<p>ಹುಬ್ಬಳ್ಳಿ: ‘ನ್ಯಾಯಾಧೀಶರು, ವಕೀಲರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ನಿರಂತರ ಕಲಿಕೆ ಅತಿಮುಖ್ಯ’ ಎಂದು ಕೌಟುಂಬಿಕ ನ್ಯಾಯಾಲಯದ ಹೆಚ್ಚುವರಿ ಪ್ರಧಾನ ನ್ಯಾಯಾಧೀಶ ರವೀಂದ್ರ ಅರಿ ಹೇಳಿದರು.</p>.<p>ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ‘ಆಧುನಿಕ ಕಾನೂನು ಕ್ಷೇತ್ರದಲ್ಲಿ ಮಧ್ಯಸ್ಥಿಕೆ; ಪರ್ಯಾಯದಿಂದ ಪ್ರಾಥ ಮಿಕ ನಿರ್ಣಯ’ ಕುರಿತ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ಮಧ್ಯಸ್ಥಿಕೆಯು ಮಹಾಭಾರತ ಕಾಲದಲ್ಲಿಯೂ ಇತ್ತು. ಶ್ರೀಕೃಷ್ಣ ಸಂಧಾನದಿಂದ ಆರಂಭವಾಗಿ ರಾಜರ ಕಾಲದಲ್ಲೂ ಮುಂದುವರಿಯಿತು. ನಂತರ, ಪಂಚಾಯಿತಿ ಕಟ್ಟೆಗಳು ಸಂಧಾನ ಪ್ರಕ್ರಿಯೆಯ ತಾಣಗಳಾದವು. ಆಧುನಿಕ ಕಾಲದಲ್ಲಿ ನ್ಯಾಯಾಲಯದಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ. ಮಧ್ಯಸ್ಥಿಕೆಗಾರ ಕಕ್ಷಿಗಾರರ ಮನಃಸ್ಥಿತಿ ಅರಿತುಕೊಳ್ಳಬೇಕು. ಕಾನೂನನ್ನು ಗೌರವಿಸಬೇಕಾದ್ದು ಎಲ್ಲರ ಕರ್ತವ್ಯ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ರೂಪಾ ಇಂಗಳಹಳ್ಳಿ ಮಾತನಾಡಿ, ‘ಸಂಧಾನ ಪ್ರಕ್ರಿಯೆಯಲ್ಲಿ ಪರಿಣಿತ ಮಧ್ಯಸ್ಥಿಕೆಗಾರರ ಕೊರತೆ ಇದೆ’ ಎಂದರು.</p>.<p>ನಂತರ, ಸಂವಾದ ಮತ್ತು ಪ್ರಶ್ನೋತ್ತರ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಯೋಜಕಿ ಪೂರ್ಣಿಮಾ ಕುರಡಿಕೇರಿ, ಸುರೇಶ ಲಿಂಬಿಕಾಯಿ, ಬಾಬುಲಾಲ್ ದರಗದ, ದೀಪಾ ಪಾಟೀಲ, ಸತೀಶ್ ಸಿ.ವಿ., ಸುರೇಶ ಲಮಾಣಿ, ಪರಸಪ್ಪ ಮಾಂಗ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-24-1159851578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ನ್ಯಾಯಾಧೀಶರು, ವಕೀಲರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ನಿರಂತರ ಕಲಿಕೆ ಅತಿಮುಖ್ಯ’ ಎಂದು ಕೌಟುಂಬಿಕ ನ್ಯಾಯಾಲಯದ ಹೆಚ್ಚುವರಿ ಪ್ರಧಾನ ನ್ಯಾಯಾಧೀಶ ರವೀಂದ್ರ ಅರಿ ಹೇಳಿದರು.</p>.<p>ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ‘ಆಧುನಿಕ ಕಾನೂನು ಕ್ಷೇತ್ರದಲ್ಲಿ ಮಧ್ಯಸ್ಥಿಕೆ; ಪರ್ಯಾಯದಿಂದ ಪ್ರಾಥ ಮಿಕ ನಿರ್ಣಯ’ ಕುರಿತ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ಮಧ್ಯಸ್ಥಿಕೆಯು ಮಹಾಭಾರತ ಕಾಲದಲ್ಲಿಯೂ ಇತ್ತು. ಶ್ರೀಕೃಷ್ಣ ಸಂಧಾನದಿಂದ ಆರಂಭವಾಗಿ ರಾಜರ ಕಾಲದಲ್ಲೂ ಮುಂದುವರಿಯಿತು. ನಂತರ, ಪಂಚಾಯಿತಿ ಕಟ್ಟೆಗಳು ಸಂಧಾನ ಪ್ರಕ್ರಿಯೆಯ ತಾಣಗಳಾದವು. ಆಧುನಿಕ ಕಾಲದಲ್ಲಿ ನ್ಯಾಯಾಲಯದಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ. ಮಧ್ಯಸ್ಥಿಕೆಗಾರ ಕಕ್ಷಿಗಾರರ ಮನಃಸ್ಥಿತಿ ಅರಿತುಕೊಳ್ಳಬೇಕು. ಕಾನೂನನ್ನು ಗೌರವಿಸಬೇಕಾದ್ದು ಎಲ್ಲರ ಕರ್ತವ್ಯ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ರೂಪಾ ಇಂಗಳಹಳ್ಳಿ ಮಾತನಾಡಿ, ‘ಸಂಧಾನ ಪ್ರಕ್ರಿಯೆಯಲ್ಲಿ ಪರಿಣಿತ ಮಧ್ಯಸ್ಥಿಕೆಗಾರರ ಕೊರತೆ ಇದೆ’ ಎಂದರು.</p>.<p>ನಂತರ, ಸಂವಾದ ಮತ್ತು ಪ್ರಶ್ನೋತ್ತರ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಯೋಜಕಿ ಪೂರ್ಣಿಮಾ ಕುರಡಿಕೇರಿ, ಸುರೇಶ ಲಿಂಬಿಕಾಯಿ, ಬಾಬುಲಾಲ್ ದರಗದ, ದೀಪಾ ಪಾಟೀಲ, ಸತೀಶ್ ಸಿ.ವಿ., ಸುರೇಶ ಲಮಾಣಿ, ಪರಸಪ್ಪ ಮಾಂಗ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-24-1159851578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>