<p>ಹೊಸನಗರ: ‘ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಬಂಗಾರದಂತಹ ಬದುಕು ಹಾಳು ಮಾಡಿಕೊಳ್ಳುತ್ತಿರುವುದು ಅತ್ಯಂತ ದುಃಖದ ಸಂಗತಿ’ ಎಂದು ಉಪನ್ಯಾಸಕ ನಾಗೇಶ್ ಬಿದರಗೋಡು ಬೇಸರ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಪದವಿ ಕಾಲೇಜಿನ ಸಾಂಸ್ಕೃತಿಕ ಹಾಗೂ ವಿವಿಧ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.</p>.<p>‘ವಿದ್ಯಾರ್ಥಿಗಳು ಎಂದಿಗೂ ದುಶ್ಚಟಗಳಿಗೆ ದಾಸರಾಗಬಾರದು. ಕೆಟ್ಟ ಚಟಗಳಿಗೆ ಒಮ್ಮೆ ಅಂಟಿಕೊಂಡರೆ ಬದುಕು ಕತ್ತಲೆಯ ಕೂಪವಾಗುತ್ತದೆ. ಬದುಕಿನ ನಿಜವಾದ ಸ್ವಾರಸ್ಯವಿರುವುದು ಅಭಿರುಚಿ ಹಾಗೂ ಹವ್ಯಾಸಗಳಲ್ಲಿ. ವಿದ್ಯಾರ್ಥಿಗಳು ಇದನ್ನು ಅರಿತು ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>‘ಅತಿವೇಗದ ಬದುಕಿಗೆ ಕಡಿವಾಣ ಬೇಕು. ನೆಮ್ಮದಿಯುತ ಬದುಕು ನಮ್ಮದಾಗಬೇಕೇ ಹೊರತು ಹಣದ ಹಿಂದೆ ಓಡುವ ಬದುಕು ನಮ್ಮದಾಗರಬಾರದು’ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಕಿವಿಮಾತು ಹೇಳಿದರು.</p>.<p>ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅಶ್ವಿನಿಕುಮಾರ್ ಮಾತನಾಡಿದರು.</p>.<p>ಇಡೀ ವರ್ಷದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಹಾಗೂ ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಪ್ರಾಂಶುಪಾಲ ಕೆ.ಉಮೇಶ್ ಅಧ್ಯಕ್ಷತೆ ವಹಿಸಿದ್ದರು.</p>.<p>ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಕೆ.ಎಸ್. ಮೇದಿನಿ ಸ್ವಾಗತಿಸಿದರು. ಪ್ರಾಧ್ಯಾಪಕ ಕೆ.ಶ್ರೀಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈಶ್ವರಿ ಪ್ರಾರ್ಥನಾ ಗೀತೆ ಹಾಡಿದರು. ಮೈತ್ರಿ ಹಾಗೂ ನಾಗವೇಣಿ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ರಾಕೇಶ್ ವಂದಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-42-712120991</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ‘ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಬಂಗಾರದಂತಹ ಬದುಕು ಹಾಳು ಮಾಡಿಕೊಳ್ಳುತ್ತಿರುವುದು ಅತ್ಯಂತ ದುಃಖದ ಸಂಗತಿ’ ಎಂದು ಉಪನ್ಯಾಸಕ ನಾಗೇಶ್ ಬಿದರಗೋಡು ಬೇಸರ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಪದವಿ ಕಾಲೇಜಿನ ಸಾಂಸ್ಕೃತಿಕ ಹಾಗೂ ವಿವಿಧ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.</p>.<p>‘ವಿದ್ಯಾರ್ಥಿಗಳು ಎಂದಿಗೂ ದುಶ್ಚಟಗಳಿಗೆ ದಾಸರಾಗಬಾರದು. ಕೆಟ್ಟ ಚಟಗಳಿಗೆ ಒಮ್ಮೆ ಅಂಟಿಕೊಂಡರೆ ಬದುಕು ಕತ್ತಲೆಯ ಕೂಪವಾಗುತ್ತದೆ. ಬದುಕಿನ ನಿಜವಾದ ಸ್ವಾರಸ್ಯವಿರುವುದು ಅಭಿರುಚಿ ಹಾಗೂ ಹವ್ಯಾಸಗಳಲ್ಲಿ. ವಿದ್ಯಾರ್ಥಿಗಳು ಇದನ್ನು ಅರಿತು ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>‘ಅತಿವೇಗದ ಬದುಕಿಗೆ ಕಡಿವಾಣ ಬೇಕು. ನೆಮ್ಮದಿಯುತ ಬದುಕು ನಮ್ಮದಾಗಬೇಕೇ ಹೊರತು ಹಣದ ಹಿಂದೆ ಓಡುವ ಬದುಕು ನಮ್ಮದಾಗರಬಾರದು’ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಕಿವಿಮಾತು ಹೇಳಿದರು.</p>.<p>ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅಶ್ವಿನಿಕುಮಾರ್ ಮಾತನಾಡಿದರು.</p>.<p>ಇಡೀ ವರ್ಷದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಹಾಗೂ ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಪ್ರಾಂಶುಪಾಲ ಕೆ.ಉಮೇಶ್ ಅಧ್ಯಕ್ಷತೆ ವಹಿಸಿದ್ದರು.</p>.<p>ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಕೆ.ಎಸ್. ಮೇದಿನಿ ಸ್ವಾಗತಿಸಿದರು. ಪ್ರಾಧ್ಯಾಪಕ ಕೆ.ಶ್ರೀಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈಶ್ವರಿ ಪ್ರಾರ್ಥನಾ ಗೀತೆ ಹಾಡಿದರು. ಮೈತ್ರಿ ಹಾಗೂ ನಾಗವೇಣಿ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ರಾಕೇಶ್ ವಂದಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-42-712120991</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>