<p>ಸವಣೂರು (ಹಾವೇರಿ): ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಎಸ್.ಸಿ. ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡರು.</p>.<p>ಡಾ. ಬಿ.ಆರ್. ಅಂಬೇಡ್ಕರ ನಗರದ ಪಂಚ ಕಮಿಟಿ, ದಲಿತ ಸಂಘರ್ಷ ಸಮಿತಿ ಮತ್ತು ಆದಿ ಜಾಂಬವ ಯುವ ಬ್ರಿಗೇಡ್ ವತಿಯಿಂದ ಎರಡನೇ ಬಾರಿ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸ್ಪರ್ಧಾತ್ಮಕ ಪರೀಕ್ಷೆಗೆ ಚಾಲನೆ ನೀಡಲಾಯಿತು.</p>.<p>ತಹಶೀಲ್ದಾರ್ ರವಿಕುಮಾರ ಕೊರವರ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಜೀವನ ಆದರ್ಶಗಳನ್ನು ಪಾಲಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನೌಕರಿ ಗಿಟ್ಟಿಸಲು ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಇಂದಿನಿಂದಲೇ ಸಿದ್ಧರಾಗಬೇಕು’ ಎಂದರು.</p>.<p>ಮುಖಂಡರಾದ ತಿಮ್ಮಣ್ಣ ಹಗರಿಬೊಮ್ಮನಹಳ್ಳಿ, ಮರಪ್ಪ ಮುಗಳಿ, ರಮೇಶ ಹರಿಜನ, ಸುಭಾಸ್ ಮಜ್ಜಗಿ, ಆನಂದ್ ವಡಕಮ್ಮನವರ, ಶಂಕರ್ ಮರಗಪ್ಪನವರ, ಬಸವರಾಜ್ ಮೈಲಮ್ಮನವರ, ಶಿವು ದಾವಣಗೆರೆ, ರಂಗಪ್ಪ ಮೈಲಮ್ಮನವರ, ಶಾಂತು ಕೆಂಚಣ್ಣವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-22-2092059529</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸವಣೂರು (ಹಾವೇರಿ): ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಎಸ್.ಸಿ. ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡರು.</p>.<p>ಡಾ. ಬಿ.ಆರ್. ಅಂಬೇಡ್ಕರ ನಗರದ ಪಂಚ ಕಮಿಟಿ, ದಲಿತ ಸಂಘರ್ಷ ಸಮಿತಿ ಮತ್ತು ಆದಿ ಜಾಂಬವ ಯುವ ಬ್ರಿಗೇಡ್ ವತಿಯಿಂದ ಎರಡನೇ ಬಾರಿ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸ್ಪರ್ಧಾತ್ಮಕ ಪರೀಕ್ಷೆಗೆ ಚಾಲನೆ ನೀಡಲಾಯಿತು.</p>.<p>ತಹಶೀಲ್ದಾರ್ ರವಿಕುಮಾರ ಕೊರವರ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಜೀವನ ಆದರ್ಶಗಳನ್ನು ಪಾಲಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನೌಕರಿ ಗಿಟ್ಟಿಸಲು ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಇಂದಿನಿಂದಲೇ ಸಿದ್ಧರಾಗಬೇಕು’ ಎಂದರು.</p>.<p>ಮುಖಂಡರಾದ ತಿಮ್ಮಣ್ಣ ಹಗರಿಬೊಮ್ಮನಹಳ್ಳಿ, ಮರಪ್ಪ ಮುಗಳಿ, ರಮೇಶ ಹರಿಜನ, ಸುಭಾಸ್ ಮಜ್ಜಗಿ, ಆನಂದ್ ವಡಕಮ್ಮನವರ, ಶಂಕರ್ ಮರಗಪ್ಪನವರ, ಬಸವರಾಜ್ ಮೈಲಮ್ಮನವರ, ಶಿವು ದಾವಣಗೆರೆ, ರಂಗಪ್ಪ ಮೈಲಮ್ಮನವರ, ಶಾಂತು ಕೆಂಚಣ್ಣವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-22-2092059529</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>