<p>ಹುಬ್ಬಳ್ಳಿ: ನಗರದ ಕೆಎಲ್ಇ ಐಎಂಎಸ್ಆರ್ ಎಂಬಿಎ ಮಹಾವಿದ್ಯಾಲಯ ಆಯೋಜಿಸಿದ್ದ ಮ್ಯಾಡ್ಸ್ಮೀಟ್–2026 ಸ್ಪರ್ಧೆಯಲ್ಲಿ ಕೆಎಲ್ಇ ಕಾಲೇಜ್ ಆಫ್ ಬಿಸಿನೆಸ್ ಆಡ್ಮಿನಿಸ್ಟ್ರೇಷನ್, ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು.</p>.<p>ಸ್ಟಾರ್ಟ್ಥಾನ್ ಸ್ಪರ್ಧೆಯಲ್ಲಿ ಕೆಎಲ್ಇ ಸಿಬಾಲ್ಕ್ ಕಾಲೇಜು ತಂಡ ಜಯ ಗಳಿಸಿ, ₹15 ಸಾವಿರ ಬಹುಮಾನ ತನ್ನದಾಗಿಸಿಕೊಂಡಿತು. ಇದರೊಂದಿಗೆ ದಿ ಕರ್ಟನ್ ರೈಸರ್, ನೋವಸ್, ರೇಸಿಂಗ್ ಪಾಲಡಿನ್, ಮ್ಯಾಚ್ವಿಜ್ ಸ್ಪರ್ಧೆಗಳೂ ನಡೆದವು. ಒಟ್ಟು 22 ತಂಡಗಳು ಪಾಲ್ಗೊಂಡು ಕೌಶಲ ಪ್ರದರ್ಶಿಸಿದವು.</p>.<p>ಶನಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ನಟಿ ಅನು ಪ್ರಭಾಕರ್ ಅವರು, ‘ವಿದ್ಯಾರ್ಥಿಗಳು ದೊಡ್ಡ ಕನಸು ಕಾಣಬೇಕು. ಅದನ್ನು ನನಸಾಗಿಸಲು ಶ್ರಮಪಡಬೇಕು. ಹಿರಿಯರು ಹಾಗೂ ಶಿಕ್ಷಕರನ್ನು ಗೌರವಿಸಬೇಕು. ಹೆಣ್ಣುಮಕ್ಕಳಿಗೆ ಶಿಕ್ಷಣವೇ ಆಯುಧ’ ಎಂದರು. ಹುಬ್ಬಳ್ಳಿ–ಧಾರವಾಡದಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಎಸ್.ಸಿ. ಮೆಟಗುಡ್ಡ ಮಾತನಾಡಿದರು. ಸಂಸ್ಥೆಯ ನಿರ್ದೇಶಕ ರಾಜೇಂದ್ರಪ್ರಸಾದ ಹನಗಂಡಿ ಸ್ವಾಗತಿಸಿದರು, ಪ್ರೊ. ಅಮಿತ್ ಅಂಗಡಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-24-1761514681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ನಗರದ ಕೆಎಲ್ಇ ಐಎಂಎಸ್ಆರ್ ಎಂಬಿಎ ಮಹಾವಿದ್ಯಾಲಯ ಆಯೋಜಿಸಿದ್ದ ಮ್ಯಾಡ್ಸ್ಮೀಟ್–2026 ಸ್ಪರ್ಧೆಯಲ್ಲಿ ಕೆಎಲ್ಇ ಕಾಲೇಜ್ ಆಫ್ ಬಿಸಿನೆಸ್ ಆಡ್ಮಿನಿಸ್ಟ್ರೇಷನ್, ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು.</p>.<p>ಸ್ಟಾರ್ಟ್ಥಾನ್ ಸ್ಪರ್ಧೆಯಲ್ಲಿ ಕೆಎಲ್ಇ ಸಿಬಾಲ್ಕ್ ಕಾಲೇಜು ತಂಡ ಜಯ ಗಳಿಸಿ, ₹15 ಸಾವಿರ ಬಹುಮಾನ ತನ್ನದಾಗಿಸಿಕೊಂಡಿತು. ಇದರೊಂದಿಗೆ ದಿ ಕರ್ಟನ್ ರೈಸರ್, ನೋವಸ್, ರೇಸಿಂಗ್ ಪಾಲಡಿನ್, ಮ್ಯಾಚ್ವಿಜ್ ಸ್ಪರ್ಧೆಗಳೂ ನಡೆದವು. ಒಟ್ಟು 22 ತಂಡಗಳು ಪಾಲ್ಗೊಂಡು ಕೌಶಲ ಪ್ರದರ್ಶಿಸಿದವು.</p>.<p>ಶನಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ನಟಿ ಅನು ಪ್ರಭಾಕರ್ ಅವರು, ‘ವಿದ್ಯಾರ್ಥಿಗಳು ದೊಡ್ಡ ಕನಸು ಕಾಣಬೇಕು. ಅದನ್ನು ನನಸಾಗಿಸಲು ಶ್ರಮಪಡಬೇಕು. ಹಿರಿಯರು ಹಾಗೂ ಶಿಕ್ಷಕರನ್ನು ಗೌರವಿಸಬೇಕು. ಹೆಣ್ಣುಮಕ್ಕಳಿಗೆ ಶಿಕ್ಷಣವೇ ಆಯುಧ’ ಎಂದರು. ಹುಬ್ಬಳ್ಳಿ–ಧಾರವಾಡದಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಎಸ್.ಸಿ. ಮೆಟಗುಡ್ಡ ಮಾತನಾಡಿದರು. ಸಂಸ್ಥೆಯ ನಿರ್ದೇಶಕ ರಾಜೇಂದ್ರಪ್ರಸಾದ ಹನಗಂಡಿ ಸ್ವಾಗತಿಸಿದರು, ಪ್ರೊ. ಅಮಿತ್ ಅಂಗಡಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-24-1761514681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>