<p>ಹುಬ್ಬಳ್ಳಿ: ‘ವೃದ್ಧಾಪ್ಯದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ ಮತ್ತು ಕ್ರಿಯಾಶೀಲತೆಯ ಜೀವನಶೈಲಿ ಅತ್ಯಗತ್ಯ’ ಎಂದು ಬಾಲಾಜಿ ಆಸ್ಪತ್ರೆಯ ಚೇರ್ಮೆನ್, ನರರೋಗ ತಜ್ಞ ಡಾ.ಕ್ರಾಂತಿಕಿರಣ ಹೇಳಿದರು.</p>.<p>ವಿದ್ಯಾನಗರದ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ವಾರದ ಅತಿಥಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ವೃದ್ಧಾಪ್ಯದಲ್ಲಿ ಕಾಡುವ ಸಾಮಾನ್ಯ ಆರೋಗ್ಯ ಸಮಸ್ಯೆಗಳು’ ಕುರಿತು ಅವರು ಮಾತನಾಡಿದರು.</p>.<p>‘ವೃದ್ಧಾಪ್ಯದಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಕ್ರಮೇಣ ಇಳಿಕೆಯಾಗಲಿದ್ದು, ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಸಾಮಾನ್ಯವಾಗಿ ಅನಾರೋಗ್ಯಕ್ಕೆ ಒಳಗಾಗುತ್ತೇವೆ. ಆದ್ದರಿಂದ ವೃದ್ಧಾಪ್ಯದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರಿಯಾಶೀಲ ಜೀವನಶೈಲಿ ರೂಢಿಸಿಕೊಳ್ಳುವುದು ಅತ್ಯಗತ್ಯವಾಗಿದೆ’ ಎಂದರು.</p>.<p>‘ಇತ್ತೀಚಿನ ದಿನಗಳಲ್ಲಿ 60 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಶೇ 15 ರಷ್ಟು ಜನರು ಕನಿಷ್ಠ ಒಂದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ವೃದ್ದಾಪ್ಯದಲ್ಲಿ ಒಂಟಿತನದಿಂದ ಕಾಡುವ ಖಿನ್ನತೆ ಮತ್ತು ಆತಂಕ ನಿವಾರಿಸಲು ಸಮಾಜಮುಖಿ ಕಾರ್ಯಗಳತ್ತ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಸಂಘದ ಅಧ್ಯಕ್ಷ ಎಂ.ಕೆ.ನಾಯ್ಕರ್, ಉಪಾಧ್ಯಕ್ಷ ಪ್ರೊ.ಕೆ.ಎಸ್.ಕೌಜಲಗಿ, ಕಾರ್ಯದರ್ಶಿ ಎಸ್.ಟಿ.ಭೈರಪ್ಪನವರ, ಖಜಾಂಚಿ ಸುಭಾಶ್ಚಂದ್ರ ಛತ್ರದ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-24-1113980842</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ವೃದ್ಧಾಪ್ಯದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ ಮತ್ತು ಕ್ರಿಯಾಶೀಲತೆಯ ಜೀವನಶೈಲಿ ಅತ್ಯಗತ್ಯ’ ಎಂದು ಬಾಲಾಜಿ ಆಸ್ಪತ್ರೆಯ ಚೇರ್ಮೆನ್, ನರರೋಗ ತಜ್ಞ ಡಾ.ಕ್ರಾಂತಿಕಿರಣ ಹೇಳಿದರು.</p>.<p>ವಿದ್ಯಾನಗರದ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ವಾರದ ಅತಿಥಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ವೃದ್ಧಾಪ್ಯದಲ್ಲಿ ಕಾಡುವ ಸಾಮಾನ್ಯ ಆರೋಗ್ಯ ಸಮಸ್ಯೆಗಳು’ ಕುರಿತು ಅವರು ಮಾತನಾಡಿದರು.</p>.<p>‘ವೃದ್ಧಾಪ್ಯದಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಕ್ರಮೇಣ ಇಳಿಕೆಯಾಗಲಿದ್ದು, ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಸಾಮಾನ್ಯವಾಗಿ ಅನಾರೋಗ್ಯಕ್ಕೆ ಒಳಗಾಗುತ್ತೇವೆ. ಆದ್ದರಿಂದ ವೃದ್ಧಾಪ್ಯದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರಿಯಾಶೀಲ ಜೀವನಶೈಲಿ ರೂಢಿಸಿಕೊಳ್ಳುವುದು ಅತ್ಯಗತ್ಯವಾಗಿದೆ’ ಎಂದರು.</p>.<p>‘ಇತ್ತೀಚಿನ ದಿನಗಳಲ್ಲಿ 60 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಶೇ 15 ರಷ್ಟು ಜನರು ಕನಿಷ್ಠ ಒಂದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ವೃದ್ದಾಪ್ಯದಲ್ಲಿ ಒಂಟಿತನದಿಂದ ಕಾಡುವ ಖಿನ್ನತೆ ಮತ್ತು ಆತಂಕ ನಿವಾರಿಸಲು ಸಮಾಜಮುಖಿ ಕಾರ್ಯಗಳತ್ತ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಸಂಘದ ಅಧ್ಯಕ್ಷ ಎಂ.ಕೆ.ನಾಯ್ಕರ್, ಉಪಾಧ್ಯಕ್ಷ ಪ್ರೊ.ಕೆ.ಎಸ್.ಕೌಜಲಗಿ, ಕಾರ್ಯದರ್ಶಿ ಎಸ್.ಟಿ.ಭೈರಪ್ಪನವರ, ಖಜಾಂಚಿ ಸುಭಾಶ್ಚಂದ್ರ ಛತ್ರದ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-24-1113980842</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>