<p>ಹಾವೇರಿ: ‘ಇಂದಿನ ದಿನಮಾನಗಳಲ್ಲಿ ಮಹಿಳೆಯರು ಶಿಕ್ಷಣವಂತರಾಗುತ್ತಿದ್ದಾರೆ. ಸಮಾಜದ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ನಗರದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘2025–26ನೇ ಶೈಕ್ಷಣೆಕ ಸಾಲಿನ ಸಾಂಸ್ಕೃತಿಕ ಕ್ರೀಡಾ, ಯೂಥ್ ರೆಡ್ ಕ್ರಾಸ್ ಹಾಗೂ ಎನ್.ಎಸ್.ಎಸ್. ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರೇವತಿ ಎಸ್. ಹೊಸಮಠ ಮಾತನಾಡಿ, ‘ವಿದ್ಯಾರ್ಥಿನಿಯರು ಉನ್ನತ ಶಿಕ್ಷಣದೊಂದಿಗೆ ವೃತ್ತಿಗೆ ಅನುಸಾರ ಕುಶಲಗಳನ್ನು ಬೆಳೆಸಿಕೊಳ್ಳಬೇಕು. ತೊಟ್ಟಿಲು ತೂಗುವ ಕೈ ಜಗತ್ತನ್ನು ಆಳಬಲ್ಲದು ಎಂಬುದನ್ನು ಸಾಧಿಸಿ ತೋರಿಸಬೇಕು’ ಎಂದರು.</p>.<p>ಶಿವಲಿಂಗೇಶ್ವರ ವಿದ್ಯಾಪೀಠದ ಕಾರ್ಯಾಧ್ಯಕ್ಷ ಎಸ್.ಎಸ್. ಮುಷ್ಠಿ ಅವರು ಅಧ್ಯಕ್ಷತೆ ವಹಿಸಿದ್ದರು. ಗೌರವ ಉಪಾಧ್ಯಕ್ಷ ವೀರಣ್ಣ ಅಂಗಡಿ, ಮಹೇಶ ಚಿನ್ನಿಕಟ್ಟಿ, ಪ್ರಾಂಶುಪಾಲರಾದ ಸವಿತಾ ಎಸ್. ಹಿರೇಮಠ, ಬಿ.ವಿ ಹಿರೇಮಠ, ಟಿ.ಎನ್. ಮಡಿವಾಳರ, ವಿ.ಕೆ. ಹಲಗಣ್ಣನವರ, ನಾಗರಾಜ ಎಂ.ಎಚ್ ಹಾಗೂ ಇತರರು ಇದ್ದರು.</p>.<p>ಬಿ.ಎ. ಮತ್ತು ಬಿ.ಕಾಂ. ವಿಭಾಗದಿಂದ ಕ್ರಮವಾಗಿ ಪೂರ್ಣಿಮಾ ಕರ್ಜಗಿ ಮತ್ತು ಸುಶ್ಮಿತಾ ಕಾಯಕದ ಅವರು 2025–26ನೇ ಸಾಲಿನ ಆದರ್ಶ ವಿದ್ಯಾರ್ಥಿನಿ ಬಹುಮಾನ ಪಡೆದುಕೊಂಡರು. ಚಂದ್ರಕಲಾ ನಾಗನೂರ ಸಮಗ್ರ ವೀರಾಗ್ರಣಿ ಪಡೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-22-1607079784</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ‘ಇಂದಿನ ದಿನಮಾನಗಳಲ್ಲಿ ಮಹಿಳೆಯರು ಶಿಕ್ಷಣವಂತರಾಗುತ್ತಿದ್ದಾರೆ. ಸಮಾಜದ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ನಗರದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘2025–26ನೇ ಶೈಕ್ಷಣೆಕ ಸಾಲಿನ ಸಾಂಸ್ಕೃತಿಕ ಕ್ರೀಡಾ, ಯೂಥ್ ರೆಡ್ ಕ್ರಾಸ್ ಹಾಗೂ ಎನ್.ಎಸ್.ಎಸ್. ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರೇವತಿ ಎಸ್. ಹೊಸಮಠ ಮಾತನಾಡಿ, ‘ವಿದ್ಯಾರ್ಥಿನಿಯರು ಉನ್ನತ ಶಿಕ್ಷಣದೊಂದಿಗೆ ವೃತ್ತಿಗೆ ಅನುಸಾರ ಕುಶಲಗಳನ್ನು ಬೆಳೆಸಿಕೊಳ್ಳಬೇಕು. ತೊಟ್ಟಿಲು ತೂಗುವ ಕೈ ಜಗತ್ತನ್ನು ಆಳಬಲ್ಲದು ಎಂಬುದನ್ನು ಸಾಧಿಸಿ ತೋರಿಸಬೇಕು’ ಎಂದರು.</p>.<p>ಶಿವಲಿಂಗೇಶ್ವರ ವಿದ್ಯಾಪೀಠದ ಕಾರ್ಯಾಧ್ಯಕ್ಷ ಎಸ್.ಎಸ್. ಮುಷ್ಠಿ ಅವರು ಅಧ್ಯಕ್ಷತೆ ವಹಿಸಿದ್ದರು. ಗೌರವ ಉಪಾಧ್ಯಕ್ಷ ವೀರಣ್ಣ ಅಂಗಡಿ, ಮಹೇಶ ಚಿನ್ನಿಕಟ್ಟಿ, ಪ್ರಾಂಶುಪಾಲರಾದ ಸವಿತಾ ಎಸ್. ಹಿರೇಮಠ, ಬಿ.ವಿ ಹಿರೇಮಠ, ಟಿ.ಎನ್. ಮಡಿವಾಳರ, ವಿ.ಕೆ. ಹಲಗಣ್ಣನವರ, ನಾಗರಾಜ ಎಂ.ಎಚ್ ಹಾಗೂ ಇತರರು ಇದ್ದರು.</p>.<p>ಬಿ.ಎ. ಮತ್ತು ಬಿ.ಕಾಂ. ವಿಭಾಗದಿಂದ ಕ್ರಮವಾಗಿ ಪೂರ್ಣಿಮಾ ಕರ್ಜಗಿ ಮತ್ತು ಸುಶ್ಮಿತಾ ಕಾಯಕದ ಅವರು 2025–26ನೇ ಸಾಲಿನ ಆದರ್ಶ ವಿದ್ಯಾರ್ಥಿನಿ ಬಹುಮಾನ ಪಡೆದುಕೊಂಡರು. ಚಂದ್ರಕಲಾ ನಾಗನೂರ ಸಮಗ್ರ ವೀರಾಗ್ರಣಿ ಪಡೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-22-1607079784</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>