<p>ಹಿರೀಸಾವೆ: ಸರ್ಕಾರದಿಂದ ನೀಡಿರುವ ಎಲ್ಲಾ ಅನುದಾನವನ್ನು ಗುಣಮಟ್ಟದ ಶಿಕ್ಷಣಕ್ಕೆ ನಿಯಮಾನುಸಾರು ಬಳಸಬೇಕು ಎಂದು ಕೇಂದ್ರ ಸರ್ಕಾರದ ನಿಯೋಜಿತ ಜಂಟಿ ಕಾರ್ಯದರ್ಶಿ ರಿಚಾ ಖೋಡಾ ಗುರುವಾರ ಹೇಳಿದರು.</p>.<p>ಇಲ್ಲಿನ ಪಿಎಂಶ್ರೀ ಶಾಸಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ಮಂದಿನ ಶೈಕ್ಷಣಿಕ ವರ್ಷದಲ್ಲಿ ಪಿಎಂಶ್ರೀ ಶಾಲೆಗಳಿಗೆ ಹೆಚ್ಚಿನ ಮೂಲಸೌಲಭ್ಯಗಳನ್ನು ಒದಗಿಸಲಾಗುವುದು. ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಶಿಕ್ಷಕರು ಮತ್ತು ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ನೀಡಬೇಕು, ಈ ಶಾಲೆಗೆ ಅಗತ್ಯ ಇರುವ ಕಂಪ್ಯೂಟರ್ ಶಿಕ್ಷಣಕ್ಕೆ ಅಗತ್ಯ ಇರುವ ಪರಿಕರಗಳನ್ನು ಮತ್ತು ಶುದ್ಧ ಕಡಿಯವ ನೀರಿನ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ಒದಗಿಸುವುದಾಗಿ ಹೇಳಿದರು.</p>.<p>ಶಾಲೆಗೆ ಆಗಮಿಸಿದ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ದೀಪಾ ಮತ್ತು ಶಾಲೆಯ ಮುಖ್ಯಶಿಕ್ಷಕಿ ಉಮಾದೇವರಾಜು ಸ್ವಾಗತಿಸಿದರು. ವಿದ್ಯಾರ್ಥಿಗಳ ಜೊತೆಯಲ್ಲಿ ಕೋಲಾಟಕ್ಕೆ ರೀಚಾ ಖೋಡಾ ಸೇರಿ ಅಧಿಕಾರಿಗಳು ಹೆಜ್ಜೆ ಹಾಕಿದರು. ಶಿಕ್ಷಕರ ಚಟುವಟಿಕಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಶಾಲೆಯಲ್ಲಿನ ಪಿಎಂಶ್ರೀ ಯೋಜನೆಯ ಅನುದಾನದಲ್ಲಿ ಬಂದಿರುವ ಪರಿಕರಗಳನ್ನು ಮತ್ತು ಬಳಕೆಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಭೆ ನಡೆಸಿ, ಹಲವು ಮಾಹಿತಿ ಪಡೆದು, ಕೆಲ ಮಾರ್ಗದರ್ಶನವನ್ನು ಅವರು ನೀಡಿದರು.</p>.<p>ರಾಜ್ಯ ಸಮಗ್ರ ಶಿಕ್ಷಣ ಕಾರ್ಯಕ್ರಮದ ಹಿರಿಯ ಅಧಿಕಾರಿ ಶಶಿಕಲಾ, ಡಿಡಿಪಿಐ ಕಚೇರಿಯ ಅಧಿಕಾರಿ ರಮೇಶ್, ಬಿಆರ್ಸಿ ಅನಿಲ್, ಶಿಕ್ಷಣ ಸಂಯೋಜಕರಾದ ಶ್ರೀನಿವಾಸ್, ಕರಿಯಪ್ಪಗೌಡ, ಸಿಆರ್ಪಿ ಧರ್ಮಪಾಲ್ ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ್ ಮೌರ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-36-196582244</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರೀಸಾವೆ: ಸರ್ಕಾರದಿಂದ ನೀಡಿರುವ ಎಲ್ಲಾ ಅನುದಾನವನ್ನು ಗುಣಮಟ್ಟದ ಶಿಕ್ಷಣಕ್ಕೆ ನಿಯಮಾನುಸಾರು ಬಳಸಬೇಕು ಎಂದು ಕೇಂದ್ರ ಸರ್ಕಾರದ ನಿಯೋಜಿತ ಜಂಟಿ ಕಾರ್ಯದರ್ಶಿ ರಿಚಾ ಖೋಡಾ ಗುರುವಾರ ಹೇಳಿದರು.</p>.<p>ಇಲ್ಲಿನ ಪಿಎಂಶ್ರೀ ಶಾಸಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ಮಂದಿನ ಶೈಕ್ಷಣಿಕ ವರ್ಷದಲ್ಲಿ ಪಿಎಂಶ್ರೀ ಶಾಲೆಗಳಿಗೆ ಹೆಚ್ಚಿನ ಮೂಲಸೌಲಭ್ಯಗಳನ್ನು ಒದಗಿಸಲಾಗುವುದು. ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಶಿಕ್ಷಕರು ಮತ್ತು ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ನೀಡಬೇಕು, ಈ ಶಾಲೆಗೆ ಅಗತ್ಯ ಇರುವ ಕಂಪ್ಯೂಟರ್ ಶಿಕ್ಷಣಕ್ಕೆ ಅಗತ್ಯ ಇರುವ ಪರಿಕರಗಳನ್ನು ಮತ್ತು ಶುದ್ಧ ಕಡಿಯವ ನೀರಿನ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ಒದಗಿಸುವುದಾಗಿ ಹೇಳಿದರು.</p>.<p>ಶಾಲೆಗೆ ಆಗಮಿಸಿದ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ದೀಪಾ ಮತ್ತು ಶಾಲೆಯ ಮುಖ್ಯಶಿಕ್ಷಕಿ ಉಮಾದೇವರಾಜು ಸ್ವಾಗತಿಸಿದರು. ವಿದ್ಯಾರ್ಥಿಗಳ ಜೊತೆಯಲ್ಲಿ ಕೋಲಾಟಕ್ಕೆ ರೀಚಾ ಖೋಡಾ ಸೇರಿ ಅಧಿಕಾರಿಗಳು ಹೆಜ್ಜೆ ಹಾಕಿದರು. ಶಿಕ್ಷಕರ ಚಟುವಟಿಕಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಶಾಲೆಯಲ್ಲಿನ ಪಿಎಂಶ್ರೀ ಯೋಜನೆಯ ಅನುದಾನದಲ್ಲಿ ಬಂದಿರುವ ಪರಿಕರಗಳನ್ನು ಮತ್ತು ಬಳಕೆಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಭೆ ನಡೆಸಿ, ಹಲವು ಮಾಹಿತಿ ಪಡೆದು, ಕೆಲ ಮಾರ್ಗದರ್ಶನವನ್ನು ಅವರು ನೀಡಿದರು.</p>.<p>ರಾಜ್ಯ ಸಮಗ್ರ ಶಿಕ್ಷಣ ಕಾರ್ಯಕ್ರಮದ ಹಿರಿಯ ಅಧಿಕಾರಿ ಶಶಿಕಲಾ, ಡಿಡಿಪಿಐ ಕಚೇರಿಯ ಅಧಿಕಾರಿ ರಮೇಶ್, ಬಿಆರ್ಸಿ ಅನಿಲ್, ಶಿಕ್ಷಣ ಸಂಯೋಜಕರಾದ ಶ್ರೀನಿವಾಸ್, ಕರಿಯಪ್ಪಗೌಡ, ಸಿಆರ್ಪಿ ಧರ್ಮಪಾಲ್ ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ್ ಮೌರ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-36-196582244</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>