<p>ಹುಬ್ಬಳ್ಳಿ: ಇಲ್ಲಿನ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ (ಜೆಸಿಇಟಿ) ಎನ್ಎಸ್ಎಸ್ ವಿದ್ಯಾರ್ಥಿಗಳು ಉಣಕಲ್ ಪ್ರದೇಶದ ಕೊಕಟೆ ಹಾಗೂ ಐಜಿ ಹಿರೇಗೌಡರ್ ಸರ್ಕಾರಿ ಶಾಲೆ ಹಾಗೂ ಕಾಲೇಜಿನ ಪುನರುಜ್ಜೀವನ ಕಾರ್ಯ ಕೈಗೊಂಡರು.</p>.<p>‘ಯುವಶಕ್ತಿ ಕಾರ್ಯದಲ್ಲಿ’ ಎಂಬ ಘೋಷಣೆಯೊಂದಿಗೆ ವಿದ್ಯಾರ್ಥಿಗಳು ಶಾಲೆಯ ಪರಿಸರದಲ್ಲಿ ಬಣ್ಣ ಹಚ್ಚಿ, ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯ ನೆರವೇರಿಸಿದರು.</p>.<p>ಕಾರ್ಯಕ್ರಮಕ್ಕೆ ಪ್ರಾಂಶುಪಾಲ ಪ್ರಶಾಂತ್ ಬಣಕಾರ್ ಚಾಲನೆ ನೀಡಿದರು. ಐಜಿ ಹಿರೇಗೌಡರ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶಿವಾನಂದ ಹೆಬಸೂರ್, ಶಿವಣ್ಣ ಹಂಗರಕಿ, ಕೊಕಟೆ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಹಾಗೂ ಸಿಬ್ಬಂದಿ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-24-1051653289</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಇಲ್ಲಿನ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ (ಜೆಸಿಇಟಿ) ಎನ್ಎಸ್ಎಸ್ ವಿದ್ಯಾರ್ಥಿಗಳು ಉಣಕಲ್ ಪ್ರದೇಶದ ಕೊಕಟೆ ಹಾಗೂ ಐಜಿ ಹಿರೇಗೌಡರ್ ಸರ್ಕಾರಿ ಶಾಲೆ ಹಾಗೂ ಕಾಲೇಜಿನ ಪುನರುಜ್ಜೀವನ ಕಾರ್ಯ ಕೈಗೊಂಡರು.</p>.<p>‘ಯುವಶಕ್ತಿ ಕಾರ್ಯದಲ್ಲಿ’ ಎಂಬ ಘೋಷಣೆಯೊಂದಿಗೆ ವಿದ್ಯಾರ್ಥಿಗಳು ಶಾಲೆಯ ಪರಿಸರದಲ್ಲಿ ಬಣ್ಣ ಹಚ್ಚಿ, ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯ ನೆರವೇರಿಸಿದರು.</p>.<p>ಕಾರ್ಯಕ್ರಮಕ್ಕೆ ಪ್ರಾಂಶುಪಾಲ ಪ್ರಶಾಂತ್ ಬಣಕಾರ್ ಚಾಲನೆ ನೀಡಿದರು. ಐಜಿ ಹಿರೇಗೌಡರ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶಿವಾನಂದ ಹೆಬಸೂರ್, ಶಿವಣ್ಣ ಹಂಗರಕಿ, ಕೊಕಟೆ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಹಾಗೂ ಸಿಬ್ಬಂದಿ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-24-1051653289</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>