<p>ಹೊನ್ನಾಳಿ: ‘ನಮ್ಮ ಯುವಪೀಳಿಗೆಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ’ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಿ. ವೀರಣ್ಣ ಪಟ್ಟಣಶೆಟ್ಟಿ ಹೇಳಿದರು.</p>.<p>ಹಿರೇಕಲ್ಮಠದ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕೊಪ್ಪಳ ಜಿಲ್ಲೆಯ ಸಂಗೀತಾ ಅವರು ಈ ಬಾರಿಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಅವರನ್ನು ಇಲ್ಲಿಗೆ ಕರೆಸಿ ಸನ್ಮಾನ ಮಾಡುತ್ತಿರುವುದು ಖುಷಿ ಕೊಟ್ಟಿದೆ. ನಮ್ಮ ಈ ಕೆಲಸ ಉಳಿದವರಿಗೆ ಪ್ರೇರಣೆಯಾಗಲಿ. ನಮ್ಮ ಸಮಾಜದ ನೂರಾರು ಯುವಕರು ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿದ ಕೀರ್ತಿ ನಮ್ಮ ಕಣ್ಣಮುಂದಿದೆ’ ಎಂದರು.</p>.<p>ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಎಂ. ಬೇವಿನಮರದ ಮಾತನಾಡಿ, ‘ರಾಣಿ ಅಬ್ಬಕ್ಕ ದೇವಿ ಪ್ರಶಸ್ತಿ ನೀಡಿದಂತೆ, ವೀರವನಿತೆ ಬೆಳವಾಡಿ ಮಲ್ಲಮ್ಮ ಅವರ ಹೆಸರಿನಲ್ಲಿ 5 ಪ್ರಶಸ್ತಿಗಳನ್ನು ಸ್ಥಾಪಿಸಿ ನಮ್ಮ ಪ್ರಾಧಿಕಾರದಿಂದ ನೀಡಲಾಗುವುದು’ ಎಂದರು.</p>.<p>ವೈದ್ಯ ರಾಜ್ಕುಮಾರ್ ಮಾತನಾಡಿ, ‘ಹೊನ್ನಾಳಿ ತಾಲ್ಲೂಕಿನ ಪಂಚಮಸಾಲಿ ಸಮಾಜವು ಪಾರದರ್ಶಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಮುಂಚೂಣಿಯಲ್ಲಿದೆ’ ಎಂದು ಶ್ಲಾಘಿಸಿದರು.</p>.<p>ದಾವಣಗೆರೆಯ ಮಕ್ಕಳ ತಜ್ಞರಾದ ಸುಧಾ ಸಿ. ಪಾಟೀಲ್, ರಾಜು ವಿ. ಮೋತಿ ಮಾತನಾಡಿದರು.</p>.<p>ಡಾ. ದೀಪಕ್ ಬಿ. ಉಪ್ಪಿನ್, ವೀರಣ್ಣ ಪಟ್ಟಣಶೆಟ್ಟಿ, ಎಚ್.ಪಿ. ದಿನೇಶ್, ಕುಂಕೋದ್ ಸೋಮಶೇಖರಪ್ಪ, ಸಿದ್ದೇಶ್ ನಾಡಿಗ್ ಹಾಗೂ ಎಸ್ಎಸ್ಎಲ್ಸಿ, ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ವಿದ್ಯಾರ್ಥಿನಿ ಸಂಗೀತಾ, ಉಪನ್ಯಾಸಕ ಎಚ್.ಬಿ. ಅಶೋಕ್, ನ್ಯಾಮತಿಯ ಚಂದ್ರಶೇಖರ್ ಪೂಜಾರ್, ಶಿಲ್ಪಾ ರಾಜುಗೌಡ, ಹಾಲೇಶ್ ಕುಂಕೋದ್ ಉಪಸ್ಥಿತರಿದ್ದರು. ಸುಮಾ ರವಿಕುಮಾರ್, ಗಿರೀಶ್ ನಾಡಿಗ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-43-2089055247</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ‘ನಮ್ಮ ಯುವಪೀಳಿಗೆಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ’ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಿ. ವೀರಣ್ಣ ಪಟ್ಟಣಶೆಟ್ಟಿ ಹೇಳಿದರು.</p>.<p>ಹಿರೇಕಲ್ಮಠದ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕೊಪ್ಪಳ ಜಿಲ್ಲೆಯ ಸಂಗೀತಾ ಅವರು ಈ ಬಾರಿಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಅವರನ್ನು ಇಲ್ಲಿಗೆ ಕರೆಸಿ ಸನ್ಮಾನ ಮಾಡುತ್ತಿರುವುದು ಖುಷಿ ಕೊಟ್ಟಿದೆ. ನಮ್ಮ ಈ ಕೆಲಸ ಉಳಿದವರಿಗೆ ಪ್ರೇರಣೆಯಾಗಲಿ. ನಮ್ಮ ಸಮಾಜದ ನೂರಾರು ಯುವಕರು ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿದ ಕೀರ್ತಿ ನಮ್ಮ ಕಣ್ಣಮುಂದಿದೆ’ ಎಂದರು.</p>.<p>ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಎಂ. ಬೇವಿನಮರದ ಮಾತನಾಡಿ, ‘ರಾಣಿ ಅಬ್ಬಕ್ಕ ದೇವಿ ಪ್ರಶಸ್ತಿ ನೀಡಿದಂತೆ, ವೀರವನಿತೆ ಬೆಳವಾಡಿ ಮಲ್ಲಮ್ಮ ಅವರ ಹೆಸರಿನಲ್ಲಿ 5 ಪ್ರಶಸ್ತಿಗಳನ್ನು ಸ್ಥಾಪಿಸಿ ನಮ್ಮ ಪ್ರಾಧಿಕಾರದಿಂದ ನೀಡಲಾಗುವುದು’ ಎಂದರು.</p>.<p>ವೈದ್ಯ ರಾಜ್ಕುಮಾರ್ ಮಾತನಾಡಿ, ‘ಹೊನ್ನಾಳಿ ತಾಲ್ಲೂಕಿನ ಪಂಚಮಸಾಲಿ ಸಮಾಜವು ಪಾರದರ್ಶಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಮುಂಚೂಣಿಯಲ್ಲಿದೆ’ ಎಂದು ಶ್ಲಾಘಿಸಿದರು.</p>.<p>ದಾವಣಗೆರೆಯ ಮಕ್ಕಳ ತಜ್ಞರಾದ ಸುಧಾ ಸಿ. ಪಾಟೀಲ್, ರಾಜು ವಿ. ಮೋತಿ ಮಾತನಾಡಿದರು.</p>.<p>ಡಾ. ದೀಪಕ್ ಬಿ. ಉಪ್ಪಿನ್, ವೀರಣ್ಣ ಪಟ್ಟಣಶೆಟ್ಟಿ, ಎಚ್.ಪಿ. ದಿನೇಶ್, ಕುಂಕೋದ್ ಸೋಮಶೇಖರಪ್ಪ, ಸಿದ್ದೇಶ್ ನಾಡಿಗ್ ಹಾಗೂ ಎಸ್ಎಸ್ಎಲ್ಸಿ, ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ವಿದ್ಯಾರ್ಥಿನಿ ಸಂಗೀತಾ, ಉಪನ್ಯಾಸಕ ಎಚ್.ಬಿ. ಅಶೋಕ್, ನ್ಯಾಮತಿಯ ಚಂದ್ರಶೇಖರ್ ಪೂಜಾರ್, ಶಿಲ್ಪಾ ರಾಜುಗೌಡ, ಹಾಲೇಶ್ ಕುಂಕೋದ್ ಉಪಸ್ಥಿತರಿದ್ದರು. ಸುಮಾ ರವಿಕುಮಾರ್, ಗಿರೀಶ್ ನಾಡಿಗ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-43-2089055247</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>