ಸಣ್ಣಪ್ಪ, ಹೊನ್ನಗಿರಿಗೌಡ, ಕುಮಾರ್ ರಾವ್, ಹರೀಶ್, ಬಸವರಾಜು, ಎಸ್ಡಿಎಂಸಿ ಅಧ್ಯಕ್ಷ ಚೀಲೂರು ಮುನಿರಾಜು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-14-977449547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾರೋಹಳ್ಳಿ: ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡವನ್ನು ಶಾಸಕ ಇಕ್ಬಾಲ್ ಹುಸೇನ್ ಪರಿಶೀಲಿಸಿದರು.</p>.<p>ಮಕ್ಕಳಿಗೆ ಆಸ್ತಿ ಮಾಡುತ್ತೀವೋ ಇಲ್ಲವೋ ಗೊತ್ತಿಲ್ಲ. ಆದರೆ, ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಒಂದು ಶಾಲೆ ನೂರು ದೇಗುಲಗಳಿಗೆ ಸಮ ಎಂದು ಅಭಿಪ್ರಾಯಪಟ್ಟರು.</p>.<p>ರಾಜ್ಯದಾದ್ಯಂತ ಗುಣಮಟ್ಟದ ಶಿಕ್ಷಣ ನೀಡಲು ಕೆಪಿಎಸ್ ಶಾಲೆ ತೆರೆಯಲಾಗುತ್ತಿದೆ. ಸಿಎಸ್ಆರ್ ಅನುದಾನದಲ್ಲಿ ಯಾವ ಖಾಸಗಿ ಶಾಲೆಗಳಿಗೂ ಕಮ್ಮಿ ಇಲ್ಲದಂತೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗುವುದು ಎಂದರು.</p>.<p>ಮ್ಯಾಗ್ನೆಟ್ ಶಾಲೆ ವಿಚಾರದಲ್ಲಿ ಗೊಂದಲ ಬೇಡ. ಯಾವುದೇ ರೀತಿಯ ವದಂತಿಗಳಿಗೂ ಕಿವಿಗೊಡಬೇಡಿ. ಗ್ರಾಮದ ಶಾಲೆ ಮುಚುತ್ತದೆ ಎಂದು ಆಲೋಚನೆ ಮಾಡಬೇಡಿ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವ ಬಗ್ಗೆ ಮಾತ್ರ ಗಮನ ಹರಿಸಿ. ಕೆಪಿಎಸ್ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ದೊರೆಯಲಿದೆ ಎಂದರು.</p>.<p>ಡಿಡಿಪಿಐ ಸ್ವಾಮಿ, ಬಿಇಒ ಮತ್ತಿಗೌಡ, ಪಿಡಿಒ ಮಹೇಶ್, ಕೇಬಲ್ ರವಿ, ಲೋಕೇಶ್, ಸಣ್ಣಪ್ಪ, ಹೊನ್ನಗಿರಿಗೌಡ, ಕುಮಾರ್ ರಾವ್, ಹರೀಶ್, ಬಸವರಾಜು, ಎಸ್ಡಿಎಂಸಿ ಅಧ್ಯಕ್ಷ ಚೀಲೂರು ಮುನಿರಾಜು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-14-977449547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>