<p>ಹಾಸನ: ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಸೇವನೆ ಅತಿ ಅಗತ್ಯ ಎಂದು ವೈದ್ಯೆ ಡಾ.ಸೌಮ್ಯ ಮಣಿ ಹೇಳಿದರು.</p>.<p>ಇಲ್ಲಿನ ವಿಜಯನಗರ ಬಡಾವಣೆಯ ಟೈಮ್ಸ್ ಅಂತರ ರಾಷ್ಟ್ರೀಯ ಶಾಲೆಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪೋಷಕರು ಡಯಟ್ ಹೆಸರಿನಲ್ಲಿ ಮಕ್ಕಳಿಗೂ ಸತ್ವಯುತ ಆಹಾರವನ್ನು ನೀಡದೇ ಅವರ ಬೆಳವಣಿಗೆ ಕುಂಠಿತಗೊಳಿಸಬೇಡಿ. ಉತ್ತಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯು ಅವರ ಗ್ರಹಣ ಶಕ್ತಿಯನ್ನು ಹೆಚ್ಚಿಸುತ್ತದೆ. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಬಗ್ಗೆ ಮಹತ್ವದ ಮಾಹಿತಿ ನೀಡಿದರು.</p>.<p>ವಕೀಲ ರಾಜು ಕಶ್ಯಪ್ ಮಾತನಾಡಿ, ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸಿ. ಪೋಷಕರೂ ಮೊಬೈಲ್ಗೆ ವಿರಾಮ ನೀಡಿ, ಮಕ್ಕಳ ಜೊತೆ ಕಾಲ ಕಳೆಯಬೇಕು ಎಂದು ಹೇಳಿದರು.</p>.<p>ಟೈಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಬಿ.ಕೆ. ಟೈಮ್ಸ್ ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಬೇಕಾದ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣವನ್ನು ನೀಡುವಲ್ಲಿ ಟೈಮ್ಸ್ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರತಿಷ್ಠೆ, ಅಂತಸ್ತನ್ನು ಬದಿಗಿಟ್ಟು ಪುಟ್ಟ ಮಕ್ಕಳನ್ನು ಹೊರಗೆ ಆಡಲು ಬಿಡಿ. ಅಜ್ಜ– ಅಜ್ಜಿಯರ ಬಾಂಧವ್ಯದ ಮಡಿಲಲ್ಲಿ ಬೆಳೆಯಲು ಬಿಟ್ಟು ಅವರ ಅನುಭವದ ಒಡನಾಟ ಮಕ್ಕಳಲ್ಲಿ ಸಹ ಜೀವನವನ್ನು ಕಲಿಯುವಂತಾಗಲಿ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-36-1541637575</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಸೇವನೆ ಅತಿ ಅಗತ್ಯ ಎಂದು ವೈದ್ಯೆ ಡಾ.ಸೌಮ್ಯ ಮಣಿ ಹೇಳಿದರು.</p>.<p>ಇಲ್ಲಿನ ವಿಜಯನಗರ ಬಡಾವಣೆಯ ಟೈಮ್ಸ್ ಅಂತರ ರಾಷ್ಟ್ರೀಯ ಶಾಲೆಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪೋಷಕರು ಡಯಟ್ ಹೆಸರಿನಲ್ಲಿ ಮಕ್ಕಳಿಗೂ ಸತ್ವಯುತ ಆಹಾರವನ್ನು ನೀಡದೇ ಅವರ ಬೆಳವಣಿಗೆ ಕುಂಠಿತಗೊಳಿಸಬೇಡಿ. ಉತ್ತಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯು ಅವರ ಗ್ರಹಣ ಶಕ್ತಿಯನ್ನು ಹೆಚ್ಚಿಸುತ್ತದೆ. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಬಗ್ಗೆ ಮಹತ್ವದ ಮಾಹಿತಿ ನೀಡಿದರು.</p>.<p>ವಕೀಲ ರಾಜು ಕಶ್ಯಪ್ ಮಾತನಾಡಿ, ಮಕ್ಕಳನ್ನು ಮೊಬೈಲ್ನಿಂದ ದೂರವಿರಿಸಿ. ಪೋಷಕರೂ ಮೊಬೈಲ್ಗೆ ವಿರಾಮ ನೀಡಿ, ಮಕ್ಕಳ ಜೊತೆ ಕಾಲ ಕಳೆಯಬೇಕು ಎಂದು ಹೇಳಿದರು.</p>.<p>ಟೈಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಬಿ.ಕೆ. ಟೈಮ್ಸ್ ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಬೇಕಾದ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣವನ್ನು ನೀಡುವಲ್ಲಿ ಟೈಮ್ಸ್ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರತಿಷ್ಠೆ, ಅಂತಸ್ತನ್ನು ಬದಿಗಿಟ್ಟು ಪುಟ್ಟ ಮಕ್ಕಳನ್ನು ಹೊರಗೆ ಆಡಲು ಬಿಡಿ. ಅಜ್ಜ– ಅಜ್ಜಿಯರ ಬಾಂಧವ್ಯದ ಮಡಿಲಲ್ಲಿ ಬೆಳೆಯಲು ಬಿಟ್ಟು ಅವರ ಅನುಭವದ ಒಡನಾಟ ಮಕ್ಕಳಲ್ಲಿ ಸಹ ಜೀವನವನ್ನು ಕಲಿಯುವಂತಾಗಲಿ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-36-1541637575</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>