<p>ಹೊಳೆನರಸೀಪುರ: ‘ರಕ್ತಕ್ಕೆ ಪರ್ಯಾಯ ಇಲ್ಲ. ಅಗತ್ಯ ಸಂದರ್ಭದಲ್ಲಿ ರಕ್ತಬೇಕಾದರೆ ಮತ್ತೊಬ್ಬ ವ್ಯಕ್ತಿಯ ರಕ್ತವೇ ನೀಡಬೇಕು. ಆದ್ದರಿಂದ ಯುವಕರು ರಕ್ತದಾನ ಮಾಡಿ ಜೀವಗಳನ್ನು ಉಳಿಸಿ’ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಘಟಕದ ಕಾರ್ಯದರ್ಶಿ ಶಬ್ಬೀರ್ ಅಹಮದ್ ಹೇಳಿದರು.</p>.<p>ಶುಕ್ರವಾರ ತಾಲ್ಲೂಕಿನ ಪಡವಲಹಿಪ್ಪೆ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರು ಅಗತ್ಯ ಸಂದರ್ಭದಲ್ಲಿ ರಕ್ತ ಪಡೆದುಕೊಳ್ಳಲು ಸಾಧ್ಯವಾಗದೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಆದ್ದರಿಂದ ನೀವು ದಾನ ಮಾಡುವ ರಕ್ತದಿಂದ ಅನೇಕ ಜೀವಗಳನ್ನು ಉಳಿಸಬಹುದು ಎಂದರು.</p>.<p>ಚನ್ನರಾಯಪಟ್ಟಣದ ಎಚ್.ಜಿ.ಭರತ್ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಿ. ಅನೇಕರಿಗೆ ಸಹಾಯ ಮಾಡಬಹುದು. ಇತ್ತೀಚಿನ ದಿನದಲ್ಲಿ ರಕ್ತದೊತ್ತಡ, ಮಧುಮೇಹ ಕ್ಯಾನ್ಸರ್ನಂತಹ ಕಾಯಿಲೆಗಳು ಸಾಮಾನ್ಯ ಎನ್ನುವಂತಾಗಿದೆ. ಆದ್ದರಿಂದ ಆರೋಗ್ಯ ಕಾಪಾಡಿಕೊಳ್ಳಲು ಅಗತ್ಯವಾದ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ರೂಡಿಸಿಕೊಳ್ಳಿ ಎಂದರು.</p>.<p>ಹಾಸನ ಅಗರ್ವಾಲ್ ಕಣ್ಣಿನ ಆಸ್ಪತ್ರೆಯಿಂದ ಕಣ್ಣಿನ ರೋಗಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ವಿದ್ಯಾರ್ಥಿಗಳು ಆಧ್ಯಾಪಕರು 69 ಯೂನಿಟ್ ರಕ್ತ ದಾನ ಮಾಡಿದರು.</p>.<p>ರೆಡ್ ಕ್ರಾಸ್ ನಿರ್ದೇಶಕ ಉದಯ್ಕುಮಾರ್ ಮಾತನಾಡಿದರು.ಪ್ರಾಂಶುಪಾಲರಾದ ಕೆ.ಸಿ.ವಿಶ್ವನಾಥ್, ಭುವನೇಂದ್ರ, ಸಂಚಾಲಕರಾದ ಸಂಜೀವ್ ಕುಮಾರ್, ಭೀಮರಾಜ್, ಅವಿನಾಶ್, ಲಕ್ಷ್ಮೀಶ್, ದೀಪು, ಸಿ.ಎಂ.ವೆಂಕಟೇಶ್, ದಿವಾಕರ್, ಉಮೇಶ್, ಚಂದ್ರಶೇಖರ್, ವೇಣುಪ್ರಸಾದ್, ಶಿವಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-1299190693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆನರಸೀಪುರ: ‘ರಕ್ತಕ್ಕೆ ಪರ್ಯಾಯ ಇಲ್ಲ. ಅಗತ್ಯ ಸಂದರ್ಭದಲ್ಲಿ ರಕ್ತಬೇಕಾದರೆ ಮತ್ತೊಬ್ಬ ವ್ಯಕ್ತಿಯ ರಕ್ತವೇ ನೀಡಬೇಕು. ಆದ್ದರಿಂದ ಯುವಕರು ರಕ್ತದಾನ ಮಾಡಿ ಜೀವಗಳನ್ನು ಉಳಿಸಿ’ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಘಟಕದ ಕಾರ್ಯದರ್ಶಿ ಶಬ್ಬೀರ್ ಅಹಮದ್ ಹೇಳಿದರು.</p>.<p>ಶುಕ್ರವಾರ ತಾಲ್ಲೂಕಿನ ಪಡವಲಹಿಪ್ಪೆ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರು ಅಗತ್ಯ ಸಂದರ್ಭದಲ್ಲಿ ರಕ್ತ ಪಡೆದುಕೊಳ್ಳಲು ಸಾಧ್ಯವಾಗದೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಆದ್ದರಿಂದ ನೀವು ದಾನ ಮಾಡುವ ರಕ್ತದಿಂದ ಅನೇಕ ಜೀವಗಳನ್ನು ಉಳಿಸಬಹುದು ಎಂದರು.</p>.<p>ಚನ್ನರಾಯಪಟ್ಟಣದ ಎಚ್.ಜಿ.ಭರತ್ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಿ. ಅನೇಕರಿಗೆ ಸಹಾಯ ಮಾಡಬಹುದು. ಇತ್ತೀಚಿನ ದಿನದಲ್ಲಿ ರಕ್ತದೊತ್ತಡ, ಮಧುಮೇಹ ಕ್ಯಾನ್ಸರ್ನಂತಹ ಕಾಯಿಲೆಗಳು ಸಾಮಾನ್ಯ ಎನ್ನುವಂತಾಗಿದೆ. ಆದ್ದರಿಂದ ಆರೋಗ್ಯ ಕಾಪಾಡಿಕೊಳ್ಳಲು ಅಗತ್ಯವಾದ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ರೂಡಿಸಿಕೊಳ್ಳಿ ಎಂದರು.</p>.<p>ಹಾಸನ ಅಗರ್ವಾಲ್ ಕಣ್ಣಿನ ಆಸ್ಪತ್ರೆಯಿಂದ ಕಣ್ಣಿನ ರೋಗಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ವಿದ್ಯಾರ್ಥಿಗಳು ಆಧ್ಯಾಪಕರು 69 ಯೂನಿಟ್ ರಕ್ತ ದಾನ ಮಾಡಿದರು.</p>.<p>ರೆಡ್ ಕ್ರಾಸ್ ನಿರ್ದೇಶಕ ಉದಯ್ಕುಮಾರ್ ಮಾತನಾಡಿದರು.ಪ್ರಾಂಶುಪಾಲರಾದ ಕೆ.ಸಿ.ವಿಶ್ವನಾಥ್, ಭುವನೇಂದ್ರ, ಸಂಚಾಲಕರಾದ ಸಂಜೀವ್ ಕುಮಾರ್, ಭೀಮರಾಜ್, ಅವಿನಾಶ್, ಲಕ್ಷ್ಮೀಶ್, ದೀಪು, ಸಿ.ಎಂ.ವೆಂಕಟೇಶ್, ದಿವಾಕರ್, ಉಮೇಶ್, ಚಂದ್ರಶೇಖರ್, ವೇಣುಪ್ರಸಾದ್, ಶಿವಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-1299190693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>