<p>ಹೊಳೆನರಸೀಪುರ: ‘ವಿದ್ಯಾರ್ಥಿಗಳು ಓದುವ ಜೊತೆಗೆ ಕೇಳುವ ಕಲೆಯನ್ನು ಬೆಳೆಸಿಕೊಳ್ಳಿ’ ಎಂದು ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಸಲಹೆ ನೀಡಿದರು.</p>.<p>ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಸೋಶಿಯಲ್ ಕ್ಲಬ್ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪಟ್ಟಣದ ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಮಾತನಾಡಿ, ‘ಕ್ಲಬ್ ಪ್ರತಿ ವರ್ಷ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರ ಮಾಡುತ್ತಾ ಬಂದಿದೆ. ಕ್ಲಬ್ ಸ್ಥಳದಲ್ಲಿ ನಿರಂತರ ಶಿಕ್ಷಣ ಚಟುವಟಿಕೆಗಳಿಗೆ ಅವಕಾಶ ನೀಡಿ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ’ ಎಂದರು.</p>.<p>‘ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ವಿದ್ಯಾಭ್ಯಾಸಕ್ಕೆ ಪೂರಕವಾದದನ್ನು ಮಾತ್ರ ನೋಡಿ ಚೆನ್ನಾಗಿ ವ್ಯಾಸಂಗ ಮಾಡಿ ಉತ್ತಮ ಬದುಕು ರೂಪಿಸಿಕೊಳ್ಳಿ’ ಎಂದು ಹೇಳಿದರು.</p>.<p>ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಮನಶಾಸ್ತ್ರ ವಿಭಾಗದ ಮುಖ್ಯಸ್ಥ ಕೃಷ್ಣಮೂರ್ತಿ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ನಂತರ ಅವರ ಆಸಕ್ತಿ ಏನು ಎಂಬುದನ್ನು ವೈಜ್ಞಾನಿಕವಾಗಿ ತಿಳಿದುಕೊಳ್ಳಲು ನಮ್ಮ ಕಾಲೇಜಿನಲ್ಲಿ ಹಲವು ಆಯಾಮಗಳ ಪ್ರಶ್ನೆ ಪತ್ರಿಕೆಯನ್ನು ಹೊರತಂದಿದ್ದೇವೆ. ಈ ಪ್ರಶ್ನೆ ಪತ್ರಿಕೆಯಲ್ಲಿ ವಿದ್ಯಾರ್ಥಿಗಳು ಬರೆದಿರುವ ಉತ್ತರಗಳನ್ನು ನೀಡಿ ಯಾವುದರಲ್ಲಿ ಆಸಕ್ತಿ ಇದೆ, ಯಾವ ವಿಷಯದಲ್ಲಿ ವ್ಯಾಸಂಗ ಮಾಡಿದರೆ ಒಳೆಯದು ಎನ್ನುವ ಸಂಪೂರ್ಣ ಮಾಹಿತಿ ನೀಡುತ್ತೇವೆ. ಈ ಬಗ್ಗೆ ತಿಳಿದುಕೊಳ್ಳಲು ಸರ್ಕಾರಿ ಗೃಹ ವಿಜ್ಞಾನ ಕಾಲೇಜಿಗೆ ಭೇಟಿ ನೀಡಿ’ ಎಂದರು.</p>.<p>ಸರ್ಕಾರಿ ಶಾಲೆಗಳಲ್ಲಿ ಓದಿ, ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತೀ ವಿದ್ಯಾರ್ಥಿಗಳಿಗೆ ₹2 ಸಾವಿರ ನಗದು ಬಹುಮಾನ, ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.</p>.<p>ಕ್ಲಬ್ ಅಧ್ಯಕ್ಷ ಕೆ.ಎಂ. ಹೊನ್ನಪ್ಪ, ಕಾರ್ಯದರ್ಶಿ ಕೆ.ಆರ್. ಸುದರ್ಶನ್ ಬಾಬು ಮಾತನಾಡಿದರು. ಸುರೇಶ್ ಕುಮಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಫಕೀರಮ್ಮ ಮುರಗೋಡು ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-36-1424145967</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆನರಸೀಪುರ: ‘ವಿದ್ಯಾರ್ಥಿಗಳು ಓದುವ ಜೊತೆಗೆ ಕೇಳುವ ಕಲೆಯನ್ನು ಬೆಳೆಸಿಕೊಳ್ಳಿ’ ಎಂದು ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಸಲಹೆ ನೀಡಿದರು.</p>.<p>ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಸೋಶಿಯಲ್ ಕ್ಲಬ್ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪಟ್ಟಣದ ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಮಾತನಾಡಿ, ‘ಕ್ಲಬ್ ಪ್ರತಿ ವರ್ಷ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರ ಮಾಡುತ್ತಾ ಬಂದಿದೆ. ಕ್ಲಬ್ ಸ್ಥಳದಲ್ಲಿ ನಿರಂತರ ಶಿಕ್ಷಣ ಚಟುವಟಿಕೆಗಳಿಗೆ ಅವಕಾಶ ನೀಡಿ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ’ ಎಂದರು.</p>.<p>‘ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ವಿದ್ಯಾಭ್ಯಾಸಕ್ಕೆ ಪೂರಕವಾದದನ್ನು ಮಾತ್ರ ನೋಡಿ ಚೆನ್ನಾಗಿ ವ್ಯಾಸಂಗ ಮಾಡಿ ಉತ್ತಮ ಬದುಕು ರೂಪಿಸಿಕೊಳ್ಳಿ’ ಎಂದು ಹೇಳಿದರು.</p>.<p>ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಮನಶಾಸ್ತ್ರ ವಿಭಾಗದ ಮುಖ್ಯಸ್ಥ ಕೃಷ್ಣಮೂರ್ತಿ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ನಂತರ ಅವರ ಆಸಕ್ತಿ ಏನು ಎಂಬುದನ್ನು ವೈಜ್ಞಾನಿಕವಾಗಿ ತಿಳಿದುಕೊಳ್ಳಲು ನಮ್ಮ ಕಾಲೇಜಿನಲ್ಲಿ ಹಲವು ಆಯಾಮಗಳ ಪ್ರಶ್ನೆ ಪತ್ರಿಕೆಯನ್ನು ಹೊರತಂದಿದ್ದೇವೆ. ಈ ಪ್ರಶ್ನೆ ಪತ್ರಿಕೆಯಲ್ಲಿ ವಿದ್ಯಾರ್ಥಿಗಳು ಬರೆದಿರುವ ಉತ್ತರಗಳನ್ನು ನೀಡಿ ಯಾವುದರಲ್ಲಿ ಆಸಕ್ತಿ ಇದೆ, ಯಾವ ವಿಷಯದಲ್ಲಿ ವ್ಯಾಸಂಗ ಮಾಡಿದರೆ ಒಳೆಯದು ಎನ್ನುವ ಸಂಪೂರ್ಣ ಮಾಹಿತಿ ನೀಡುತ್ತೇವೆ. ಈ ಬಗ್ಗೆ ತಿಳಿದುಕೊಳ್ಳಲು ಸರ್ಕಾರಿ ಗೃಹ ವಿಜ್ಞಾನ ಕಾಲೇಜಿಗೆ ಭೇಟಿ ನೀಡಿ’ ಎಂದರು.</p>.<p>ಸರ್ಕಾರಿ ಶಾಲೆಗಳಲ್ಲಿ ಓದಿ, ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತೀ ವಿದ್ಯಾರ್ಥಿಗಳಿಗೆ ₹2 ಸಾವಿರ ನಗದು ಬಹುಮಾನ, ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.</p>.<p>ಕ್ಲಬ್ ಅಧ್ಯಕ್ಷ ಕೆ.ಎಂ. ಹೊನ್ನಪ್ಪ, ಕಾರ್ಯದರ್ಶಿ ಕೆ.ಆರ್. ಸುದರ್ಶನ್ ಬಾಬು ಮಾತನಾಡಿದರು. ಸುರೇಶ್ ಕುಮಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಫಕೀರಮ್ಮ ಮುರಗೋಡು ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-36-1424145967</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>