<p>ಹೊಸಪೇಟೆ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುತ್ತಿದೆ. ಇದೀಗ ಪಿ.ಎಂ.ಶ್ರೀ ಶಾಲೆಗಳಿಗೆ ಕೂಡ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಎಐಡಿಎಸ್ಒ ಆರೋಪಿಸಿದೆ.</p>.<p>ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು, ಪಿ.ಎಂ. ಶ್ರೀ ಯೋಜನೆಯ ಹೆಸರಿನಲ್ಲಿ ರಾಜ್ಯದಾದ್ಯಂತ 317 ಶಾಲೆಗಳನ್ನು ವಿಲೀನಗೊಳಿಸಲು ಆದೇಶ ಹೊರಡಿಸಿದೆ. ಪಿಯು ಕಾಲೇಜುಗಳನ್ನು ಕೂಡ ವಿಲೀನಗೊಳಿಸಲಾಗುತ್ತಿದೆ, ಇದನ್ನು ಸಹಿಸಲಾಗದು ಎಂದು ಹೇಳಿದ್ದಾರೆ.</p>.<p>ರಾಜ್ಯ ಸರ್ಕಾರವು ತನ್ನ ಹಠಮಾರಿ ಧೋರಣೆಯನ್ನು ಕೈಬಿಡಬೇಕು. ಸರ್ಕಾರದ ಈ ಬೂಟಾಟಿಕೆಯನ್ನು ಅರಿತು ‘ನಮ್ಮೂರ ಶಾಲೆ’ ಉಳಿಸುವ ಪ್ರತಿರೋಧ ಚಳವಳಿಯನ್ನು ಜನರು ಇನ್ನಷ್ಟು ಬಲಪಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-25-467650753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುತ್ತಿದೆ. ಇದೀಗ ಪಿ.ಎಂ.ಶ್ರೀ ಶಾಲೆಗಳಿಗೆ ಕೂಡ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಎಐಡಿಎಸ್ಒ ಆರೋಪಿಸಿದೆ.</p>.<p>ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು, ಪಿ.ಎಂ. ಶ್ರೀ ಯೋಜನೆಯ ಹೆಸರಿನಲ್ಲಿ ರಾಜ್ಯದಾದ್ಯಂತ 317 ಶಾಲೆಗಳನ್ನು ವಿಲೀನಗೊಳಿಸಲು ಆದೇಶ ಹೊರಡಿಸಿದೆ. ಪಿಯು ಕಾಲೇಜುಗಳನ್ನು ಕೂಡ ವಿಲೀನಗೊಳಿಸಲಾಗುತ್ತಿದೆ, ಇದನ್ನು ಸಹಿಸಲಾಗದು ಎಂದು ಹೇಳಿದ್ದಾರೆ.</p>.<p>ರಾಜ್ಯ ಸರ್ಕಾರವು ತನ್ನ ಹಠಮಾರಿ ಧೋರಣೆಯನ್ನು ಕೈಬಿಡಬೇಕು. ಸರ್ಕಾರದ ಈ ಬೂಟಾಟಿಕೆಯನ್ನು ಅರಿತು ‘ನಮ್ಮೂರ ಶಾಲೆ’ ಉಳಿಸುವ ಪ್ರತಿರೋಧ ಚಳವಳಿಯನ್ನು ಜನರು ಇನ್ನಷ್ಟು ಬಲಪಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-25-467650753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>