<p>ಹಿರಿಯೂರು: ‘ಪದವಿ, ಪದವಿಪೂರ್ವ ಕಾಲೇಜುಗಳು ನಡೆಸುವ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಶಿಬಿರಗಳ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು’ ಎಂದು ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಅಧೀಕ್ಷಕ ಡಾ.ಎಸ್.ಎಲ್. ಪಾಲಾಕ್ಷಪ್ಪ ಮನವಿ ಮಾಡಿದರು.</p>.<p>ಹಿರಿಯೂರಿನ ಹುಳಿಯಾರು ರಸ್ತೆಯಲ್ಲಿರುವ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಮೇಟಿಕುರ್ಕೆ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2025–26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಬಿರದಲ್ಲಿ ಆರೋಗ್ಯ ತಪಾಸಣೆ, ಪರಿಸರ ಸ್ವಚ್ಛತೆ, ಮೂಢನಂಬಿಕೆಗಳ ವಿರುದ್ಧ ಜಾಗೃತಿ, ಶಿಕ್ಷಣದ ಮಹತ್ವ ಒಳಗೊಂಡಂತೆ ವಿವಿಧ ವಿಷಯಗಳ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಲಾಗುತ್ತದೆ. ಶಿಬಿರ ಮುಗಿಯುವವರೆಗೆ ಎಲ್ಲ ರೀತಿಯ ಸಹಕಾರ ಕೊಡಬೇಕು’ ಎಂದು ಕೋರಿದರು.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಎಂ. ಶಿವಲಿಂಗಪ್ಪ, ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ಆರ್. ಹನುಮಂತರಾಯ ಮಾತನಾಡಿದರು. ಶಿಬಿರಾಧಿಕಾರಿ ಎನ್.ಬಿ. ಗಟ್ಟಿ ಸ್ವಾಗತಿಸಿದರು. ಸ್ವಯಂ ಸೇವಕಿ ನೀತು ರಾಜು ನಾಯಕ್ ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-44-1206417046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ‘ಪದವಿ, ಪದವಿಪೂರ್ವ ಕಾಲೇಜುಗಳು ನಡೆಸುವ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಶಿಬಿರಗಳ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು’ ಎಂದು ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಅಧೀಕ್ಷಕ ಡಾ.ಎಸ್.ಎಲ್. ಪಾಲಾಕ್ಷಪ್ಪ ಮನವಿ ಮಾಡಿದರು.</p>.<p>ಹಿರಿಯೂರಿನ ಹುಳಿಯಾರು ರಸ್ತೆಯಲ್ಲಿರುವ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಮೇಟಿಕುರ್ಕೆ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2025–26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಬಿರದಲ್ಲಿ ಆರೋಗ್ಯ ತಪಾಸಣೆ, ಪರಿಸರ ಸ್ವಚ್ಛತೆ, ಮೂಢನಂಬಿಕೆಗಳ ವಿರುದ್ಧ ಜಾಗೃತಿ, ಶಿಕ್ಷಣದ ಮಹತ್ವ ಒಳಗೊಂಡಂತೆ ವಿವಿಧ ವಿಷಯಗಳ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಲಾಗುತ್ತದೆ. ಶಿಬಿರ ಮುಗಿಯುವವರೆಗೆ ಎಲ್ಲ ರೀತಿಯ ಸಹಕಾರ ಕೊಡಬೇಕು’ ಎಂದು ಕೋರಿದರು.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಎಂ. ಶಿವಲಿಂಗಪ್ಪ, ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ಆರ್. ಹನುಮಂತರಾಯ ಮಾತನಾಡಿದರು. ಶಿಬಿರಾಧಿಕಾರಿ ಎನ್.ಬಿ. ಗಟ್ಟಿ ಸ್ವಾಗತಿಸಿದರು. ಸ್ವಯಂ ಸೇವಕಿ ನೀತು ರಾಜು ನಾಯಕ್ ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-44-1206417046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>