<p>ಹುಬ್ಬಳ್ಳಿ: ‘ಪದವಿ, ಉದ್ಯೋಗ ಪಡೆಯಲು ಮಾತ್ರವಲ್ಲದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ಶಿಕ್ಷಣ ಅವಶ್ಯ’ ಎಂದು ಮಂಗಳೂರಿನ ಶಾಂತಿ ಪ್ರಕಾಶನ ಅಧ್ಯಕ್ಷ ಮಹಮ್ಮದ ಕುಂಞಿ ಹೇಳಿದರು.</p>.<p>ಇಲ್ಲಿನ ಸನಾ ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಏಕತೆ, ಸಹೋದರತ್ವ, ಪರಸ್ಪರ ಗೌರವ ಮತ್ತು ಮಾನವೀಯ ಮೌಲ್ಯಗಳು ಮುಖ್ಯ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷ ಹರಡುವುದನ್ನು ನಿಲ್ಲಿಸಿ, ಪ್ರೀತಿ, ಸೌಹಾರ್ದ ಮತ್ತು ಸಹಬಾಳ್ವೆ ಬೆಳೆಸಬೇಕು’ ಎಂದರು.</p>.<p>ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ನ ರಿಜಿಸ್ಟ್ರಾರ್ ಶ್ರೀಕಾಂತ ಫುಲಾರೆ ಮಾತನಾಡಿ, ‘ಶಿಕ್ಷಣವು ಕುಟುಂಬ, ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಬಳಕೆಯಾಗಬೇಕು. ಯುವಜನತೆ ಮೌಲ್ಯ, ಮಾನವೀಯತೆ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಮಡಿವಾಳಪ್ಪ ನಾಗರಹಳ್ಳಿ ಅವರು, ‘ಸಂಕಷ್ಟ ಮತ್ತು ಟೀಕೆಗಳು ಜೀವನದ ಭಾಗವಾಗಿದ್ದು, ಪರಿಶ್ರಮ, ತಾಳ್ಮೆ ಮತ್ತು ಧೈರ್ಯದಿಂದ ಮುಂದುವರಿದರೆ ಯಶಸ್ಸು ಸಾಧ್ಯ’ ಎಂದು ಹೇಳಿದರು.</p>.<p>ಸನಾ ಎಜುಕೇಷನಲ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಹಮ್ಮದ ಹುಸೇನ ಮಳಗಿ, ಮ್ಯಾನೆಜಿಂಗ್ ಟ್ರಸ್ಟಿ ಅಶ್ರಫ್ ಅಲಿ ಬಶೀರ ಅಹಮ್ಮದ್, ಅಯೂಬ್ ಖಾನ್ ಸವಣೂರ, ತಾರಿಖ್ ಮುಜಾಹೀದ್, ಸರ್ಫರಾಜ್ ಅತ್ತಾರ, ಅಬ್ದುಲ ರಹಮಾನ ಮುಲ್ಲಾ, ಮಹೇಶ ಗದಗ, ಅಬ್ದುಲ್ ರಜಾಕ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-24-1011838243</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಪದವಿ, ಉದ್ಯೋಗ ಪಡೆಯಲು ಮಾತ್ರವಲ್ಲದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ಶಿಕ್ಷಣ ಅವಶ್ಯ’ ಎಂದು ಮಂಗಳೂರಿನ ಶಾಂತಿ ಪ್ರಕಾಶನ ಅಧ್ಯಕ್ಷ ಮಹಮ್ಮದ ಕುಂಞಿ ಹೇಳಿದರು.</p>.<p>ಇಲ್ಲಿನ ಸನಾ ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಏಕತೆ, ಸಹೋದರತ್ವ, ಪರಸ್ಪರ ಗೌರವ ಮತ್ತು ಮಾನವೀಯ ಮೌಲ್ಯಗಳು ಮುಖ್ಯ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷ ಹರಡುವುದನ್ನು ನಿಲ್ಲಿಸಿ, ಪ್ರೀತಿ, ಸೌಹಾರ್ದ ಮತ್ತು ಸಹಬಾಳ್ವೆ ಬೆಳೆಸಬೇಕು’ ಎಂದರು.</p>.<p>ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ನ ರಿಜಿಸ್ಟ್ರಾರ್ ಶ್ರೀಕಾಂತ ಫುಲಾರೆ ಮಾತನಾಡಿ, ‘ಶಿಕ್ಷಣವು ಕುಟುಂಬ, ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಬಳಕೆಯಾಗಬೇಕು. ಯುವಜನತೆ ಮೌಲ್ಯ, ಮಾನವೀಯತೆ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಮಡಿವಾಳಪ್ಪ ನಾಗರಹಳ್ಳಿ ಅವರು, ‘ಸಂಕಷ್ಟ ಮತ್ತು ಟೀಕೆಗಳು ಜೀವನದ ಭಾಗವಾಗಿದ್ದು, ಪರಿಶ್ರಮ, ತಾಳ್ಮೆ ಮತ್ತು ಧೈರ್ಯದಿಂದ ಮುಂದುವರಿದರೆ ಯಶಸ್ಸು ಸಾಧ್ಯ’ ಎಂದು ಹೇಳಿದರು.</p>.<p>ಸನಾ ಎಜುಕೇಷನಲ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಹಮ್ಮದ ಹುಸೇನ ಮಳಗಿ, ಮ್ಯಾನೆಜಿಂಗ್ ಟ್ರಸ್ಟಿ ಅಶ್ರಫ್ ಅಲಿ ಬಶೀರ ಅಹಮ್ಮದ್, ಅಯೂಬ್ ಖಾನ್ ಸವಣೂರ, ತಾರಿಖ್ ಮುಜಾಹೀದ್, ಸರ್ಫರಾಜ್ ಅತ್ತಾರ, ಅಬ್ದುಲ ರಹಮಾನ ಮುಲ್ಲಾ, ಮಹೇಶ ಗದಗ, ಅಬ್ದುಲ್ ರಜಾಕ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-24-1011838243</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>