<p>ಹೊಳೆನರಸೀಪುರ: ‘ದೇಶಕ್ಕೆ ತಕ್ಕ ಸಂವಿಧಾನವನ್ನು ಬಿ.ಆರ್.ಅಂಬೇಡ್ಕರ್ ಅವರು ನೀಡಿದ್ದಾರೆ. ಸಾವಿರಾರು ಭಾಷೆ, ಹತ್ತಾರು ಧರ್ಮಗಳನ್ನು ಅನುಸರಿಸುವ ಎಲ್ಲರಿಗೂ ನಮ್ಮ ಸಂವಿಧಾನ ಸಾಮಾಜಿಕ ನ್ಯಾಯ ನೀಡಿದೆ’ ಎಂದು ನ್ಯಾಯಾಧೀಶೆ ನಿವೇದಿತಾ ಮಹಂತೇಶ್ ಮುನವಳ್ಳಿ ಮಠ್ ತಿಳಿಸಿದರು.</p>.<p>ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ವಕೀಲರ ಸಂಘ ಬುಧವಾರ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ‘ಸಂವಿಧಾನ ನಮಗೆಲ್ಲಾ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಿ ಸಂವಿಧಾನವನ್ನು ಗೌರವಿಸಿ’ ಎಂದರು.</p>.<p>ಶಿಕ್ಷಕ ಎಂ.ಜಿ.ಪರಮೇಶ್ ಮಾತನಾಡಿ, ‘ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ ಪಡೆಯುತ್ತಿದ್ದ ಸಂದರ್ಭದಲ್ಲಿ ಅಸ್ಪೃಶ್ಯತೆ, ಬಡತನ, ಜಾತೀಯತೆಯಿಂದ ಕೂಡಿದ ಕಷ್ಟಕರ ಜೀವನವನ್ನು ಮೆಟ್ಟಿ ನಿಂತು ಸಮಾಜವನ್ನು ಬೆಳಕಿನೆಡೆಗೆ ಕೊಂಡ್ಯೊಯುವ ಕಾರ್ಯ ಮಾಡಿದ ಮಹಾಪುರುಷರು’ ಎಂದರು.</p>.<p>‘ಸಂವಿಧಾನ ದೇಶದ ಸರ್ವತೋಮುಖ ಅಭಿವೃದ್ಧಿಗೆ ಸುಭದ್ರವಾದ ಕಾನೂನು ಹಾಗೂ ನಿಯಮ ರೂಪಿಸಿಕೊಟ್ಟಿದೆ’ ಎಂದರು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ವಿ.ಶಿವಕುಮಾರ್, ಸಹಾಯಕ ಸರ್ಕಾರಿ ಅಭಿಯೋಜಕ ಸುನೀಲ್ ಕುಮಾರ್, ವಕೀಲ ಜಯಪ್ರಕಾಶ್ ಮಾತನಾಡಿದರು.</p>.<p>ಸಿವಿಲ್ ನ್ಯಾಯಾಧೀಶೆ ಚೇತನಾ, ಅಪರ ಸಿವಿಲ್ ನ್ಯಾಯಾಧೀಶೆ ಐಶ್ವರ್ಯ ಗುಡದಿನ್ನಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಸುರೇಶ್ ಜಿ.ಎಸ್., ಶಿವಮ್ಮ, ನ್ಯಾಯಾಲಯದ ಸಿಬ್ಬಂದಿ ಗಂಗಾಧರಪ್ಪ, ಡಿ.ಶಿವಮೂರ್ತಿ, ಶ್ವೇತ ಪ್ರಕಾಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-36-976401148</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆನರಸೀಪುರ: ‘ದೇಶಕ್ಕೆ ತಕ್ಕ ಸಂವಿಧಾನವನ್ನು ಬಿ.ಆರ್.ಅಂಬೇಡ್ಕರ್ ಅವರು ನೀಡಿದ್ದಾರೆ. ಸಾವಿರಾರು ಭಾಷೆ, ಹತ್ತಾರು ಧರ್ಮಗಳನ್ನು ಅನುಸರಿಸುವ ಎಲ್ಲರಿಗೂ ನಮ್ಮ ಸಂವಿಧಾನ ಸಾಮಾಜಿಕ ನ್ಯಾಯ ನೀಡಿದೆ’ ಎಂದು ನ್ಯಾಯಾಧೀಶೆ ನಿವೇದಿತಾ ಮಹಂತೇಶ್ ಮುನವಳ್ಳಿ ಮಠ್ ತಿಳಿಸಿದರು.</p>.<p>ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ವಕೀಲರ ಸಂಘ ಬುಧವಾರ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ‘ಸಂವಿಧಾನ ನಮಗೆಲ್ಲಾ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಿ ಸಂವಿಧಾನವನ್ನು ಗೌರವಿಸಿ’ ಎಂದರು.</p>.<p>ಶಿಕ್ಷಕ ಎಂ.ಜಿ.ಪರಮೇಶ್ ಮಾತನಾಡಿ, ‘ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ ಪಡೆಯುತ್ತಿದ್ದ ಸಂದರ್ಭದಲ್ಲಿ ಅಸ್ಪೃಶ್ಯತೆ, ಬಡತನ, ಜಾತೀಯತೆಯಿಂದ ಕೂಡಿದ ಕಷ್ಟಕರ ಜೀವನವನ್ನು ಮೆಟ್ಟಿ ನಿಂತು ಸಮಾಜವನ್ನು ಬೆಳಕಿನೆಡೆಗೆ ಕೊಂಡ್ಯೊಯುವ ಕಾರ್ಯ ಮಾಡಿದ ಮಹಾಪುರುಷರು’ ಎಂದರು.</p>.<p>‘ಸಂವಿಧಾನ ದೇಶದ ಸರ್ವತೋಮುಖ ಅಭಿವೃದ್ಧಿಗೆ ಸುಭದ್ರವಾದ ಕಾನೂನು ಹಾಗೂ ನಿಯಮ ರೂಪಿಸಿಕೊಟ್ಟಿದೆ’ ಎಂದರು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ವಿ.ಶಿವಕುಮಾರ್, ಸಹಾಯಕ ಸರ್ಕಾರಿ ಅಭಿಯೋಜಕ ಸುನೀಲ್ ಕುಮಾರ್, ವಕೀಲ ಜಯಪ್ರಕಾಶ್ ಮಾತನಾಡಿದರು.</p>.<p>ಸಿವಿಲ್ ನ್ಯಾಯಾಧೀಶೆ ಚೇತನಾ, ಅಪರ ಸಿವಿಲ್ ನ್ಯಾಯಾಧೀಶೆ ಐಶ್ವರ್ಯ ಗುಡದಿನ್ನಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಸುರೇಶ್ ಜಿ.ಎಸ್., ಶಿವಮ್ಮ, ನ್ಯಾಯಾಲಯದ ಸಿಬ್ಬಂದಿ ಗಂಗಾಧರಪ್ಪ, ಡಿ.ಶಿವಮೂರ್ತಿ, ಶ್ವೇತ ಪ್ರಕಾಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-36-976401148</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>