<p>ಹುಬ್ಬಳ್ಳಿ: ‘ವಿಶ್ವದಾದ್ಯಂತ ಸ್ಪರ್ಧಾತ್ಮಕತೆ ಹೆಚ್ಚಾಗುತ್ತಿದೆ. ಅಮೆರಿಕದಲ್ಲಿ ವಿದ್ಯಾರ್ಥಿಗಳು ಶಾಲಾ ಹಂತದಲ್ಲೇ ತಮ್ಮನ್ನು ಸ್ಪರ್ಧೆಗೆ ನವೀಕರಿಸಿಕೊಳ್ಳುವ ಗುಣ ಬೆಳೆಸಿಕೊಳ್ಳುತ್ತಾರೆ. ಹೀಗಾಗಿ, ವಿದ್ಯಾರ್ಥಿಗಳು ಸವಾಲು ಎದುರಿಸಲು ಸಿದ್ಧರಾಗಬೇಕು’ ಎಂದು ಉದ್ಯಮಿ ವಿ.ಎಸ್.ವಿ. ಪ್ರಸಾದ್ ಹೇಳಿದರು.</p>.<p>ನಗರದ ಚೇತನ್ ಬಿಸಿನೆಸ್ ಸ್ಕೂಲ್ನಿಂದ ಏರ್ಪಡಿಸಿದ ಮೂರು ದಿನಗಳ ‘ಮ್ಯಾನೇಜ್ಮೆಂಟ್ ಫೆಸ್ಟ್’ ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಸಮರ್ಪಣೆ ಹಾಗೂ ದೂರದೃಷ್ಟಿ ಅತ್ಯವಶ್ಯಕ. ಕೃತಕ ಬುದ್ಧಿಮತ್ತೆಯನ್ನು ಸದುಪಯೋಗಕ್ಕಾಗಿ ಬಳಸಿಕೊಳ್ಳುವುದುಸ್ವಾಗತಾರ್ಹ. ಆದರೆ, ಅದರ ಮೇಲೆ ಸಂಪೂರ್ಣ ಅವಲಂಬನೆ ಆಗುವುದು ಒಳ್ಳೆಯದಲ್ಲ’ ಎಂದು ತಿಳಿಸಿದರು.</p>.<p>ಅಮೆರಿಕದ ‘ಅರ್ಲಿ ವಾರ್ನಿಂಗ್ ಸರ್ವಿಸಸ್’ ಸಂಸ್ಥೆಯ ಉಪಾಧ್ಯಕ್ಷೆ ವಿಶ್ಲೇಷಾ ಪಾಟೀಲ ಮಾತನಾಡಿ, ‘ಇಂತಹ ಕಾರ್ಯಕ್ರಮಗಳಿಂದಾಗಿ ವಿದ್ಯಾರ್ಥಿಗಳಲ್ಲಿಸೃಜನಶೀಲತೆ, ವ್ಯಕ್ತಿತ್ವ ವಿಕಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಯಲು ಸಹಕಾರಿ ಆಗುತ್ತದೆ’ ಎಂದು ಹೇಳಿದರು.</p>.<p>ಹು–ಧಾ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮಾತನಾಡಿ, ‘ವಿದ್ಯಾರ್ಥಿಗಳು ನ್ಯಾಯ, ಗೌರವ, ಕ್ರೀಡಾ ಸ್ಫೂರ್ತಿಯಿಂದ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಸಂಯೋಜಕ ಪ್ರೊ.ಶ್ರೇಯಸ್ ಮುರ್ಡೇಶ್ವರ ಮಾತನಾಡಿದರು. ಪ್ರೊ. ರಾಮಕಾಂತ ಕುಲಕರ್ಣಿ ಅವರು ಸಂಸ್ಥೆಯ ಹಿನ್ನೆಲೆ ಮತ್ತು ಬೆಳವಣಿಗೆಯ ಕುರಿತು ವಿವರಿಸಿದರು.</p>.<p>ಪ್ರೊ. ಮಣಿಕ್ ಸ್ವಾಗತಿಸಿದರು. ಪ್ರೊ. ಶ್ರೇಯಸ್ ಮುರ್ಡೇಶ್ವರ, ಪ್ರೊ. ಮಂಗಳಾ ಯರಗಟ್ಟಿ ಅವರು ಅತಿಥಿಗಳ ಪರಿಚಯ ಮಾಡಿಕೊಟ್ಟರು. ಪ್ರೊ.ಅನಿರುದ್ಧ ಅಂಕೋಲೇಕರ್ ವಂದಿಸಿದರು. ವಿದ್ಯಾರ್ಥಿ ಸಂಯೋಜಕ ಕಾವೇರಿ ಕುಲಕರ್ಣಿ, ಮೋಹಿತ್ ಧರ್ಮದಾಸ್ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-24-856252241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ವಿಶ್ವದಾದ್ಯಂತ ಸ್ಪರ್ಧಾತ್ಮಕತೆ ಹೆಚ್ಚಾಗುತ್ತಿದೆ. ಅಮೆರಿಕದಲ್ಲಿ ವಿದ್ಯಾರ್ಥಿಗಳು ಶಾಲಾ ಹಂತದಲ್ಲೇ ತಮ್ಮನ್ನು ಸ್ಪರ್ಧೆಗೆ ನವೀಕರಿಸಿಕೊಳ್ಳುವ ಗುಣ ಬೆಳೆಸಿಕೊಳ್ಳುತ್ತಾರೆ. ಹೀಗಾಗಿ, ವಿದ್ಯಾರ್ಥಿಗಳು ಸವಾಲು ಎದುರಿಸಲು ಸಿದ್ಧರಾಗಬೇಕು’ ಎಂದು ಉದ್ಯಮಿ ವಿ.ಎಸ್.ವಿ. ಪ್ರಸಾದ್ ಹೇಳಿದರು.</p>.<p>ನಗರದ ಚೇತನ್ ಬಿಸಿನೆಸ್ ಸ್ಕೂಲ್ನಿಂದ ಏರ್ಪಡಿಸಿದ ಮೂರು ದಿನಗಳ ‘ಮ್ಯಾನೇಜ್ಮೆಂಟ್ ಫೆಸ್ಟ್’ ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಸಮರ್ಪಣೆ ಹಾಗೂ ದೂರದೃಷ್ಟಿ ಅತ್ಯವಶ್ಯಕ. ಕೃತಕ ಬುದ್ಧಿಮತ್ತೆಯನ್ನು ಸದುಪಯೋಗಕ್ಕಾಗಿ ಬಳಸಿಕೊಳ್ಳುವುದುಸ್ವಾಗತಾರ್ಹ. ಆದರೆ, ಅದರ ಮೇಲೆ ಸಂಪೂರ್ಣ ಅವಲಂಬನೆ ಆಗುವುದು ಒಳ್ಳೆಯದಲ್ಲ’ ಎಂದು ತಿಳಿಸಿದರು.</p>.<p>ಅಮೆರಿಕದ ‘ಅರ್ಲಿ ವಾರ್ನಿಂಗ್ ಸರ್ವಿಸಸ್’ ಸಂಸ್ಥೆಯ ಉಪಾಧ್ಯಕ್ಷೆ ವಿಶ್ಲೇಷಾ ಪಾಟೀಲ ಮಾತನಾಡಿ, ‘ಇಂತಹ ಕಾರ್ಯಕ್ರಮಗಳಿಂದಾಗಿ ವಿದ್ಯಾರ್ಥಿಗಳಲ್ಲಿಸೃಜನಶೀಲತೆ, ವ್ಯಕ್ತಿತ್ವ ವಿಕಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಯಲು ಸಹಕಾರಿ ಆಗುತ್ತದೆ’ ಎಂದು ಹೇಳಿದರು.</p>.<p>ಹು–ಧಾ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮಾತನಾಡಿ, ‘ವಿದ್ಯಾರ್ಥಿಗಳು ನ್ಯಾಯ, ಗೌರವ, ಕ್ರೀಡಾ ಸ್ಫೂರ್ತಿಯಿಂದ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಸಂಯೋಜಕ ಪ್ರೊ.ಶ್ರೇಯಸ್ ಮುರ್ಡೇಶ್ವರ ಮಾತನಾಡಿದರು. ಪ್ರೊ. ರಾಮಕಾಂತ ಕುಲಕರ್ಣಿ ಅವರು ಸಂಸ್ಥೆಯ ಹಿನ್ನೆಲೆ ಮತ್ತು ಬೆಳವಣಿಗೆಯ ಕುರಿತು ವಿವರಿಸಿದರು.</p>.<p>ಪ್ರೊ. ಮಣಿಕ್ ಸ್ವಾಗತಿಸಿದರು. ಪ್ರೊ. ಶ್ರೇಯಸ್ ಮುರ್ಡೇಶ್ವರ, ಪ್ರೊ. ಮಂಗಳಾ ಯರಗಟ್ಟಿ ಅವರು ಅತಿಥಿಗಳ ಪರಿಚಯ ಮಾಡಿಕೊಟ್ಟರು. ಪ್ರೊ.ಅನಿರುದ್ಧ ಅಂಕೋಲೇಕರ್ ವಂದಿಸಿದರು. ವಿದ್ಯಾರ್ಥಿ ಸಂಯೋಜಕ ಕಾವೇರಿ ಕುಲಕರ್ಣಿ, ಮೋಹಿತ್ ಧರ್ಮದಾಸ್ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-24-856252241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>