<p>ಹೆತ್ತೂರು: ಸಮೀಪದ ಹಾಡ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಹೆತ್ತೂರು ಶಾಲೆಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ಗ್ರಾಮಸ್ಥರು, ಎಸ್ಡಿಎಂಸಿ ಸದಸ್ಯರು, ಪೋಷಕರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಸರ್ಕಾರದ ಆದೇಶದಂತೆ 5 ಕಿ.ಮೀ. ವ್ಯಾಪ್ತಿಯೊಳಗಿನ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಹೆತ್ತೂರು ಶಾಲೆಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಅದರ ಭಾಗವಾಗಿ ಹಾಡ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನೂ ವಿಲೀನಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದೆ. ಈ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಶಾಲೆ ಉಳಿಸುವಂತೆ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಎಚ್.ಕೆ. ವಿಜಯ್ ಕುಮಾರ್ ಮಾತನಾಡಿ, ಹಾಡ್ಯ ಸರ್ಕಾರಿ ಶಾಲೆ ಸುತ್ತಲಿನ ನಾಲ್ಕು ಗ್ರಾಮಗಳ ಬಡ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇತಿಹಾಸ ಹೊಂದಿರುವ ಈ ಶಾಲೆಯನ್ನು ಮುಚ್ಚಿದರೆ ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಪಡೆಯುವುದು ಕಷ್ಟವಾಗುತ್ತದೆ. ಹೆತ್ತೂರು ಕೆಪಿಎಸ್ ಶಾಲೆಗೆ ತೆರಳಲು ದೂರದ ಸಮಸ್ಯೆ, ಕಾಡು ಪ್ರಾಣಿಗಳ ಹಾವಳಿ ಹಾಗೂ ಮಳೆಯ ಅವಾಂತರಗಳೂ ಎದುರಾಗುತ್ತವೆ. ಯಾವುದೇ ಕಾರಣಕ್ಕೂ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.</p>.<p>ಪ್ರಸ್ತುತ ಶಾಲೆಯಲ್ಲಿ 15 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಶಾಲೆಯನ್ನು ಮುಚ್ಚುವ ಬದಲು ಅಗತ್ಯ ಸೌಲಭ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್ ಒತ್ತಾಯಿಸಿದರು.</p>.<p>ಶಿಕ್ಷಣ ಇಲಾಖೆ ಬಿಇಒ ಪುಷ್ಪಾ, ಬಿಆರ್ಪಿ ಹಾಗೂ ಸಿಆರ್ಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ ಶಾಲೆಯನ್ನು ಉಳಿಸುವ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು, ಪೋಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಮನವಿ ಮಾಡಿದ್ದಾರೆ.</p>.<p>ಶಾಲೆ ವಿಲೀನದ ನಿರ್ಧಾರವನ್ನು ಹಿಂಪಡೆದು ಗ್ರಾಮೀಣ ಭಾಗದ ಬಡ ಮಕ್ಕಳ ಶಿಕ್ಷಣ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-36-1737616413</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೆತ್ತೂರು: ಸಮೀಪದ ಹಾಡ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಹೆತ್ತೂರು ಶಾಲೆಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ಗ್ರಾಮಸ್ಥರು, ಎಸ್ಡಿಎಂಸಿ ಸದಸ್ಯರು, ಪೋಷಕರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಸರ್ಕಾರದ ಆದೇಶದಂತೆ 5 ಕಿ.ಮೀ. ವ್ಯಾಪ್ತಿಯೊಳಗಿನ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಹೆತ್ತೂರು ಶಾಲೆಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಅದರ ಭಾಗವಾಗಿ ಹಾಡ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನೂ ವಿಲೀನಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದೆ. ಈ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಶಾಲೆ ಉಳಿಸುವಂತೆ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಎಚ್.ಕೆ. ವಿಜಯ್ ಕುಮಾರ್ ಮಾತನಾಡಿ, ಹಾಡ್ಯ ಸರ್ಕಾರಿ ಶಾಲೆ ಸುತ್ತಲಿನ ನಾಲ್ಕು ಗ್ರಾಮಗಳ ಬಡ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇತಿಹಾಸ ಹೊಂದಿರುವ ಈ ಶಾಲೆಯನ್ನು ಮುಚ್ಚಿದರೆ ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಪಡೆಯುವುದು ಕಷ್ಟವಾಗುತ್ತದೆ. ಹೆತ್ತೂರು ಕೆಪಿಎಸ್ ಶಾಲೆಗೆ ತೆರಳಲು ದೂರದ ಸಮಸ್ಯೆ, ಕಾಡು ಪ್ರಾಣಿಗಳ ಹಾವಳಿ ಹಾಗೂ ಮಳೆಯ ಅವಾಂತರಗಳೂ ಎದುರಾಗುತ್ತವೆ. ಯಾವುದೇ ಕಾರಣಕ್ಕೂ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.</p>.<p>ಪ್ರಸ್ತುತ ಶಾಲೆಯಲ್ಲಿ 15 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಶಾಲೆಯನ್ನು ಮುಚ್ಚುವ ಬದಲು ಅಗತ್ಯ ಸೌಲಭ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್ ಒತ್ತಾಯಿಸಿದರು.</p>.<p>ಶಿಕ್ಷಣ ಇಲಾಖೆ ಬಿಇಒ ಪುಷ್ಪಾ, ಬಿಆರ್ಪಿ ಹಾಗೂ ಸಿಆರ್ಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ ಶಾಲೆಯನ್ನು ಉಳಿಸುವ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು, ಪೋಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಮನವಿ ಮಾಡಿದ್ದಾರೆ.</p>.<p>ಶಾಲೆ ವಿಲೀನದ ನಿರ್ಧಾರವನ್ನು ಹಿಂಪಡೆದು ಗ್ರಾಮೀಣ ಭಾಗದ ಬಡ ಮಕ್ಕಳ ಶಿಕ್ಷಣ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-36-1737616413</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>