<p>ಹಾಸನ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶಿಸ್ತು ಹಾಗೂ ನಿರಂತರ ಅಧ್ಯಯನವನ್ನು ಜೀವನದ ಭಾಗವನ್ನಾಗಿ ಮಾಡಿಕೊಂಡಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಬಹುದು’ ಎಂದು ವೈದ್ಯ ಡಾ.ಅಂಜನಪ್ಪ ಟಿ.ಎಚ್.ಅಭಿಪ್ರಾಯಪಟ್ಟರು.</p>.<p>ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಐ ಆಮ್ ದ ಬೆಸ್ಟ್’ ಎನ್ನುವ ಧನಾತ್ಮಕ ಚಿಂತನೆಯೇ ವ್ಯಕ್ತಿತ್ವ ವಿಕಸನದ ಮೊದಲ ಹೆಜ್ಜೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಸಾಮರ್ಥ್ಯವನ್ನು ಅರಿತುಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ನಮ್ಮನ್ನು ನಾವು ನಂಬಿಕೊಳ್ಳುವ ಮನೋಭಾವ ಬೆಳೆಸಿಕೊಂಡರೆ ಬದುಕಿನ ಹಲವು ಸವಾಲುಗಳನ್ನು ಸುಲಭವಾಗಿ ಎದುರಿಸಬಹುದು’ ಎಂದು ಸಲಹೆ ನೀಡಿದರು.</p>.<p>‘ಜೀವನದಲ್ಲಿ ಸಾಧನೆ ಮಾಡಲು ಕೇವಲ ಅಂಕಗಳು ಮಾತ್ರ ಸಾಲದು. ಉತ್ತಮ ನಡವಳಿಕೆ, ಮಾನವೀಯ ಮೌಲ್ಯಗಳು ಮತ್ತು ಸಮಾಜದ ಬಗ್ಗೆ ಕಾಳಜಿಯೂ ಅಗತ್ಯ. ವಿದ್ಯಾರ್ಥಿ ಜೀವನದಲ್ಲಿ ಓದು ಮತ್ತು ಅಧ್ಯಯನಕ್ಕೆ ಪರ್ಯಾಯವೇ ಇಲ್ಲ. ಪ್ರತಿದಿನ ಹೊಸ ವಿಷಯಗಳನ್ನು ಕಲಿಯುವ ಅಭ್ಯಾಸ ಬೆಳೆಸಿಕೊಳ್ಳಬೇಕು’ ಎಂದರು.</p>.<p>‘ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡ್ಡಿಯಾಗಬಹುದು. ಸಮಯದ ಮೌಲ್ಯವನ್ನು ಅರಿತು ಶಿಸ್ತಿನಿಂದ ಬದುಕಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಆರೋಗ್ಯದ ಮಹತ್ವವನ್ನು ವಿವರಿಸಿದ ಡಾ.ಅಂಜನಪ್ಪ, ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಅನುಸರಿಸಬೇಕಾದ ಆರೋಗ್ಯ ಸುರಕ್ಷತಾ ಕ್ರಮಗಳು, ಸಾಮಾನ್ಯ ಕಾಯಿಲೆಗಳ ಬಗ್ಗೆ ಜಾಗೃತಿ ಹಾಗೂ ಪ್ರಾಥಮಿಕ ಚಿಕಿತ್ಸೆ ಕುರಿತು ಮಾಹಿತಿ ಹಂಚಿಕೊಂಡರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರಾಜು ಡಿ.ಎಸ್. ಮಾತನಾಡಿ, ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿಯೂ ಅಪಾರ ಪ್ರತಿಭೆ ಅಡಗಿದ್ದು, ಸರಿಯಾದ ಮಾರ್ಗದರ್ಶನ ಹಾಗೂ ಪರಿಶ್ರಮದಿಂದ ಅವರು ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು’ ಎಂದರು.</p>.<p>‘ಕಾಲೇಜು ಕೇವಲ ಪಾಠ ಕಲಿಸುವ ಕೇಂದ್ರವಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಪವಿತ್ರ ವೇದಿಕೆಯಾಗಿದೆ. ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳು ಬೆಳೆಯುತ್ತವೆ’ ಎಂದು ಹೇಳಿದರು.</p>.<p>ಸಾಂಸ್ಕೃತಿಕ ವೇದಿಕೆ ಸಂಚಾಲಕ ಬಸವೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಿತಾ ಸ್ವಾಗತಿಸಿದರು. ಮಹೇಶ್ ವಂದಿಸಿದರು. ಗೋಪಾಲ್ ನಿರೂಪಿಸಿದರು. ಕಾಲೇಜಿನ ಶೈಕ್ಷಣಿಕ ಡೀನ್ ಹರೀಶ್ ಎಂ.ಕೆ., ಪರೀಕ್ಷಾ ನಿಯಂತ್ರಕ ಮುರಳೀಧರ ಕೆ.ಡಿ., ವಿವಿಧ ಸಮಿತಿಗಳ ಸಂಚಾಲಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-36-1500553247</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶಿಸ್ತು ಹಾಗೂ ನಿರಂತರ ಅಧ್ಯಯನವನ್ನು ಜೀವನದ ಭಾಗವನ್ನಾಗಿ ಮಾಡಿಕೊಂಡಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಬಹುದು’ ಎಂದು ವೈದ್ಯ ಡಾ.ಅಂಜನಪ್ಪ ಟಿ.ಎಚ್.ಅಭಿಪ್ರಾಯಪಟ್ಟರು.</p>.<p>ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಐ ಆಮ್ ದ ಬೆಸ್ಟ್’ ಎನ್ನುವ ಧನಾತ್ಮಕ ಚಿಂತನೆಯೇ ವ್ಯಕ್ತಿತ್ವ ವಿಕಸನದ ಮೊದಲ ಹೆಜ್ಜೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಸಾಮರ್ಥ್ಯವನ್ನು ಅರಿತುಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ನಮ್ಮನ್ನು ನಾವು ನಂಬಿಕೊಳ್ಳುವ ಮನೋಭಾವ ಬೆಳೆಸಿಕೊಂಡರೆ ಬದುಕಿನ ಹಲವು ಸವಾಲುಗಳನ್ನು ಸುಲಭವಾಗಿ ಎದುರಿಸಬಹುದು’ ಎಂದು ಸಲಹೆ ನೀಡಿದರು.</p>.<p>‘ಜೀವನದಲ್ಲಿ ಸಾಧನೆ ಮಾಡಲು ಕೇವಲ ಅಂಕಗಳು ಮಾತ್ರ ಸಾಲದು. ಉತ್ತಮ ನಡವಳಿಕೆ, ಮಾನವೀಯ ಮೌಲ್ಯಗಳು ಮತ್ತು ಸಮಾಜದ ಬಗ್ಗೆ ಕಾಳಜಿಯೂ ಅಗತ್ಯ. ವಿದ್ಯಾರ್ಥಿ ಜೀವನದಲ್ಲಿ ಓದು ಮತ್ತು ಅಧ್ಯಯನಕ್ಕೆ ಪರ್ಯಾಯವೇ ಇಲ್ಲ. ಪ್ರತಿದಿನ ಹೊಸ ವಿಷಯಗಳನ್ನು ಕಲಿಯುವ ಅಭ್ಯಾಸ ಬೆಳೆಸಿಕೊಳ್ಳಬೇಕು’ ಎಂದರು.</p>.<p>‘ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡ್ಡಿಯಾಗಬಹುದು. ಸಮಯದ ಮೌಲ್ಯವನ್ನು ಅರಿತು ಶಿಸ್ತಿನಿಂದ ಬದುಕಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಆರೋಗ್ಯದ ಮಹತ್ವವನ್ನು ವಿವರಿಸಿದ ಡಾ.ಅಂಜನಪ್ಪ, ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಅನುಸರಿಸಬೇಕಾದ ಆರೋಗ್ಯ ಸುರಕ್ಷತಾ ಕ್ರಮಗಳು, ಸಾಮಾನ್ಯ ಕಾಯಿಲೆಗಳ ಬಗ್ಗೆ ಜಾಗೃತಿ ಹಾಗೂ ಪ್ರಾಥಮಿಕ ಚಿಕಿತ್ಸೆ ಕುರಿತು ಮಾಹಿತಿ ಹಂಚಿಕೊಂಡರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರಾಜು ಡಿ.ಎಸ್. ಮಾತನಾಡಿ, ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿಯೂ ಅಪಾರ ಪ್ರತಿಭೆ ಅಡಗಿದ್ದು, ಸರಿಯಾದ ಮಾರ್ಗದರ್ಶನ ಹಾಗೂ ಪರಿಶ್ರಮದಿಂದ ಅವರು ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು’ ಎಂದರು.</p>.<p>‘ಕಾಲೇಜು ಕೇವಲ ಪಾಠ ಕಲಿಸುವ ಕೇಂದ್ರವಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಪವಿತ್ರ ವೇದಿಕೆಯಾಗಿದೆ. ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳು ಬೆಳೆಯುತ್ತವೆ’ ಎಂದು ಹೇಳಿದರು.</p>.<p>ಸಾಂಸ್ಕೃತಿಕ ವೇದಿಕೆ ಸಂಚಾಲಕ ಬಸವೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಿತಾ ಸ್ವಾಗತಿಸಿದರು. ಮಹೇಶ್ ವಂದಿಸಿದರು. ಗೋಪಾಲ್ ನಿರೂಪಿಸಿದರು. ಕಾಲೇಜಿನ ಶೈಕ್ಷಣಿಕ ಡೀನ್ ಹರೀಶ್ ಎಂ.ಕೆ., ಪರೀಕ್ಷಾ ನಿಯಂತ್ರಕ ಮುರಳೀಧರ ಕೆ.ಡಿ., ವಿವಿಧ ಸಮಿತಿಗಳ ಸಂಚಾಲಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-36-1500553247</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>