<p>ಹುಬ್ಬಳ್ಳಿ: ರಾಜ್ಯದ ಯಾವುದೇ ಜಾತಿ– ಜನಾಂಗದ ಅನಾಥ ಮತ್ತು ಕಡುಬಡವ ಬಾಲಕರ ವಿದ್ಯಾರ್ಜನೆಗಾಗಿ ಬೆಂಗಳೂರಿನ ಆರ್ಯ ಸೇವಾಶ್ರಮ ಟ್ರಸ್ಟ್ ನಡೆಸುವ ವಿದ್ಯಾರ್ಥಿನಿಲಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ವಸತಿ, ಊಟ ಮತ್ತು ಬಟ್ಟೆ ಸೇರಿ ವಿವಿಧ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. ವಿದ್ಯಾರ್ಜನೆಗೆ ಪೂರಕವಾಗಿ ವಿವಿಧ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬಾಲಕರನ್ನು ಸೇರಿಸಲಾಗುತ್ತದೆ. 7 ರಿಂದ 15 ವರ್ಷದೊಳಗಿನ, ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅನಾಥ ಮತ್ತು ಕಡುಬಡುವ ವಿದ್ಯಾರ್ಥಿಗಳ ಪಾಲಕರು, ಪೋಷಕರು ಮೇ 20ರ ಒಳಗೆ ಅರ್ಜಿ ಸಲ್ಲಿಸಬೇಕು.</p>.<p>ವಿದ್ಯಾರ್ಥಿ ನಿಲಯವು ಬೆಂಗಳೂರಿನ ರಾಜಾಜಿನಗರದ 1ನೆಯ ‘ಎನ್’ ಬ್ಲಾಕ್ದಲ್ಲಿದೆ. ಬಾಲಕರ ಆಯ್ಕೆ ಪ್ರಕ್ರಿಯೆಯನ್ನು ಬಾಲ ನ್ಯಾಯ ಕಾಯ್ದೆ-2016ರ ನಿಯಮದ ಪ್ರಕಾರ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನಡೆಯಲಿದೆ. ಮಾಹಿತಿಗೆ ಮೊಬೈಲ್ ಸಂಖ್ಯೆ 74116 96057, 98445 16664 ಸಂಪರ್ಕಿಸಬಹುದು ಎಂದು ಆರ್ಯ ಸೇವಾಶ್ರಮ ಟ್ರಸ್ಟ್ ಕಾರ್ಯದರ್ಶಿ ಚಂದ್ರಶೇಖರ ಬಾಬು ಮತ್ತು ವ್ಯವಸ್ಥಾಪಕ ಉದಯಕುಮಾರ ಕೊಳ್ಳಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-24-969702385</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ರಾಜ್ಯದ ಯಾವುದೇ ಜಾತಿ– ಜನಾಂಗದ ಅನಾಥ ಮತ್ತು ಕಡುಬಡವ ಬಾಲಕರ ವಿದ್ಯಾರ್ಜನೆಗಾಗಿ ಬೆಂಗಳೂರಿನ ಆರ್ಯ ಸೇವಾಶ್ರಮ ಟ್ರಸ್ಟ್ ನಡೆಸುವ ವಿದ್ಯಾರ್ಥಿನಿಲಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ವಸತಿ, ಊಟ ಮತ್ತು ಬಟ್ಟೆ ಸೇರಿ ವಿವಿಧ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. ವಿದ್ಯಾರ್ಜನೆಗೆ ಪೂರಕವಾಗಿ ವಿವಿಧ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬಾಲಕರನ್ನು ಸೇರಿಸಲಾಗುತ್ತದೆ. 7 ರಿಂದ 15 ವರ್ಷದೊಳಗಿನ, ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅನಾಥ ಮತ್ತು ಕಡುಬಡುವ ವಿದ್ಯಾರ್ಥಿಗಳ ಪಾಲಕರು, ಪೋಷಕರು ಮೇ 20ರ ಒಳಗೆ ಅರ್ಜಿ ಸಲ್ಲಿಸಬೇಕು.</p>.<p>ವಿದ್ಯಾರ್ಥಿ ನಿಲಯವು ಬೆಂಗಳೂರಿನ ರಾಜಾಜಿನಗರದ 1ನೆಯ ‘ಎನ್’ ಬ್ಲಾಕ್ದಲ್ಲಿದೆ. ಬಾಲಕರ ಆಯ್ಕೆ ಪ್ರಕ್ರಿಯೆಯನ್ನು ಬಾಲ ನ್ಯಾಯ ಕಾಯ್ದೆ-2016ರ ನಿಯಮದ ಪ್ರಕಾರ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನಡೆಯಲಿದೆ. ಮಾಹಿತಿಗೆ ಮೊಬೈಲ್ ಸಂಖ್ಯೆ 74116 96057, 98445 16664 ಸಂಪರ್ಕಿಸಬಹುದು ಎಂದು ಆರ್ಯ ಸೇವಾಶ್ರಮ ಟ್ರಸ್ಟ್ ಕಾರ್ಯದರ್ಶಿ ಚಂದ್ರಶೇಖರ ಬಾಬು ಮತ್ತು ವ್ಯವಸ್ಥಾಪಕ ಉದಯಕುಮಾರ ಕೊಳ್ಳಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-24-969702385</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>