<p>ಹಾವೇರಿ: ‘ಶಿಕ್ಷಕ ವೃತ್ತಿ ಎಂಬುದು ಬಹಳ ಶ್ರೇಷ್ಠವಾದ ವೃತ್ತಿ. ಈ ವೃತ್ತಿ ಮಾಡುವವರು ಸಮಾಜದ ಭಾಗ್ಯವಂತರು’ ಎಂದು ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ನೆಗಳೂರ ಗ್ರಾಮದಲ್ಲಿ ಭಾನುವಾರ ಜರುಗಿದ ‘ಶಾಲಾ ಶಿಕ್ಷಕಿ ಎಸ್. ಜಿ. ಪಾಟೀಲ (ಹಿರೇಮಠ) ಅವರ ಸೇವಾ ನಿವೃತ್ತಿ ಕೃತಜ್ಞತಾ ಸಮಾರಂಭ’ದ ಸಾನ್ನಿಧ್ಯ ವಹಿಸಿ ಅವರು ಆರ್ಶೀವಚನ ನೀಡಿದರು.</p>.<p>‘ಎಸ್.ಜಿ. ಪಾಟೀಲ ಅವರು ಶಿಕ್ಷಕಿಯಾಗಿ 27 ವರ್ಷಗಳ ಕಾಲ ನಿಸ್ವಾರ್ಥ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರ ಗರಡಿಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ’ ಎಂದರು.</p>.<p>ಗದಿಗೆಯ್ಯ ಸ್ವಾಮಿ ಹಿರೇಮಠ ಮಾತನಾಡಿದರು.</p>.<p>ಕಲಬುರಗಿ, ನೆಗಳೂರ ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-22-1250240557</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ‘ಶಿಕ್ಷಕ ವೃತ್ತಿ ಎಂಬುದು ಬಹಳ ಶ್ರೇಷ್ಠವಾದ ವೃತ್ತಿ. ಈ ವೃತ್ತಿ ಮಾಡುವವರು ಸಮಾಜದ ಭಾಗ್ಯವಂತರು’ ಎಂದು ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ನೆಗಳೂರ ಗ್ರಾಮದಲ್ಲಿ ಭಾನುವಾರ ಜರುಗಿದ ‘ಶಾಲಾ ಶಿಕ್ಷಕಿ ಎಸ್. ಜಿ. ಪಾಟೀಲ (ಹಿರೇಮಠ) ಅವರ ಸೇವಾ ನಿವೃತ್ತಿ ಕೃತಜ್ಞತಾ ಸಮಾರಂಭ’ದ ಸಾನ್ನಿಧ್ಯ ವಹಿಸಿ ಅವರು ಆರ್ಶೀವಚನ ನೀಡಿದರು.</p>.<p>‘ಎಸ್.ಜಿ. ಪಾಟೀಲ ಅವರು ಶಿಕ್ಷಕಿಯಾಗಿ 27 ವರ್ಷಗಳ ಕಾಲ ನಿಸ್ವಾರ್ಥ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರ ಗರಡಿಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ’ ಎಂದರು.</p>.<p>ಗದಿಗೆಯ್ಯ ಸ್ವಾಮಿ ಹಿರೇಮಠ ಮಾತನಾಡಿದರು.</p>.<p>ಕಲಬುರಗಿ, ನೆಗಳೂರ ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-22-1250240557</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>