<p>ಹಾಸನ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲವನ್ನು ಗುರುತಿಸಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಐಐಟಿ ಸಂಶೋಧನಾ ಪ್ರಾಧ್ಯಾಪಕ ಗೋಪಾಲಕೃಷ್ಣ ಹೆಗ್ಡೆ ತಿಳಿಸಿದರು.</p>.<p>ನಗರದ ಹೊರವಲಯದ ನವಕಿಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ‘ನವ ಉತ್ಸವ’ದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ವಿಶೇಷ ಪ್ರತಿಭೆ ಹಾಗೂ ಕೌಶಲ ಅಡಗಿರುತ್ತದೆ. ಆದರೆ ಪೋಷಕರು ಮಕ್ಕಳ ಆಸಕ್ತಿ ಅರಿಯದೇ ತಮ್ಮ ನಿರೀಕ್ಷೆಯಂತೆ ಶಿಕ್ಷಣ ನೀಡುತ್ತಿರುವುದು ಹಲವರ ಪ್ರತಿಭೆ ಮರೆಯಾಗಲು ಕಾರಣವಾಗಿದೆ ಎಂದರು.</p>.<p>ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಬೋಧನೆ ಹಾಗೂ ಕಲಿಕೆಯ ವಿಧಾನಗಳಲ್ಲೂ ದೊಡ್ಡ ವ್ಯತ್ಯಾಸ ಕಂಡುಬರುತ್ತಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಎರಡು ದಶಕಗಳಿಂದ ಯಾವುದೇ ಕ್ಷೇತ್ರವಾಗಲಿ, ಕಂಪ್ಯೂಟರ್ ಆಧಾರಿತ ಕಾರ್ಯಪದ್ಧತಿ ಅನಿವಾರ್ಯವಾಗಿದೆ. ತಂತ್ರಜ್ಞಾನದ ಜ್ಞಾನ ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಹೆಚ್ಚಿನ ಅವಕಾಶಗಳಿವೆ ಎಂದು ಹೇಳಿದರು.</p>.<p>ಬೆಂಗಳೂರಿನ ವೆಲ್ಸ್ ಫಾರ್ಗೋ ಸಂಸ್ಥೆಯ ಉಪಾಧ್ಯಕ್ಷೆ ಸೌಮ್ಯ ಎನ್.ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಛಲ ಮತ್ತು ಹಂಬಲವಿದ್ದರೆ ಜೀವನದಲ್ಲಿ ಯಾವುದೇ ಗುರಿ ಸಾಧಿಸಬಹುದು ಎಂದು ಹೇಳಿದರು.</p>.<p>ಯಾವಾಗಲೂ ದೊಡ್ಡ ಕನಸು ಕಾಣಬೇಕು. ತಮ್ಮ ಬಗ್ಗೆ ಕೀಳರಿಮೆ ಹೊಂದದೇ ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಯಶಸ್ಸು ಖಚಿತ ಎಂದರು.</p>.<p>ಕಾಲೇಜು ಪ್ರಾಂಶುಪಾಲ ಡಿ.ವಿ.ಮಂಜುನಾಥ, ಡೀನ್ ಶ್ರೀಪಾದ ಮಾರ್ಕಂಡೆ, ಪ್ರಾಧ್ಯಾಪಕರಾದ ಎಂ.ಎಸ್.ಸತೀಶ್, ಎಂ.ಆರ್.ವಿನುತಾ, ರಾಘವೇಂದ್ರ, ವಿವೇಕಾನಂದ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-720364954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲವನ್ನು ಗುರುತಿಸಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಐಐಟಿ ಸಂಶೋಧನಾ ಪ್ರಾಧ್ಯಾಪಕ ಗೋಪಾಲಕೃಷ್ಣ ಹೆಗ್ಡೆ ತಿಳಿಸಿದರು.</p>.<p>ನಗರದ ಹೊರವಲಯದ ನವಕಿಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ‘ನವ ಉತ್ಸವ’ದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ವಿಶೇಷ ಪ್ರತಿಭೆ ಹಾಗೂ ಕೌಶಲ ಅಡಗಿರುತ್ತದೆ. ಆದರೆ ಪೋಷಕರು ಮಕ್ಕಳ ಆಸಕ್ತಿ ಅರಿಯದೇ ತಮ್ಮ ನಿರೀಕ್ಷೆಯಂತೆ ಶಿಕ್ಷಣ ನೀಡುತ್ತಿರುವುದು ಹಲವರ ಪ್ರತಿಭೆ ಮರೆಯಾಗಲು ಕಾರಣವಾಗಿದೆ ಎಂದರು.</p>.<p>ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಬೋಧನೆ ಹಾಗೂ ಕಲಿಕೆಯ ವಿಧಾನಗಳಲ್ಲೂ ದೊಡ್ಡ ವ್ಯತ್ಯಾಸ ಕಂಡುಬರುತ್ತಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಎರಡು ದಶಕಗಳಿಂದ ಯಾವುದೇ ಕ್ಷೇತ್ರವಾಗಲಿ, ಕಂಪ್ಯೂಟರ್ ಆಧಾರಿತ ಕಾರ್ಯಪದ್ಧತಿ ಅನಿವಾರ್ಯವಾಗಿದೆ. ತಂತ್ರಜ್ಞಾನದ ಜ್ಞಾನ ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಹೆಚ್ಚಿನ ಅವಕಾಶಗಳಿವೆ ಎಂದು ಹೇಳಿದರು.</p>.<p>ಬೆಂಗಳೂರಿನ ವೆಲ್ಸ್ ಫಾರ್ಗೋ ಸಂಸ್ಥೆಯ ಉಪಾಧ್ಯಕ್ಷೆ ಸೌಮ್ಯ ಎನ್.ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಛಲ ಮತ್ತು ಹಂಬಲವಿದ್ದರೆ ಜೀವನದಲ್ಲಿ ಯಾವುದೇ ಗುರಿ ಸಾಧಿಸಬಹುದು ಎಂದು ಹೇಳಿದರು.</p>.<p>ಯಾವಾಗಲೂ ದೊಡ್ಡ ಕನಸು ಕಾಣಬೇಕು. ತಮ್ಮ ಬಗ್ಗೆ ಕೀಳರಿಮೆ ಹೊಂದದೇ ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಯಶಸ್ಸು ಖಚಿತ ಎಂದರು.</p>.<p>ಕಾಲೇಜು ಪ್ರಾಂಶುಪಾಲ ಡಿ.ವಿ.ಮಂಜುನಾಥ, ಡೀನ್ ಶ್ರೀಪಾದ ಮಾರ್ಕಂಡೆ, ಪ್ರಾಧ್ಯಾಪಕರಾದ ಎಂ.ಎಸ್.ಸತೀಶ್, ಎಂ.ಆರ್.ವಿನುತಾ, ರಾಘವೇಂದ್ರ, ವಿವೇಕಾನಂದ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-720364954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>