<p>ಹುಬ್ಬಳ್ಳಿ: ವಿಶ್ವ ತಲೆ ಗಾಯ ಜಾಗೃತಿ ದಿನಾಚರಣೆ ಪ್ರಯುಕ್ತ ನಗರದ ಬಾಲಾಜಿ ಆಸ್ಪತ್ರೆ ಮತ್ತು ಕನಕದಾಸ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏ.2ರಂದು ಬೆಳಿಗ್ಗೆ 9.30ಕ್ಕೆ ಆರೋಗ್ಯ ಅರಿವು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ನರರೋಗ ತಜ್ಞ ಡಾ.ಕ್ರಾಂತಿಕಿರಣ ಅವರು, ಅಪಘಾತ ಮತ್ತು ಮಿದುಳಿನ ಗಾಯಗಳಿಂದ ರಕ್ಷಿಸಿಕೊಳ್ಳುವ ವಿಧಾನ ಮತ್ತು ಮಿದುಳಿನ ಮಹತ್ವದ ಕುರಿತು ಅರಿವು ಮೂಡಿಸುವ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.</p>.<p>ಕನಕದಾಸ ಶಿಕ್ಷಣ ಸಂಸ್ಥೆಯ ಚೇರ್ಮನ್ ರವೀಂದ್ರನಾಥ್ ದಂಡಿನ ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯ ಬಿ.ಜಿ.ಮಡ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.</p>.<p>ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಅಕ್ಷಯಪಾರ್ಕ್ ಬಳಿಯ ಸಂತೆ ಮೈದಾನದಲ್ಲಿ ಏ.10ರಂದು ನವಯುಗ ಸಂಘಟನೆ ವತಿಯಿಂದ 24ನೇ ವರ್ಷದ ಸರ್ವಧರ್ಮ ಸಾಮೂಹಿಕ ವಿವಾಹ ಮತ್ತು ಉಪನಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ವಧು–ವರರಿಗೆ ಸರ್ಕಾರದ ವಿವಾಹ ಆದರ್ಶ ಯೋಜನೆ ಅಡಿಯಲ್ಲಿ ₹10 ಸಾವಿರ. ಸರಳ ವಿವಾಹ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನವಜೋಡಿಗೆ ₹50 ಸಾವಿರ. ಅಂತರಜಾತಿ ವಿವಾಹ ಆಗುವವರಿಗೆ ₹3ಲಕ್ಷವನ್ನು ಸರ್ಕಾರದಿಂದ ಕೊಡಿಸಲಾಗುವುದು. ಮಾಹಿತಿ, ನೋಂದಣಿಗೆ ಮೊಬೈಲ್: 94492 50081 ಸಂಪರ್ಕಿಸಬಹುದು ಎಂದು ನವಯುಗ ಸಂಘಟನೆಯ ಅಧ್ಯಕ್ಷ ಕೃಷ್ಣಾ ಮ.ಗಂಡಗಾಳೆಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-24-1508747576</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ವಿಶ್ವ ತಲೆ ಗಾಯ ಜಾಗೃತಿ ದಿನಾಚರಣೆ ಪ್ರಯುಕ್ತ ನಗರದ ಬಾಲಾಜಿ ಆಸ್ಪತ್ರೆ ಮತ್ತು ಕನಕದಾಸ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏ.2ರಂದು ಬೆಳಿಗ್ಗೆ 9.30ಕ್ಕೆ ಆರೋಗ್ಯ ಅರಿವು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ನರರೋಗ ತಜ್ಞ ಡಾ.ಕ್ರಾಂತಿಕಿರಣ ಅವರು, ಅಪಘಾತ ಮತ್ತು ಮಿದುಳಿನ ಗಾಯಗಳಿಂದ ರಕ್ಷಿಸಿಕೊಳ್ಳುವ ವಿಧಾನ ಮತ್ತು ಮಿದುಳಿನ ಮಹತ್ವದ ಕುರಿತು ಅರಿವು ಮೂಡಿಸುವ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.</p>.<p>ಕನಕದಾಸ ಶಿಕ್ಷಣ ಸಂಸ್ಥೆಯ ಚೇರ್ಮನ್ ರವೀಂದ್ರನಾಥ್ ದಂಡಿನ ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯ ಬಿ.ಜಿ.ಮಡ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.</p>.<p>ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಅಕ್ಷಯಪಾರ್ಕ್ ಬಳಿಯ ಸಂತೆ ಮೈದಾನದಲ್ಲಿ ಏ.10ರಂದು ನವಯುಗ ಸಂಘಟನೆ ವತಿಯಿಂದ 24ನೇ ವರ್ಷದ ಸರ್ವಧರ್ಮ ಸಾಮೂಹಿಕ ವಿವಾಹ ಮತ್ತು ಉಪನಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ವಧು–ವರರಿಗೆ ಸರ್ಕಾರದ ವಿವಾಹ ಆದರ್ಶ ಯೋಜನೆ ಅಡಿಯಲ್ಲಿ ₹10 ಸಾವಿರ. ಸರಳ ವಿವಾಹ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನವಜೋಡಿಗೆ ₹50 ಸಾವಿರ. ಅಂತರಜಾತಿ ವಿವಾಹ ಆಗುವವರಿಗೆ ₹3ಲಕ್ಷವನ್ನು ಸರ್ಕಾರದಿಂದ ಕೊಡಿಸಲಾಗುವುದು. ಮಾಹಿತಿ, ನೋಂದಣಿಗೆ ಮೊಬೈಲ್: 94492 50081 ಸಂಪರ್ಕಿಸಬಹುದು ಎಂದು ನವಯುಗ ಸಂಘಟನೆಯ ಅಧ್ಯಕ್ಷ ಕೃಷ್ಣಾ ಮ.ಗಂಡಗಾಳೆಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-24-1508747576</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>