<p>ಹುಬ್ಬಳ್ಳಿ: ‘ದ್ಯಾವಪ್ಪನವರ ಕೊರವಿ ಸಿದ್ನಾಳ ಎಜುಕೇಷನ್ ಟ್ರಸ್ಟ್ನ ಚೇತನ್ ಬಿಸಿನೆಸ್ ಸ್ಕೂಲ್ ವತಿಯಿಂದ ಮೇ 14ರಿಂದ 16ರವರೆಗೆ ‘ಚಕ್ರವ್ಯೂಹ–2ಕೆ26’ ಮ್ಯಾನೇಜ್ಮೆಂಟ್ ಉತ್ಸವ ಹಮ್ಮಿಕೊಳ್ಳಲಾಗಿದೆ’ ಎಂದು ಸ್ಕೂಲ್ನ ನಿರ್ದೇಶಕ ವಿ.ಎಂ. ಕೊರವಿ ಹೇಳಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇ 14ರಂದು ಬೆಳಿಗ್ಗೆ 10 ಗಂಟೆಗೆ ಉದ್ಯಮಿ ವಿ.ಎಸ್.ವಿ. ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಕಾರ್ಯಾಧ್ಯಕ್ಷ ಜದಗೀಶ ದ್ಯಾವಪ್ಪನವರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.</p>.<p>‘25ಕ್ಕೂ ಹೆಚ್ಚು ಕಾಲೇಜುಗಳಿಂದ 180ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಿಬಿಎ, ಬಿ.ಕಾಂ, ಬಿ.ಎಸ್ಸಿ, ಬಿಸಿಎ, ಬಿಎ ವಿದ್ಯಾರ್ಥಿಗಳಿಗಾಗಿ ಫೈನಾನ್ಸ್, ಮಾರ್ಕೆಟಿಂಗ್, ಮಾನವ ಸಂಪನ್ಮೂಲ, ವಿಡಿಯೊಗ್ರಫಿ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗುವುದು’ ಎಂದು ಹೇಳಿದರು.</p>.<p>‘ಕೃತಕ ಬುದ್ಧಿಮತ್ತೆಯಿಂದಾಗಿ (ಎಐ) ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ವಿದ್ಯಾರ್ಥಿಗಳು ಕೌಶಲ ಕಲಿಯದಿದ್ದರೆ ಉದ್ಯೋಗ ಪಡೆಯುವಾಗ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಮ್ಯಾನೇಜ್ಮೆಂಟ್ ಕೌಶಲ, ಸಂವಹನ ಕೌಶಲ, ಎಐ ತಂತ್ರಜ್ಞಾನ ಕಲಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.</p>.<p>ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶ್ರೇಯಸ್ ಮುರುಡೇಶ್ವರ, ವಿದ್ಯಾರ್ಥಿಗಳಾದ ಕಾವೇರಿ, ಮೋಹಿತ್, ಆದಿತ್ಯಾ, ವರ್ಷಾ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-24-86800558</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ದ್ಯಾವಪ್ಪನವರ ಕೊರವಿ ಸಿದ್ನಾಳ ಎಜುಕೇಷನ್ ಟ್ರಸ್ಟ್ನ ಚೇತನ್ ಬಿಸಿನೆಸ್ ಸ್ಕೂಲ್ ವತಿಯಿಂದ ಮೇ 14ರಿಂದ 16ರವರೆಗೆ ‘ಚಕ್ರವ್ಯೂಹ–2ಕೆ26’ ಮ್ಯಾನೇಜ್ಮೆಂಟ್ ಉತ್ಸವ ಹಮ್ಮಿಕೊಳ್ಳಲಾಗಿದೆ’ ಎಂದು ಸ್ಕೂಲ್ನ ನಿರ್ದೇಶಕ ವಿ.ಎಂ. ಕೊರವಿ ಹೇಳಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇ 14ರಂದು ಬೆಳಿಗ್ಗೆ 10 ಗಂಟೆಗೆ ಉದ್ಯಮಿ ವಿ.ಎಸ್.ವಿ. ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಕಾರ್ಯಾಧ್ಯಕ್ಷ ಜದಗೀಶ ದ್ಯಾವಪ್ಪನವರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.</p>.<p>‘25ಕ್ಕೂ ಹೆಚ್ಚು ಕಾಲೇಜುಗಳಿಂದ 180ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಿಬಿಎ, ಬಿ.ಕಾಂ, ಬಿ.ಎಸ್ಸಿ, ಬಿಸಿಎ, ಬಿಎ ವಿದ್ಯಾರ್ಥಿಗಳಿಗಾಗಿ ಫೈನಾನ್ಸ್, ಮಾರ್ಕೆಟಿಂಗ್, ಮಾನವ ಸಂಪನ್ಮೂಲ, ವಿಡಿಯೊಗ್ರಫಿ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗುವುದು’ ಎಂದು ಹೇಳಿದರು.</p>.<p>‘ಕೃತಕ ಬುದ್ಧಿಮತ್ತೆಯಿಂದಾಗಿ (ಎಐ) ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ವಿದ್ಯಾರ್ಥಿಗಳು ಕೌಶಲ ಕಲಿಯದಿದ್ದರೆ ಉದ್ಯೋಗ ಪಡೆಯುವಾಗ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಮ್ಯಾನೇಜ್ಮೆಂಟ್ ಕೌಶಲ, ಸಂವಹನ ಕೌಶಲ, ಎಐ ತಂತ್ರಜ್ಞಾನ ಕಲಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.</p>.<p>ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶ್ರೇಯಸ್ ಮುರುಡೇಶ್ವರ, ವಿದ್ಯಾರ್ಥಿಗಳಾದ ಕಾವೇರಿ, ಮೋಹಿತ್, ಆದಿತ್ಯಾ, ವರ್ಷಾ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-24-86800558</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>