<p>ಹುಬ್ಬಳ್ಳಿ: ನಗರದ ಭಾವಸಾರ ವ್ಹಿಜನ್ ಇಂಡಿಯಾ ಸಂಸ್ಥೆ ವತಿಯಿಂದ ಹಳೇ ಹುಬ್ಬಳ್ಳಿಯ ಬೆಳಮಕರ ಗಲ್ಲಿಯಲ್ಲಿನ ವಿಠಲ ಹರಿ ಮಂದಿರದಲ್ಲಿ ಈಚೆಗೆ ನಡೆದ ಬಾಲಸಂಸ್ಕಾರ ಶಿಬಿರದಲ್ಲಿ 75 ಮಕ್ಕಳು ಭಾಗವಹಿಸಿ, ಶಿಬಿರದ ಪ್ರಯೋಜನ ಪಡೆದರು.</p>.<p>ಶಿಬಿರದಲ್ಲಿ ವೇದ ಗಣಿತದ ಸೂತ್ರ, ಭಗವದ್ಗೀತೆಯ ಶ್ಲೋಕ ಪಠಣ, ಚಿತ್ರಕಲೆ, ಕರಕುಶಲ ತರಬೇತಿ, ವ್ಯಕ್ತಿತ್ವ ವಿಕಸನ, ನೀತಿ ಕಥೆ, ಸಂಸ್ಕಾರ, ಯೋಗದ ಮಹತ್ವ ಈ ಎಲ್ಲಾ ವಿಷಯಗಳ ಕುರಿತು ವಿಷಯ ತಜ್ಞರು ಮಕ್ಕಳಿಗೆ ತಿಳಿಸಿಕೊಟ್ಟರು.</p>.<p>ಇದೇ ವೇಳೆ ಮಕ್ಕಳಿಗೆ ಆರೋಗ್ಯ ರಕ್ಷಣೆ ಹಾಗೂ ಜಂಕ್ ಫುಡ್ಗಳಿಂದ ದೂರವಿದ್ದು, ಪೌಷ್ಟಿಕಾಂಶ ಆಹಾರದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಯಿತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು.</p>.<p>ಶಿಬಿರದಲ್ಲಿ ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೆ ಪ್ರಶಂಸಾ ಪತ್ರ ಹಾಗೂ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು.</p>.<p>ಸಮಾರೋಪ ಕಾರ್ಯಕ್ರಮದಲ್ಲಿ ಭಾಗಹಿಸಿದ್ದ ಭಾವಸಾರ ವ್ಹಿಜನ್ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ಖಜಾಂಚಿ ಪ್ರಕಾಶ್ ತಿರುಮಲ್ಲೆ ಅವರು, ಮಕ್ಕಳಿಗೆ ಶಿಕ್ಷಣ ಹಾಗೂ ಸಂಸ್ಕಾರ ಕುರಿತು ತಿಳಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ದಯಾನಂದ ಅಂಬರಕರ, ಕಾರ್ಯದರ್ಶಿ ಅನಂತ ಸರ್ವದೆ, ಮಕ್ಕಳ ಕಲ್ಯಾಣ ನಿರ್ದೇಶಕಿ ಅನಿತಾ ಮುಸಳೆ, ಮಹಿಳಾ ಕಲ್ಯಾಣ ನಿರ್ದೇಶಕಿ ಲಕ್ಷ್ಮಿತಾಯಿ ವಿ.ತೇಲ್ಕರ, ವಿಜಯ ಕುಮಾರ್ ಲಾಂಡೆ, ಸಾಯಿನಾಥ ಅಂಬೇಕರ್ ಹಾಗೂ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-24-476489064</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ನಗರದ ಭಾವಸಾರ ವ್ಹಿಜನ್ ಇಂಡಿಯಾ ಸಂಸ್ಥೆ ವತಿಯಿಂದ ಹಳೇ ಹುಬ್ಬಳ್ಳಿಯ ಬೆಳಮಕರ ಗಲ್ಲಿಯಲ್ಲಿನ ವಿಠಲ ಹರಿ ಮಂದಿರದಲ್ಲಿ ಈಚೆಗೆ ನಡೆದ ಬಾಲಸಂಸ್ಕಾರ ಶಿಬಿರದಲ್ಲಿ 75 ಮಕ್ಕಳು ಭಾಗವಹಿಸಿ, ಶಿಬಿರದ ಪ್ರಯೋಜನ ಪಡೆದರು.</p>.<p>ಶಿಬಿರದಲ್ಲಿ ವೇದ ಗಣಿತದ ಸೂತ್ರ, ಭಗವದ್ಗೀತೆಯ ಶ್ಲೋಕ ಪಠಣ, ಚಿತ್ರಕಲೆ, ಕರಕುಶಲ ತರಬೇತಿ, ವ್ಯಕ್ತಿತ್ವ ವಿಕಸನ, ನೀತಿ ಕಥೆ, ಸಂಸ್ಕಾರ, ಯೋಗದ ಮಹತ್ವ ಈ ಎಲ್ಲಾ ವಿಷಯಗಳ ಕುರಿತು ವಿಷಯ ತಜ್ಞರು ಮಕ್ಕಳಿಗೆ ತಿಳಿಸಿಕೊಟ್ಟರು.</p>.<p>ಇದೇ ವೇಳೆ ಮಕ್ಕಳಿಗೆ ಆರೋಗ್ಯ ರಕ್ಷಣೆ ಹಾಗೂ ಜಂಕ್ ಫುಡ್ಗಳಿಂದ ದೂರವಿದ್ದು, ಪೌಷ್ಟಿಕಾಂಶ ಆಹಾರದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಯಿತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು.</p>.<p>ಶಿಬಿರದಲ್ಲಿ ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೆ ಪ್ರಶಂಸಾ ಪತ್ರ ಹಾಗೂ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು.</p>.<p>ಸಮಾರೋಪ ಕಾರ್ಯಕ್ರಮದಲ್ಲಿ ಭಾಗಹಿಸಿದ್ದ ಭಾವಸಾರ ವ್ಹಿಜನ್ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ಖಜಾಂಚಿ ಪ್ರಕಾಶ್ ತಿರುಮಲ್ಲೆ ಅವರು, ಮಕ್ಕಳಿಗೆ ಶಿಕ್ಷಣ ಹಾಗೂ ಸಂಸ್ಕಾರ ಕುರಿತು ತಿಳಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ದಯಾನಂದ ಅಂಬರಕರ, ಕಾರ್ಯದರ್ಶಿ ಅನಂತ ಸರ್ವದೆ, ಮಕ್ಕಳ ಕಲ್ಯಾಣ ನಿರ್ದೇಶಕಿ ಅನಿತಾ ಮುಸಳೆ, ಮಹಿಳಾ ಕಲ್ಯಾಣ ನಿರ್ದೇಶಕಿ ಲಕ್ಷ್ಮಿತಾಯಿ ವಿ.ತೇಲ್ಕರ, ವಿಜಯ ಕುಮಾರ್ ಲಾಂಡೆ, ಸಾಯಿನಾಥ ಅಂಬೇಕರ್ ಹಾಗೂ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-24-476489064</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>