<p>ಹೊಸದುರ್ಗ: ತಾಲ್ಲೂಕಿನ ಅತ್ತಿಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭವಾಗಿರುವುದರಿಂದ ಈ ಬಾರಿ ದಾಖಲಾತಿ ಹೆಚ್ಚಿದೆ. ಕಳೆದ ಬಾರಿ 39 ವಿದ್ಯಾರ್ಥಿಗಳಿದ್ದರು. ಈ ಬಾರಿ 48 ಜನ ಶಾಲೆಗೆ ಸೇರ್ಪಡೆ ಆಗಿದ್ದಾರೆ.</p>.<p>ಸೋಮವಾರ ವಿದ್ಯಾರ್ಥಿಗಳನ್ನು ಎತ್ತಿನ ಗಾಡಿಯಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಶಾಲೆಗೆ ಕರೆ ತರಲಾಯಿತು. ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು ಹೂವು ನೀಡಿ ಸ್ವಾಗತಿಸಿದರು.</p>.<p>‘ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭವಾಗಿರುವುದರಿಂದ ಈ ಬಾರಿ ದಾಖಲಾತಿ ಹೆಚ್ಚಿದೆ. ಪೋಷಕರು ಮಕ್ಕಳನ್ನು ಖಾಸಗಿ ಶಾಲೆಯಿಂದ ಕರೆತಂದು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದಾಖಲಾತಿ ಇನ್ನೂ ಹೆಚ್ಚಾಗಲಿದೆ’ ಎಂದು ಮುಖ್ಯ ಶಿಕ್ಷಕ ಆರ್.ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಎಸ್.ಡಿ.ಎಂ.ಸಿ ಅಧ್ಯಕ್ಷ ಕರಿತಿಮ್ಮಪ್ಪ, ಸಿ.ಆರ್.ಪಿ. ರೂಪಾ, ಸಹ ಶಿಕ್ಷಕರಾದ ಶಬನಾಬಾನು, ಸವಿತಾ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-44-677373540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ತಾಲ್ಲೂಕಿನ ಅತ್ತಿಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭವಾಗಿರುವುದರಿಂದ ಈ ಬಾರಿ ದಾಖಲಾತಿ ಹೆಚ್ಚಿದೆ. ಕಳೆದ ಬಾರಿ 39 ವಿದ್ಯಾರ್ಥಿಗಳಿದ್ದರು. ಈ ಬಾರಿ 48 ಜನ ಶಾಲೆಗೆ ಸೇರ್ಪಡೆ ಆಗಿದ್ದಾರೆ.</p>.<p>ಸೋಮವಾರ ವಿದ್ಯಾರ್ಥಿಗಳನ್ನು ಎತ್ತಿನ ಗಾಡಿಯಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಶಾಲೆಗೆ ಕರೆ ತರಲಾಯಿತು. ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು ಹೂವು ನೀಡಿ ಸ್ವಾಗತಿಸಿದರು.</p>.<p>‘ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭವಾಗಿರುವುದರಿಂದ ಈ ಬಾರಿ ದಾಖಲಾತಿ ಹೆಚ್ಚಿದೆ. ಪೋಷಕರು ಮಕ್ಕಳನ್ನು ಖಾಸಗಿ ಶಾಲೆಯಿಂದ ಕರೆತಂದು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದಾಖಲಾತಿ ಇನ್ನೂ ಹೆಚ್ಚಾಗಲಿದೆ’ ಎಂದು ಮುಖ್ಯ ಶಿಕ್ಷಕ ಆರ್.ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಎಸ್.ಡಿ.ಎಂ.ಸಿ ಅಧ್ಯಕ್ಷ ಕರಿತಿಮ್ಮಪ್ಪ, ಸಿ.ಆರ್.ಪಿ. ರೂಪಾ, ಸಹ ಶಿಕ್ಷಕರಾದ ಶಬನಾಬಾನು, ಸವಿತಾ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-44-677373540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>