<p>ಹೊನ್ನಾಳಿ: ಪಟ್ಟಣದ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಸ್ಥಳದಲ್ಲಿಯೇ ಬೆಂಕಿರಹಿತ ಅಡುಗೆ ತಯಾರಿಕೆ ಮತ್ತು ಪ್ರದರ್ಶನವನ್ನು ಈಚೆಗೆ ಹಮ್ಮಿಕೊಳ್ಳಲಾಗಿತ್ತು.</p>.<p>10 ತಂಡಗಳಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಅಂತಿಮ ಬಿ.ಎ. ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದರು. ಇವರು ತಯಾರಿಸಿದ ಬ್ರೆಡ್ ಕೇಕ್, ಕೊಬ್ಬರಿ ಉಂಡೆ, ಬೀಟ್ರೂಟ್ ಖಾದ್ಯ ಸೇರಿದಂತೆ ವಿವಿಧ ರೆಸಿಪಿಗಳು ತೀರ್ಪುಗಾರರ ಮೆಚ್ಚುಗೆ ಪಡೆದವು.</p>.<p>ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ, ತೃತೀಯ ಬಿ.ಎ. ವಿದ್ಯಾರ್ಥಿನಿಯರ ಮತ್ತೊಂದು ತಂಡ ತೃತೀಯ ಸ್ಥಾನ ಪಡೆಯಿತು.</p>.<p>ಒಂದು ಗಂಟೆಯೊಳಗೆ ವೈವಿಧ್ಯಮಯ ಆಹಾರ ಪದಾರ್ಥಗಳನ್ನು ತಯಾರಿಸಿದ್ದು ಅಭಿನಂದನೀಯ ಎಂದು ಕಾಲೇಜಿನ ಪ್ರಾಂಶುಪಾಲ ಕೆ. ನಾಗೇಶ್ ಹೇಳಿದರು.</p>.<p>ಪ್ರಾಧ್ಯಾಪಕರಾದ ಬಸವರಾಜ್, ಕುಮಾರನಾಯ್ಕ, ಪ್ರವೀಣ್ ದೊಡ್ಡಗೌಡ, ಕಚೇರಿಯ ಅಧೀಕ್ಷಕ ಎನ್. ಲೋಕೇಶ್ವರ್, ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ್ ನರಗಟ್ಟಿ, ಸತೀಶ್, ಶ್ವೇತಾ, ಉಮಾ ಪಾಟೀಲ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-43-1818334560</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ಪಟ್ಟಣದ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಸ್ಥಳದಲ್ಲಿಯೇ ಬೆಂಕಿರಹಿತ ಅಡುಗೆ ತಯಾರಿಕೆ ಮತ್ತು ಪ್ರದರ್ಶನವನ್ನು ಈಚೆಗೆ ಹಮ್ಮಿಕೊಳ್ಳಲಾಗಿತ್ತು.</p>.<p>10 ತಂಡಗಳಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಅಂತಿಮ ಬಿ.ಎ. ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದರು. ಇವರು ತಯಾರಿಸಿದ ಬ್ರೆಡ್ ಕೇಕ್, ಕೊಬ್ಬರಿ ಉಂಡೆ, ಬೀಟ್ರೂಟ್ ಖಾದ್ಯ ಸೇರಿದಂತೆ ವಿವಿಧ ರೆಸಿಪಿಗಳು ತೀರ್ಪುಗಾರರ ಮೆಚ್ಚುಗೆ ಪಡೆದವು.</p>.<p>ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ, ತೃತೀಯ ಬಿ.ಎ. ವಿದ್ಯಾರ್ಥಿನಿಯರ ಮತ್ತೊಂದು ತಂಡ ತೃತೀಯ ಸ್ಥಾನ ಪಡೆಯಿತು.</p>.<p>ಒಂದು ಗಂಟೆಯೊಳಗೆ ವೈವಿಧ್ಯಮಯ ಆಹಾರ ಪದಾರ್ಥಗಳನ್ನು ತಯಾರಿಸಿದ್ದು ಅಭಿನಂದನೀಯ ಎಂದು ಕಾಲೇಜಿನ ಪ್ರಾಂಶುಪಾಲ ಕೆ. ನಾಗೇಶ್ ಹೇಳಿದರು.</p>.<p>ಪ್ರಾಧ್ಯಾಪಕರಾದ ಬಸವರಾಜ್, ಕುಮಾರನಾಯ್ಕ, ಪ್ರವೀಣ್ ದೊಡ್ಡಗೌಡ, ಕಚೇರಿಯ ಅಧೀಕ್ಷಕ ಎನ್. ಲೋಕೇಶ್ವರ್, ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ್ ನರಗಟ್ಟಿ, ಸತೀಶ್, ಶ್ವೇತಾ, ಉಮಾ ಪಾಟೀಲ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-43-1818334560</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>