<p>ಹುಬ್ಬಳ್ಳಿ: ‘ಧಾರವಾಡದ ಎಸ್ಡಿಎಂ ಸಿಇಟಿ ಹಾಗೂ ಸ್ಟ್ರಕ್ಚರಲ್ ಎಂಜಿನಿಯರ್ಸ್ ಅಸೋಸಿಯೇಷನ್ ಇಂಡಿಯಾ (ಎಸ್ಇಎ) ವತಿಯಿಂದ ಮೇ 22ರಂದು ಬೆಳಿಗ್ಗೆ 9 ಗಂಟೆಗೆ ‘ಎಸ್ಇಎ ಕಾನ್ ಟೆಕ್ –1’ ತಾಂತ್ರಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ಎಸ್ಇಎ ಅಧ್ಯಕ್ಷ ಸತೀಶ ಅಣ್ಣಿಗೇರಿ ತಿಳಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಡಿಎಂ ಸಿಇಟಿ ಅಲಮ್ನಿ ಬ್ಲಾಕ್ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ. ಸ್ಟ್ರಕ್ಚರಲ್ ಎಂಜಿನಿಯರಿಂಗ್ ಕ್ಷೇತ್ರದ ಹೊಸ ತಂತ್ರಜ್ಞಾನ, ಎತ್ತರದ ಕಟ್ಟಡಗಳ ಸಂರಚನಾ ವ್ಯವಸ್ಥೆ ಕುರಿತು ತಜ್ಞರು ಉಪನ್ಯಾಸ ನೀಡಲಿದ್ದಾರೆ’ ಎಂದರು.</p>.<p>ವೆಂಕಟೇಶಮೂರ್ತಿ ಕೆ.ಎಸ್., ಸಂಜಯ ಅಮೀನಭಾವಿ, ಸುದರ್ಶನ ಅಯ್ಯಂಗಾರ್, ಡಿ.ಕೆ. ಕುಲಕರ್ಣಿ ಹಾಗೂ ಮಮತಾ ಮೊಗಲಿ ಅವರು ವಿವಿಧ ವಿಷಯಗಳ ಕುರಿತು ಮಾಹಿತಿ ಒದಗಿಸಲಿದ್ದಾರೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಅತಿಥಿಯಾಗಿ ಎಸ್ಡಿಎಂ ಶಿಕ್ಷಣ ಸಂಸ್ಥೆ ಗೌರವ ಕಾರ್ಯದರ್ಶಿ ಜೀವಂಧರ್ ಕುಮಾರ್, ಎಸ್ಡಿಎಂ ಸಿಇಟಿ ಪ್ರಾಂಶುಪಾಲ ರಮೇಶ ಚಕ್ರಸಾಲಿ, ನಾಗರಿಕ ಎಂಜನಿಯರಿಂಗ್ ವಿಭಾಗದ ಮುಖ್ಯಸ್ಥ ರೆಜಿನಾಲ್ಡ್ ಫರ್ನಾಂಡೀಸ್, ವಿ.ಬಿ. ಪಾಟೀಲ, ಆಸಿಫ್ ಇಕ್ಬಾಲ್ ದಾನವಾಡ ಭಾಗವಹಿಸುವರು ಎಂದರು.</p>.<p>ಸಮ್ಮೇಳನದ ಆಯೋಜನಾ ಸಮಿತಿ ಅಧ್ಯಕ್ಷ ವಿ.ಬಿ. ಪಾಟೀಲ, ಸಿಇಎ ಇಂಡಿಯಾ ಕಾರ್ಯದರ್ಶಿ ಆಸಿಫ್ ಇಕ್ಬಾಲ್ ದಾನವಾಡ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-24-2021841629</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಧಾರವಾಡದ ಎಸ್ಡಿಎಂ ಸಿಇಟಿ ಹಾಗೂ ಸ್ಟ್ರಕ್ಚರಲ್ ಎಂಜಿನಿಯರ್ಸ್ ಅಸೋಸಿಯೇಷನ್ ಇಂಡಿಯಾ (ಎಸ್ಇಎ) ವತಿಯಿಂದ ಮೇ 22ರಂದು ಬೆಳಿಗ್ಗೆ 9 ಗಂಟೆಗೆ ‘ಎಸ್ಇಎ ಕಾನ್ ಟೆಕ್ –1’ ತಾಂತ್ರಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ಎಸ್ಇಎ ಅಧ್ಯಕ್ಷ ಸತೀಶ ಅಣ್ಣಿಗೇರಿ ತಿಳಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಡಿಎಂ ಸಿಇಟಿ ಅಲಮ್ನಿ ಬ್ಲಾಕ್ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ. ಸ್ಟ್ರಕ್ಚರಲ್ ಎಂಜಿನಿಯರಿಂಗ್ ಕ್ಷೇತ್ರದ ಹೊಸ ತಂತ್ರಜ್ಞಾನ, ಎತ್ತರದ ಕಟ್ಟಡಗಳ ಸಂರಚನಾ ವ್ಯವಸ್ಥೆ ಕುರಿತು ತಜ್ಞರು ಉಪನ್ಯಾಸ ನೀಡಲಿದ್ದಾರೆ’ ಎಂದರು.</p>.<p>ವೆಂಕಟೇಶಮೂರ್ತಿ ಕೆ.ಎಸ್., ಸಂಜಯ ಅಮೀನಭಾವಿ, ಸುದರ್ಶನ ಅಯ್ಯಂಗಾರ್, ಡಿ.ಕೆ. ಕುಲಕರ್ಣಿ ಹಾಗೂ ಮಮತಾ ಮೊಗಲಿ ಅವರು ವಿವಿಧ ವಿಷಯಗಳ ಕುರಿತು ಮಾಹಿತಿ ಒದಗಿಸಲಿದ್ದಾರೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಅತಿಥಿಯಾಗಿ ಎಸ್ಡಿಎಂ ಶಿಕ್ಷಣ ಸಂಸ್ಥೆ ಗೌರವ ಕಾರ್ಯದರ್ಶಿ ಜೀವಂಧರ್ ಕುಮಾರ್, ಎಸ್ಡಿಎಂ ಸಿಇಟಿ ಪ್ರಾಂಶುಪಾಲ ರಮೇಶ ಚಕ್ರಸಾಲಿ, ನಾಗರಿಕ ಎಂಜನಿಯರಿಂಗ್ ವಿಭಾಗದ ಮುಖ್ಯಸ್ಥ ರೆಜಿನಾಲ್ಡ್ ಫರ್ನಾಂಡೀಸ್, ವಿ.ಬಿ. ಪಾಟೀಲ, ಆಸಿಫ್ ಇಕ್ಬಾಲ್ ದಾನವಾಡ ಭಾಗವಹಿಸುವರು ಎಂದರು.</p>.<p>ಸಮ್ಮೇಳನದ ಆಯೋಜನಾ ಸಮಿತಿ ಅಧ್ಯಕ್ಷ ವಿ.ಬಿ. ಪಾಟೀಲ, ಸಿಇಎ ಇಂಡಿಯಾ ಕಾರ್ಯದರ್ಶಿ ಆಸಿಫ್ ಇಕ್ಬಾಲ್ ದಾನವಾಡ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-24-2021841629</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>