<p>ಹೊಸಪೇಟೆ (ವಿಜಯನಗರ): ಡಾ.ಬಿ.ಆರ್. ಅಂಬೇಡ್ಕರ್ ಅವರು ಭೂಮಿಯು ಸಮಾನವಾಗಿ ಹಂಚಿಕೆ ಆಗಬೇಕು, ಕೈಗಾರಿಕೆಗಳ ಮೇಲೆ ಪ್ರಭುತ್ವದ ಹಿಡಿತ ಇರಬೇಕು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಸಿಗಬೇಕು ಎಂಬ ಕನಸು ಕಂಡಿದ್ದರು, ಇಂದಿಗೂ ಅದು ನನಸಾಗಿಲ್ಲ ಎಂದು ಜನಪರ ಹೋರಾಟಗಾರ ಮಾವಳ್ಳಿ ಶಂಕರ್ ಹೇಳಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದ ದಲಿತ ಸಂಸ್ಕೃತಿ ಅಧ್ಯಯನ ಪೀಠದ ವತಿಯಿಂದ ಬುಧವಾರ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪ್ರಸಾರಾಂಗವು ಹೊರತಂದ ಡಾ.ಬಿ.ಆರ್.ಆಂಬೇಡ್ಕರ್ ಕುರಿತ 11 ಪುಸ್ತಕಗಳ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.</p>.<p>ಸಂವಿಧಾನದ ಪೂರ್ವಪೀಠಿಕೆಯಲ್ಲಿನ ಮೌಲ್ಯಗಳು ಪ್ರಾಯೋಗಿಕವಾಗಿ ಜಾರಿಯಾಗುತ್ತಿಲ್ಲ, ಸಮಾಜಮುಖಿ ವೃತ್ತಿಗಳನ್ನು ಕೀಳಾಗಿ ಕಾಣುವ ಮನೋಭಾವ ಹೆಚ್ಚಾಗುತ್ತಿದೆ. ತಳ ಸಮುದಾಯಗಳ ಮೇಲೆ ದೌರ್ಜನ್ಯ ಮತ್ತು ಹಲ್ಲೆಗಳ ಪ್ರಮಾಣ ಇತ್ತೀಚೆಗೆ ಹೆಚ್ಚುತ್ತಿದೆ. ಇದೆಲ್ಲದರ ಬಗ್ಗೆ ನಾವು ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದರು.</p>.<p>ಹಿರಿಯ ವಿದ್ವಾಂಸ ಜಾಣಗೆರೆ ವೆಂಕಟರಾಮಯ್ಯ ಅವರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ಮಹಾನ್ ವ್ಯಕ್ತಿಗಳ ತತ್ವಗಳನ್ನು ಸಮಗ್ರವಾಗಿ ಅರ್ಥ ಮಾಡಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ ಎಂದರು.</p>.<p>‘ಇಂದು ರಾಜಕೀಯದಲ್ಲಿ ಜಾತಿ ಮತ್ತು ಧರ್ಮವನ್ನು ಆಧಾರವಾಗಿಟ್ಟುಕೊಂಡು ಅಧಿಕಾರವನ್ನು ಹಿಡಿಯುವ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿ. ದೇಶದ ಮಹಿಳೆಯರಿಗೆ ಸಮಾನತೆ ದೊರೆಯಬೇಕು ಮತ್ತು ಅವರು ರಾಜಕೀಯವಾಗಿ ಮುನ್ನೆಲೆಗೆ ಬರಬೇಕು ಎಂಬ ಅಂಬೇಡ್ಕರ್ ಅವರ ಕನಸು ಇಂದಿಗೂ ನನಸಾಗಿಲ್ಲ’ ಎಂದು ವಿಷಾದಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ಡಾ.ಅಂಬೇಡ್ಕರ್ ಅವರ ಕುರಿತು 11 ಕೃತಿಗಳನ್ನು ಪ್ರಸಾರಾಂಗದಿಂದ ಪ್ರಕಟಿಸುವ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಪ್ರತಿದಿನವೂ ಇಂತಹ ಮಹಾನ್ ವ್ಯಕ್ತಿಗಳನ್ನು ಸ್ಮರಿಸಿಕೊಳ್ಳಬೇಕು ಮತ್ತು ಅವರ ಚಿಂತನೆಗಳನ್ನು ಆಳವಾಗಿ ಅರ್ಥಮಾಡಿಕೊಳ್ಳಬೇಕು ಎಂದರು.</p>.<p>ದಲಿತ ಸಂಸ್ಕೃತಿ ಅಧ್ಯಯನ ಪೀಠದ ಸಂಚಾಲಕ ಪ್ರೊ.ಎನ್. ಚಿನ್ನಸ್ವಾಮಿ ಸೋಸಲೆ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಾನ್ ವ್ಯಕ್ತಿಗಳನ್ನು ಜಾತಿಗೆ ಸೀಮಿತವಾಗಿ ನೋಡುವ ಮನೋಭಾವವನ್ನು ತೊರೆಯಬೇಕು. ಜಾತಿ ಎಂಬ ಅಜ್ಞಾನವು ಸಮಾಜದಲ್ಲಿ ಅಂತರವನ್ನು ಉಂಟುಮಾಡುತ್ತದೆ ಎಂದರು.</p>.<p>ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ, ಪ್ರಸಾರಾಂಗದ ನಿರ್ದೇಶಕ ಪ್ರೊ.ಪಿ.ಮಹಾದೇವಯ್ಯ, ಸಿಂಡಿಕೇಟ್ ಸದಸ್ಯ ಬಣ್ಣದಮನೆ ಸೋಮಶೇಖರ್ ಇದ್ವರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-733007640</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ಡಾ.ಬಿ.ಆರ್. ಅಂಬೇಡ್ಕರ್ ಅವರು ಭೂಮಿಯು ಸಮಾನವಾಗಿ ಹಂಚಿಕೆ ಆಗಬೇಕು, ಕೈಗಾರಿಕೆಗಳ ಮೇಲೆ ಪ್ರಭುತ್ವದ ಹಿಡಿತ ಇರಬೇಕು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಸಿಗಬೇಕು ಎಂಬ ಕನಸು ಕಂಡಿದ್ದರು, ಇಂದಿಗೂ ಅದು ನನಸಾಗಿಲ್ಲ ಎಂದು ಜನಪರ ಹೋರಾಟಗಾರ ಮಾವಳ್ಳಿ ಶಂಕರ್ ಹೇಳಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದ ದಲಿತ ಸಂಸ್ಕೃತಿ ಅಧ್ಯಯನ ಪೀಠದ ವತಿಯಿಂದ ಬುಧವಾರ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪ್ರಸಾರಾಂಗವು ಹೊರತಂದ ಡಾ.ಬಿ.ಆರ್.ಆಂಬೇಡ್ಕರ್ ಕುರಿತ 11 ಪುಸ್ತಕಗಳ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.</p>.<p>ಸಂವಿಧಾನದ ಪೂರ್ವಪೀಠಿಕೆಯಲ್ಲಿನ ಮೌಲ್ಯಗಳು ಪ್ರಾಯೋಗಿಕವಾಗಿ ಜಾರಿಯಾಗುತ್ತಿಲ್ಲ, ಸಮಾಜಮುಖಿ ವೃತ್ತಿಗಳನ್ನು ಕೀಳಾಗಿ ಕಾಣುವ ಮನೋಭಾವ ಹೆಚ್ಚಾಗುತ್ತಿದೆ. ತಳ ಸಮುದಾಯಗಳ ಮೇಲೆ ದೌರ್ಜನ್ಯ ಮತ್ತು ಹಲ್ಲೆಗಳ ಪ್ರಮಾಣ ಇತ್ತೀಚೆಗೆ ಹೆಚ್ಚುತ್ತಿದೆ. ಇದೆಲ್ಲದರ ಬಗ್ಗೆ ನಾವು ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದರು.</p>.<p>ಹಿರಿಯ ವಿದ್ವಾಂಸ ಜಾಣಗೆರೆ ವೆಂಕಟರಾಮಯ್ಯ ಅವರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ಮಹಾನ್ ವ್ಯಕ್ತಿಗಳ ತತ್ವಗಳನ್ನು ಸಮಗ್ರವಾಗಿ ಅರ್ಥ ಮಾಡಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ ಎಂದರು.</p>.<p>‘ಇಂದು ರಾಜಕೀಯದಲ್ಲಿ ಜಾತಿ ಮತ್ತು ಧರ್ಮವನ್ನು ಆಧಾರವಾಗಿಟ್ಟುಕೊಂಡು ಅಧಿಕಾರವನ್ನು ಹಿಡಿಯುವ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿ. ದೇಶದ ಮಹಿಳೆಯರಿಗೆ ಸಮಾನತೆ ದೊರೆಯಬೇಕು ಮತ್ತು ಅವರು ರಾಜಕೀಯವಾಗಿ ಮುನ್ನೆಲೆಗೆ ಬರಬೇಕು ಎಂಬ ಅಂಬೇಡ್ಕರ್ ಅವರ ಕನಸು ಇಂದಿಗೂ ನನಸಾಗಿಲ್ಲ’ ಎಂದು ವಿಷಾದಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ಡಾ.ಅಂಬೇಡ್ಕರ್ ಅವರ ಕುರಿತು 11 ಕೃತಿಗಳನ್ನು ಪ್ರಸಾರಾಂಗದಿಂದ ಪ್ರಕಟಿಸುವ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಪ್ರತಿದಿನವೂ ಇಂತಹ ಮಹಾನ್ ವ್ಯಕ್ತಿಗಳನ್ನು ಸ್ಮರಿಸಿಕೊಳ್ಳಬೇಕು ಮತ್ತು ಅವರ ಚಿಂತನೆಗಳನ್ನು ಆಳವಾಗಿ ಅರ್ಥಮಾಡಿಕೊಳ್ಳಬೇಕು ಎಂದರು.</p>.<p>ದಲಿತ ಸಂಸ್ಕೃತಿ ಅಧ್ಯಯನ ಪೀಠದ ಸಂಚಾಲಕ ಪ್ರೊ.ಎನ್. ಚಿನ್ನಸ್ವಾಮಿ ಸೋಸಲೆ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಾನ್ ವ್ಯಕ್ತಿಗಳನ್ನು ಜಾತಿಗೆ ಸೀಮಿತವಾಗಿ ನೋಡುವ ಮನೋಭಾವವನ್ನು ತೊರೆಯಬೇಕು. ಜಾತಿ ಎಂಬ ಅಜ್ಞಾನವು ಸಮಾಜದಲ್ಲಿ ಅಂತರವನ್ನು ಉಂಟುಮಾಡುತ್ತದೆ ಎಂದರು.</p>.<p>ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ, ಪ್ರಸಾರಾಂಗದ ನಿರ್ದೇಶಕ ಪ್ರೊ.ಪಿ.ಮಹಾದೇವಯ್ಯ, ಸಿಂಡಿಕೇಟ್ ಸದಸ್ಯ ಬಣ್ಣದಮನೆ ಸೋಮಶೇಖರ್ ಇದ್ವರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-733007640</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>